AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ಬೇಕಾದರೆ ಅವಳೇ ಸಂಪಾದಿಸಲಿ, 6 ಲಕ್ಷ ರೂ. ಜೀವನಾಂಶಬೇಕೆಂದ ಮಹಿಳೆಯನ್ನು ತರಾಟೆಗೆ ತೆಗೆದುಕೊಂಡ ಕರ್ನಾಟಕ ಹೈಕೋರ್ಟ್

ಇಲ್ಲೊಂದು ವಿಚಿತ್ರ ಪ್ರಕರಣವೊಂದು ನಡೆದಿದ್ದು, ಬ್ರಾಂಡೆಡ್ ಬಟ್ಟೆ, ಐಷಾರಾಮಿ ಜೀವನಕ್ಕಾಗಿ ಮಾಜಿ ಪತಿಯಿಂದ 6 ಲಕ್ಷ ರೂ. ಮಾಸಿಕ ನಿರ್ವಹಣೆಗೆ ಮಹಿಳೆ ಬೇಡಿಕೆಯಿಟ್ಟಿದ್ದು, ತಿಂಗಳಿಗೆ ಆರು ಲಕ್ಷ ನೀಡಲೇಬೇಕೆಂದು ಮಹಿಳೆಯ ಪರ ವಕೀಲರು ವಾದ ಮಂಡಿಸಿದ್ದಾರೆ. ವಾದವನ್ನು ಆಲಿಸಿದ ನ್ಯಾಯಾಧೀಶರು ಅವಳ ಖರ್ಚಿಗೆ ಹಣ ಬೇಕಾದರೆ ಅವಳೇ ಸಂಪಾದಿಸಲಿ, ಗಂಡನಿಂದ ಕೇಳೋದಲ್ಲ ಎಂದು ಮಹಿಳೆ ಮತ್ತು ಆಕೆಯ ಪರ ವಾದಿಸಿದ ವಕೀಲರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಖತ್ ವೈರಲ್ ಆಗುತ್ತಿದೆ.

ಹಣ ಬೇಕಾದರೆ ಅವಳೇ ಸಂಪಾದಿಸಲಿ, 6 ಲಕ್ಷ ರೂ. ಜೀವನಾಂಶಬೇಕೆಂದ ಮಹಿಳೆಯನ್ನು ತರಾಟೆಗೆ ತೆಗೆದುಕೊಂಡ ಕರ್ನಾಟಕ ಹೈಕೋರ್ಟ್
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Aug 22, 2024 | 11:42 AM

Share

ವಿಚ್ಛೇದನದ ಬಳಿಕ ಪತಿ ತನ್ನ ಮಾಜಿ ಪತ್ನಿಗೆ ಜೀವನ ಸಾಗಿಸಲು ಇಂತಿಷ್ಟು ಜೀವನಾಂಶ ನೀಡಲೇಬೇಕು. ಈ ಕಾನೂನುನನ್ನೇ ದುರುಪಯೋಗಪಡಿಸಿಕೊಂಡ ಮಹಿಳೆಯೊಬ್ಬಳು ಬ್ರಾಂಡೆಡ್ ಬಟ್ಟೆ, ಐಷಾರಾಮಿ ಜೀವನಕ್ಕಾಗಿ ಮಾಜಿ ಪತಿ ತಿಂಗಳಿಗೆ ರೂ 6 ಲಕ್ಷ ನೀಡಬೇಕೆಂದು ಬೇಡಿಕೆಯಿಟ್ಟಿದ್ದಾಳೆ. ಈ ಬಗ್ಗೆ ಕರ್ನಾಟಕ ಹೈಕೋರ್ಟ್ ನಲ್ಲಿ ಮಹಿಳೆಯ ಪರ ವಕೀಲರು ವಾದ ಮಂಡಿಸಿದ್ದು, ವಾದವನ್ನು ಆಲಿಸಿದ ನ್ಯಾಯಾಧೀಶರು ಅವಳ ಖರ್ಚಿಗೆ ಹಣ ಬೇಕಾದರೆ ಅವಳೇ ಸಂಪಾದಿಸಲಿ, ಗಂಡನಿಂದ ಕೇಳೋದಲ್ಲ ಎಂದು ಮಹಿಳೆ ಮತ್ತು ಆಕೆಯ ಪರ ವಾದಿಸಿದ ವಕೀಲರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಖತ್ ವೈರಲ್ ಆಗುತ್ತಿದೆ.

ವಿಚ್ಛೇದನ ಪ್ರಕ್ರಿಯೆಯ ಸಂದರ್ಭದಲ್ಲಿ ಮಹಿಳೆಯೊಬ್ಬರು ತನ್ನ ಮಾಜಿ ಪತಿಯಿಂದ ತಿಂಗಳಿಗೆ 6 ಲಕ್ಷ ರೂ ಜೀವನಾಂಶಕ್ಕಾಗಿ ಬೇಡಿಕೆ ಇಟ್ಟಿದ್ದನ್ನು ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರು ಪ್ರಶ್ನಿಸಿದ್ದಾರೆ. ನ್ಯಾಯಾಧೀಶರ ಈ ನಿರ್ಧಾರಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಮಹಿಳೆಯ ಪರ ವಾದ ಮಂದಿಸಿದ ವಕೀಲರು, ನನ್ನ ಕಕ್ಷಿದಾರರಿಗೆ ಅವರ ಮಾಜಿ ಪತಿ ತಿಂಗಳಿಗೆ 6 ಲಕ್ಷ ರೂ. ಜೀವನಾಂಶ ನೀಡಬೇಕು ಎಂದು ಹೇಳಿದ್ದಾರೆ. ಆಕೆಯ ಮೊಣಕಾಲು ನೋವಿನ ಚಿಕಿತ್ಸೆ, ಫಿಸಿಯೋಥೆರಪಿ , ಔಷಧಗಳು ಮತ್ತು ಇತರೆ ವೆಚ್ಚಗಳಿಗೆ ತಿಂಗಳಿಗೆ ₹ 4 ರಿಂದ 5 ಲಕ್ಷ ಬೇಕಾಗುತ್ತದೆ ಮತ್ತು ಬಳೆಗಳು, ಬ್ರಾಂಡೆಡ್ ಬಟ್ಟೆಗಳು, ಚಪ್ಪಲಿ ಇತ್ಯಾದಿ ಮೂಲಭೂತ ಅಗತ್ಯಗಳಿಗಾಗಿ 50 ಸಾವಿರ ಹಾಗೂ ಪೌಷ್ಟಿಕ ಆಹಾರಕ್ಕಾಗಿ 60 ಸಾವಿರ ಬೇಕಾಗುತ್ತದೆ. ಹೀಗೆ ಒಟ್ಟಾಗಿ ಪ್ರತಿ ತಿಂಗಳು 6,16,300ರೂ. ಮಾಸಿಕ ಜೀವನಾಂಶ ನೀಡಬೇಕು ಎಂದು ವಾದ ಮಂಡಿಸಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ: .

ವಾದವನ್ನು ಆಲಿಸಿದ ನ್ಯಾಯಾಧೀಶರು “ತಿಂಗಳಿಗೆ 6,16,300 ರೂ.? ಯಾರಾದರೂ ಇಷ್ಟು ಖರ್ಚು ಮಾಡುತ್ತಾರೆಯೇ? ಆಕೆ ಅಷ್ಟು ಹಣ ಖರ್ಚು ಮಾಡಲೇಬೇಕೆಂದು ಬಯಸಿದರೆ, ಅವಳೇ ಸಂಪಾದಿಸಲಿ. ಗಂಡನ ಮೇಲೆ ಏಕೆ ಅವಲಂಬಿತವಾಗಬೇಕು. ಆಕೆಗೆ ಕುಟುಂಬದ ಬೇರೆ ಯಾವುದೇ ಜವಾಬ್ದಾರಿ ಇಲ್ಲ. ಮಕ್ಕಳನ್ನು ನೋಡಿಕೊಳ್ಳಬೇಕಾಗಿಲ್ಲ. ಸ್ವಂತ ಖರ್ಚಿಗೆ ಇಷ್ಟು ಹಣ ಕೇಳುತ್ತಿದ್ದಾಳೆ. ನಿಜಕ್ಕೂ ಇದು ಅಸಮಂಜಸವಾಗಿದೆ. ಜೀವನಾಂಶವು ಯಾವುದೇ ಕಾರಣಕ್ಕೂ ಗಂಡನಿಗೆ ಶಿಕ್ಷೆಯಾಗಬಾರದು” ಎಂದು ಹೇಳಿ ನ್ಯಾಯಾಧೀಶರು ಜೀವನಾಂಶ ಕೋರಿ ಅರ್ಜಿ ಸಲ್ಲಿಸಿದ ಮಹಿಳೆ ಮತ್ತು ಆಕೆಯ ಪರ ವಾದಿಸಿದ ವಕೀಲರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ನಮ್ಮಪ್ಪನನ್ನು ಜೈಲಿಗೆ ಹಾಕಿ, ತಂದೆಯ ವಿರುದ್ಧ ದೂರು ನೀಡಲು ಠಾಣೆಗೆ ಬಂದ 5 ವರ್ಷದ ಬಾಲಕ

ಈ ಕುರಿತ ಪೋಸ್ಟ್ ಒಂದನ್ನು CeoVoice ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್ ವಿಡಿಯೋದಲ್ಲಿ ಅಷ್ಟು ಹಣ ಬೇಕಿದ್ರೆ ಆಕೆಯೇ ಸಂಪಾದನೆ ಮಾಡಲಿ ಎಂದು ಗಂಡನಿಂದ ತಿಂಗಳಿಗೆ 6 ಲಕ್ಷ ರೂ. ಜೀವನಾಂಶಕ್ಕೆ ಬೇಡಿಕೆಯಿಟ್ಟ ಮಹಿಳೆಯನ್ನು ತರಾಟೆಗೆ ತೆಗೆದುಕೊಂಡ ದೃಶ್ಯವನ್ನು ಕಾಣಬಹುದು.

ಆಗಸ್ಟ್ 21 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ‘ಈ ನ್ಯಾಯಾಧೀಶರಿಗೆ ನನ್ನ ನಮನಗಳು ಸರಿಯಾದ ಜಡ್ಜ್ಮೆಂಟ್ ಕೊಟ್ಟಿದ್ದಾರೆ’ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ‘ಇದ್ದರೆ ಇಂತಹ ನ್ಯಾಯಾಧೀಶರಿರಬೇಕು’ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!