AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್​ ಜಾಮ್​ಗೆ ಬೇಸತ್ತು ಪೊಲೀಸರಿಗೆ ದೂರು ನೀಡಿದ 6 ವರ್ಷದ ಬಾಲಕ: ವಿಡಿಯೋ ವೈರಲ್​

ಇಲ್ಲೊಬ್ಬ 6 ವರ್ಷದ ಬಾಲಕ ಟ್ರಾಫಿಕ್​ ಜಾಮ್​ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾನೆ. ಸದ್ಯ ಈ ವಿಚಾರ ಎಲ್ಲೆಡೆ ವೈರಲ್​ ಆಗಿದೆ.

ಟ್ರಾಫಿಕ್​ ಜಾಮ್​ಗೆ ಬೇಸತ್ತು ಪೊಲೀಸರಿಗೆ ದೂರು ನೀಡಿದ 6 ವರ್ಷದ ಬಾಲಕ: ವಿಡಿಯೋ ವೈರಲ್​
ದೂರು ನೀಡಿದ ಬಾಲಕ
TV9 Web
| Edited By: |

Updated on: Mar 21, 2022 | 4:11 PM

Share

ನಗರಗಳಲ್ಲಿ ಜನರನ್ನು ಕಾಡುವ ಅತಿದೊಡ್ಡ ಸಮಸ್ಯೆ ಎಂದರೆ ಅದು ಟ್ರಾಫಿಕ್​ ಜಾಮ್ (Traffic Jam) . ಎಲ್ಲಿಗಾದರೂ ಹೋಗಬೇಕೆಂದರೆ  ಒಂದು ಗಂಟೆ ಮೊದಲೆ ಹೊರಡಬೇಕಪ್ಪಾ ಇಲ್ಲಾಂದ್ರೆ ಟ್ರಾಫಿಕ್​ ಜಾಮ್​ನಲ್ಲಿ ಸಿಕಾಕೊಳ್ಬೇಕು ಎನ್ನುವುದನ್ನು ಕೇಳಿದ್ದೇವೆ. ಈ ಸಮಸ್ಯೆಗೆ ಯಾರಿಗೆ ದೂರು ನೀಡಿದರೂ ಬಗೆಹರೆಯದ ಸಮಸ್ಯೆ ಎಂದು ಎಲ್ಲರಿಗೂ ಗೊತ್ತು. ದೊಡ್ಡವರಿಂದ ಹಿಡಿದು ಚಿಕ್ಕವರ ವರೆಗೂ ಕಿರಿಕಿರಿ ಉಂಟುಮಾಡುತ್ತದೆ ಈ ಟ್ರಾಫಿಕ್​ ಜಾಮ್​ ಸಮಸ್ಯೆ. ಇಲ್ಲೊಬ್ಬ 6 ವರ್ಷದ ಬಾಲಕ (6 year Old Boy) ಟ್ರಾಫಿಕ್​ ಜಾಮ್​ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾನೆ. ಸದ್ಯ ಈ ವಿಚಾರ ಎಲ್ಲೆಡೆ ವೈರಲ್​ ಆಗಿದೆ. ಆಂಧ್ರಪ್ರದೇಶದ ತನ್ನ ಶಾಲೆಯ ಬಳಿ ಟ್ರಾಫಿಕ್ ದಟ್ಟಣೆಯಿಂದ ತುಂಬಾ ತೊಂದರೆಗೀಡಾದ ಬಾಲಕ ಹತಾಶೆಯನ್ನು ಹೊರಹಾಕಲು ಪೊಲೀಸ್ ಠಾಣೆಗೆ (Police Station) ಹೋದನು. ಟ್ರಾಫಿಕ್ ಸಮಸ್ಯೆಗಳ ಬಗ್ಗೆ ಬಾಲಕ ಪೊಲೀಸ್ ಅಧಿಕಾರಿಯನ್ನು ಪ್ರಶ್ನಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಯುಕೆಜಿ ವಿದ್ಯಾರ್ಥಿ ಗುರುವಾರ ಚಿತ್ತೂರು ಜಿಲ್ಲೆಯ ಪಲಮನೇರ್‌ನಲ್ಲಿರುವ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದನು. ಡ್ರೈನೇಜ್ ಕಾಮಗಾರಿ ಹಾಗೂ ಟ್ರ್ಯಾಕ್ಟರ್ ಗಳಿಂದ ಅಗೆದ ರಸ್ತೆಗಳು ಸಂಚಾರಕ್ಕೆ ಕಾರಣವಾಗುತ್ತಿದೆ ಎಂದು ಕಾರ್ತಿಕ್ ಎಂಬ ಬಾಲಕ ಪಲಮನೇರ್ ವೃತ್ತ ನಿರೀಕ್ಷಕ ಎನ್.ಭಾಸ್ಕರ್ ಅವರಿಗೆ ತಿಳಿಸಿದ್ದಾನೆ. ಈ ಸಮಸ್ಯೆಗಳ ಪರಿಹಾರಕ್ಕೆ ಸ್ಥಳಕ್ಕೆ ಭೇಟಿ ನೀಡುವಂತೆ ಅಧಿಕಾರಿಗೆ ಸೂಚಿಸಿದ್ದು, ಹುಡುಗನ ಮುಗ್ಧತೆ ಮತ್ತು ಆತ್ಮವಿಶ್ವಾಸವು ಪೊಲೀಸ್ ಅಧಿಕಾರಿಗಳನ್ನು ಮೆಚ್ಚಿಕೊಂಡಿದ್ದಾರೆ. ಈ ವೇಳೆ ಅವನಿಗೆ ಸಿಹಿತಿಂಡಿಗಳನ್ನು ನೀಡಿದರು ಮತ್ತು ವಿಷಯವನ್ನು ಪರಿಶೀಲಿಸುವುದಾಗಿ ಭರವಸೆ ನೀಡಿದರು. ಎನ್ ಭಾಸ್ಕರ್ ಅವರು ತಮ್ಮ ಫೋನ್ ಸಂಖ್ಯೆಯನ್ನು ಸಹ ನೀಡಿ ಶಾಲೆಗೆ ಹೋಗುವಾಗ ಅಂತಹ ಸಮಸ್ಯೆಗಳನ್ನು ಎದುರಿಸಿದಾಗ ಅವರಿಗೆ ಕರೆ ಮಾಡಲು ಹೇಳಿದ್ದಾರೆ.

ಬಾಲಕ ಮತ್ತು ಪೊಲೀಸ್​ ಅಧಿಕಾರಿಗಳ ನಡುವಿನ ಸಂಭಾಷಣೆ ವಿಡಿಯೋವನ್ನು  ಶ್ರೀಲಕ್ಷ್ಮಿ ಮುತ್ತೇವಿ  ಡನ್ನುವವರು ಹಂಚಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದು, ಬಾಲಕನ ಧೈರ್ಯಕ್ಕೆ ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಬಳಕೆದಾರರೊಬ್ಬರು ಮಕ್ಕಳೂ ಕೂಡ ಜವಾಬ್ದಾರರಾಗುತ್ತಿದ್ದಾರೆ ಎಂದು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

ಬೀದಿ ಬದಿಯಲ್ಲಿದ್ದ ನಿರ್ಗತಿಕ ವ್ಯಕ್ತಿಯನ್ನು ಮದುವೆಯಾದ ಮಹಿಳೆ: ಇವರ ಸಿಂಪಲ್​ ಲವ್​ ಸ್ಟೋರಿ ಈಗ ಸಖತ್​ ವೈರಲ್​

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ