AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCTV Footage: ಸೈಕಲ್​​ಗೆ ಡಿಕ್ಕಿ ಹೊಡೆದ ಬಸ್​​​; ವೃದ್ಧ ಸ್ಥಳದಲ್ಲೇ ಸಾವು, ಸಿಸಿಟಿವಿಯಲ್ಲಿ ಸೆರೆ

ಸೈಕಲ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದಿದ್ದು, ನೆಲಕ್ಕೆ ಬಿದ್ದ ವ್ಯಕ್ತಿಯ ತಲೆಯ ಮೇಲಿಂದ ಬಸ್​​​​ ಚಕ್ರ ಹರಿದಿದೆ. ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

CCTV Footage: ಸೈಕಲ್​​ಗೆ ಡಿಕ್ಕಿ ಹೊಡೆದ ಬಸ್​​​; ವೃದ್ಧ ಸ್ಥಳದಲ್ಲೇ ಸಾವು, ಸಿಸಿಟಿವಿಯಲ್ಲಿ ಸೆರೆ
ಅಕ್ಷತಾ ವರ್ಕಾಡಿ
|

Updated on: Jul 09, 2024 | 11:56 AM

Share

ಮಹಾರಾಷ್ಟ್ರ: ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದ ಪುಣೆ ಪೋರ್ಷೆ ಕಾರು ಅಪಘಾತದ ನಂತರ, ಇದೀಗ ಅಂತಹುದೇ ಹಿಟ್​ ರನ್​​​ ಕೇಸ್​​​ ನಾಗ್ಪುರದಲ್ಲಿ ನಡೆದಿದೆ. ಅಪಘಾತದ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ. ವೇಗವಾಗಿ ಬಂದ ಬಸ್ಸೊಂದು ಸೈಕಲ್​​​ನಲ್ಲಿ ಹೋಗುತ್ತಿದ್ದ ವೃದ್ಧರೊಬ್ಬರಿಗೆ ಡಿಕ್ಕಿ ಹೊಡೆದಿದೆ. ಬಸ್​​ ಡಿಕ್ಕಿ ಹೊಡೆದ ರಭಸಕ್ಕೆ ವೃದ್ಧ ರಸ್ತೆಗೆ ಬಿದ್ದು, ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

60 ವರ್ಷದ ವ್ಯಕ್ತಿ ಸೈಕಲ್ ನಲ್ಲಿ ಹೋಗುತ್ತಿದ್ದಾಗ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದಿದೆ. ರಭಸಕ್ಕೆ ವ್ಯಕ್ತಿ ಕೆಳಗೆ ಬಿದ್ದಿದ್ದಾನೆ. ಪರಿಣಾಮ ವ್ಯಕ್ತಿಯ ತಲೆಯ ಮೇಲಿಂದ ಬಸ್​​​​ ಚಕ್ರ ಹರಿದು ಹೋಗಿದೆ. ಗಾಯಗೊಂಡ ವ್ಯಕ್ತಿಯನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅಷ್ಟೊತ್ತಿಗಾಗಲೇ ತಡವಾಗಿದ್ದು, ವ್ಯಕ್ತಿ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಪೊಲೀಸರು ಈ ಬಸ್ ಅನ್ನು ಗುರುತಿಸಿದ್ದು, ಬಸ್ ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: 8,000 ಕಿಮೀ ದೂರದಿಂದ ರೋಗಿಗೆ ರೋಬೋಟಿಕ್ ಸರ್ಜರಿ ಮಾಡಿದ ವೈದ್ಯರು

@Vershasingh26 ಎಂಬ ಹೆಸರಿನ ಟ್ವಿಟರ್​​ ಖಾತೆಯಲ್ಲಿ ಈ ಅಪಘಾತದ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ವಿಡಿಯೋದಲ್ಲಿ ಬಸ್​​ ಡಿಕ್ಕಿ ಹೊಡೆದ ರಭಸಕ್ಕೆ ವೃದ್ಧ ರಸ್ತೆಗೆ ಬಿದ್ದರುವ ದೃಶ್ಯ ಸೆರೆಯಾಗಿದೆ. ಈ ಆಘಾತಕಾರಿ ವಿಡಿಯೋ ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ