ಚಾಕೊಲೇಟ್ ನೀಡುವೇ ಬಾ ಎಂದು ಕರೆದು 7 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮೌಲ್ವಿ

ಆರೋಪಿ ಮೌಲಾನಾ ಮುಖ್ತಾರ್ 7 ವರ್ಷದ ಬಾಲಕಿಗೆ ಚಾಕೊಲೇಟ್‌ ಕೊಡಿಸುವುದಾಗಿ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಆತನೊಂದಿಗೆ ಬಾಲಕಿ ಹೋಗುವುದನ್ನು ಸ್ಥಳೀಯರೊಬ್ಬರು ನೋಡಿದ್ದು, ಅನುಮಾನ ಬಂದು ಹಿಂಬಾಲಿಸಿಕೊಂಡು ಹೋಗಿದ್ದಾರೆ. ಬಳಿಕ ಮನೆಯ ಕಿಟಕಿಯಿಂದ ಒಳಗಿನ ದೃಶ್ಯವನ್ನು ನೋಡಿ ಆಘಾತಕ್ಕೊಳಗಾಗಿದ್ದಾರೆ.

ಚಾಕೊಲೇಟ್ ನೀಡುವೇ ಬಾ ಎಂದು ಕರೆದು 7 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮೌಲ್ವಿ
Follow us
|

Updated on: Aug 13, 2024 | 11:05 AM

ಉತ್ತರಪ್ರದೇಶ: 7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಲು ಯತ್ನಿಸುತ್ತಿದ್ದಾಗ 70 ವರ್ಷದ ಧರ್ಮಗುರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದ ಮಕ್ಬರಾದಲ್ಲಿ ನಡೆದಿದೆ. ಆಗಸ್ಟ್ 9 ರ ಶುಕ್ರವಾರದಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮಗುವಿಗೆ ಚಾಕೊಲೇಟ್ ಕೊಡಿಸುವುದಾಗಿ ಆಮಿಷ ಒಡ್ಡಿ ಬಾಲಕಿಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿದ್ದು, ವಿಷಯ ತಿಳಿದ ಜನರು ಬಾಲಕಿಯನ್ನು ಆತನಿಂದ ರಕ್ಷಿಸಿದ್ದಾರೆ.

ಎಬಿಪಿ ವರದಿಯ ಪ್ರಕಾರ, ಮಕ್ಬರಾ ಪ್ರದೇಶದಲ್ಲಿ ವಾಸಿಸುವ ಆರೋಪಿ ಮೌಲಾನಾ ಮುಖ್ತಾರ್ ಎಂಬಾತ ಹಲವು ವರ್ಷಗಳಿಂದ ಧರ್ಮಗುರುವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇತ್ತೀಚಿಗಷ್ಟೇ ನೆರೆಮನೆಯ ಏಳು ವರ್ಷದ ಮುಗ್ಧ ಬಾಲಕಿಗೆ ಚಾಕೊಲೇಟ್‌ ಕೊಡಿಸುವುದಾಗಿ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಬಳಿಕ ಅಮಾನವೀಯ ಕೃತ್ಯಕ್ಕೆ ಯತ್ನಿಸಿದ್ದಾನೆ.

ಧರ್ಮಗುರುವಿನೊಂದಿಗೆ ಬಾಲಕಿ ಮನೆಗೆ ಹೋಗುವುದನ್ನು ಸ್ಥಳೀಯರೊಬ್ಬರು ನೋಡಿದ್ದು, ಅನುಮಾನ ಬಂದು ಹಿಂಬಾಲಿಸಿಕೊಂಡು ಹೋಗಿದ್ದಾರೆ. ಬಳಿಕ ಅವನು ಕಿಟಕಿಯಿಂದ ಒಳಗಿನ ದೃಶ್ಯವನ್ನು ನೋಡಿ ಆಘಾತಕ್ಕೊಳಗಾಗಿ ಆರೋಪಿಯ ಕೊಳಕು ಕೃತ್ಯವನ್ನು ತನ್ನ ಮೊಬೈಲ್ ಕ್ಯಾಮರಾದಲ್ಲಿ ರೆಕಾರ್ಡ್ ಮಾಡಿ ಸ್ಥಳೀಯ ಜನರನ್ನು ಕರೆಸಿ ಆತನ ಹೀನಾ ಕೃತ್ಯವನ್ನು ಬಯಲಿಗೆಳೆದಿದ್ದಾನೆ. ಸ್ಥಳೀಯರು ಆತನನ್ನು ಬೆತ್ತಲೆ ಸ್ಥಿತಿಯಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿದು ಮನಬಂದಂತೆ ಥಳಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಪುರುಷರೇ ಇಲ್ಲಿನ ಕಾಗೆಗಳ ಟಾರ್ಗೆಟ್, ಹೋಗೋ-ಬರೋ ಗಂಡಸ್ರ ತಲೆಗೆ ಈ ಕಾಗಕ್ಕಗಳು ಹೇಗೆ ಕುಕ್ಕುತ್ತವೆ ನೋಡಿ

ಪೊಲೀಸರು ಸ್ಥಳಕ್ಕೆ ಬರುವಷ್ಟರಲ್ಲಿ ಆರೋಪಿ ತನ್ನ ಮನೆಯ ಹಿಂಬಾಗಿಲಿನಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕಾಗಮಿಸಿದ ಪೊಲೀಸರು ಮತ್ತು ಅಧಿಕಾರಿಗಳು ಹಲವು ತಂಡಗಳನ್ನು ರಚಿಸಿ ತಲೆಮರೆಸಿಕೊಂಡಿರುವ ಧರ್ಮಗುರುಗಳ ಹುಡುಕಾಟ ನಡೆಸಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ