AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಕೊಲೇಟ್ ನೀಡುವೇ ಬಾ ಎಂದು ಕರೆದು 7 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮೌಲ್ವಿ

ಆರೋಪಿ ಮೌಲಾನಾ ಮುಖ್ತಾರ್ 7 ವರ್ಷದ ಬಾಲಕಿಗೆ ಚಾಕೊಲೇಟ್‌ ಕೊಡಿಸುವುದಾಗಿ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಆತನೊಂದಿಗೆ ಬಾಲಕಿ ಹೋಗುವುದನ್ನು ಸ್ಥಳೀಯರೊಬ್ಬರು ನೋಡಿದ್ದು, ಅನುಮಾನ ಬಂದು ಹಿಂಬಾಲಿಸಿಕೊಂಡು ಹೋಗಿದ್ದಾರೆ. ಬಳಿಕ ಮನೆಯ ಕಿಟಕಿಯಿಂದ ಒಳಗಿನ ದೃಶ್ಯವನ್ನು ನೋಡಿ ಆಘಾತಕ್ಕೊಳಗಾಗಿದ್ದಾರೆ.

ಚಾಕೊಲೇಟ್ ನೀಡುವೇ ಬಾ ಎಂದು ಕರೆದು 7 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮೌಲ್ವಿ
ಅಕ್ಷತಾ ವರ್ಕಾಡಿ
|

Updated on: Aug 13, 2024 | 11:05 AM

Share

ಉತ್ತರಪ್ರದೇಶ: 7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಲು ಯತ್ನಿಸುತ್ತಿದ್ದಾಗ 70 ವರ್ಷದ ಧರ್ಮಗುರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದ ಮಕ್ಬರಾದಲ್ಲಿ ನಡೆದಿದೆ. ಆಗಸ್ಟ್ 9 ರ ಶುಕ್ರವಾರದಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮಗುವಿಗೆ ಚಾಕೊಲೇಟ್ ಕೊಡಿಸುವುದಾಗಿ ಆಮಿಷ ಒಡ್ಡಿ ಬಾಲಕಿಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿದ್ದು, ವಿಷಯ ತಿಳಿದ ಜನರು ಬಾಲಕಿಯನ್ನು ಆತನಿಂದ ರಕ್ಷಿಸಿದ್ದಾರೆ.

ಎಬಿಪಿ ವರದಿಯ ಪ್ರಕಾರ, ಮಕ್ಬರಾ ಪ್ರದೇಶದಲ್ಲಿ ವಾಸಿಸುವ ಆರೋಪಿ ಮೌಲಾನಾ ಮುಖ್ತಾರ್ ಎಂಬಾತ ಹಲವು ವರ್ಷಗಳಿಂದ ಧರ್ಮಗುರುವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇತ್ತೀಚಿಗಷ್ಟೇ ನೆರೆಮನೆಯ ಏಳು ವರ್ಷದ ಮುಗ್ಧ ಬಾಲಕಿಗೆ ಚಾಕೊಲೇಟ್‌ ಕೊಡಿಸುವುದಾಗಿ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಬಳಿಕ ಅಮಾನವೀಯ ಕೃತ್ಯಕ್ಕೆ ಯತ್ನಿಸಿದ್ದಾನೆ.

ಧರ್ಮಗುರುವಿನೊಂದಿಗೆ ಬಾಲಕಿ ಮನೆಗೆ ಹೋಗುವುದನ್ನು ಸ್ಥಳೀಯರೊಬ್ಬರು ನೋಡಿದ್ದು, ಅನುಮಾನ ಬಂದು ಹಿಂಬಾಲಿಸಿಕೊಂಡು ಹೋಗಿದ್ದಾರೆ. ಬಳಿಕ ಅವನು ಕಿಟಕಿಯಿಂದ ಒಳಗಿನ ದೃಶ್ಯವನ್ನು ನೋಡಿ ಆಘಾತಕ್ಕೊಳಗಾಗಿ ಆರೋಪಿಯ ಕೊಳಕು ಕೃತ್ಯವನ್ನು ತನ್ನ ಮೊಬೈಲ್ ಕ್ಯಾಮರಾದಲ್ಲಿ ರೆಕಾರ್ಡ್ ಮಾಡಿ ಸ್ಥಳೀಯ ಜನರನ್ನು ಕರೆಸಿ ಆತನ ಹೀನಾ ಕೃತ್ಯವನ್ನು ಬಯಲಿಗೆಳೆದಿದ್ದಾನೆ. ಸ್ಥಳೀಯರು ಆತನನ್ನು ಬೆತ್ತಲೆ ಸ್ಥಿತಿಯಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿದು ಮನಬಂದಂತೆ ಥಳಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಪುರುಷರೇ ಇಲ್ಲಿನ ಕಾಗೆಗಳ ಟಾರ್ಗೆಟ್, ಹೋಗೋ-ಬರೋ ಗಂಡಸ್ರ ತಲೆಗೆ ಈ ಕಾಗಕ್ಕಗಳು ಹೇಗೆ ಕುಕ್ಕುತ್ತವೆ ನೋಡಿ

ಪೊಲೀಸರು ಸ್ಥಳಕ್ಕೆ ಬರುವಷ್ಟರಲ್ಲಿ ಆರೋಪಿ ತನ್ನ ಮನೆಯ ಹಿಂಬಾಗಿಲಿನಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕಾಗಮಿಸಿದ ಪೊಲೀಸರು ಮತ್ತು ಅಧಿಕಾರಿಗಳು ಹಲವು ತಂಡಗಳನ್ನು ರಚಿಸಿ ತಲೆಮರೆಸಿಕೊಂಡಿರುವ ಧರ್ಮಗುರುಗಳ ಹುಡುಕಾಟ ನಡೆಸಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!