AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಕೊಲೇಟ್ ನೀಡುವೇ ಬಾ ಎಂದು ಕರೆದು 7 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮೌಲ್ವಿ

ಆರೋಪಿ ಮೌಲಾನಾ ಮುಖ್ತಾರ್ 7 ವರ್ಷದ ಬಾಲಕಿಗೆ ಚಾಕೊಲೇಟ್‌ ಕೊಡಿಸುವುದಾಗಿ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಆತನೊಂದಿಗೆ ಬಾಲಕಿ ಹೋಗುವುದನ್ನು ಸ್ಥಳೀಯರೊಬ್ಬರು ನೋಡಿದ್ದು, ಅನುಮಾನ ಬಂದು ಹಿಂಬಾಲಿಸಿಕೊಂಡು ಹೋಗಿದ್ದಾರೆ. ಬಳಿಕ ಮನೆಯ ಕಿಟಕಿಯಿಂದ ಒಳಗಿನ ದೃಶ್ಯವನ್ನು ನೋಡಿ ಆಘಾತಕ್ಕೊಳಗಾಗಿದ್ದಾರೆ.

ಚಾಕೊಲೇಟ್ ನೀಡುವೇ ಬಾ ಎಂದು ಕರೆದು 7 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮೌಲ್ವಿ
ಅಕ್ಷತಾ ವರ್ಕಾಡಿ
|

Updated on: Aug 13, 2024 | 11:05 AM

Share

ಉತ್ತರಪ್ರದೇಶ: 7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಲು ಯತ್ನಿಸುತ್ತಿದ್ದಾಗ 70 ವರ್ಷದ ಧರ್ಮಗುರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದ ಮಕ್ಬರಾದಲ್ಲಿ ನಡೆದಿದೆ. ಆಗಸ್ಟ್ 9 ರ ಶುಕ್ರವಾರದಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮಗುವಿಗೆ ಚಾಕೊಲೇಟ್ ಕೊಡಿಸುವುದಾಗಿ ಆಮಿಷ ಒಡ್ಡಿ ಬಾಲಕಿಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿದ್ದು, ವಿಷಯ ತಿಳಿದ ಜನರು ಬಾಲಕಿಯನ್ನು ಆತನಿಂದ ರಕ್ಷಿಸಿದ್ದಾರೆ.

ಎಬಿಪಿ ವರದಿಯ ಪ್ರಕಾರ, ಮಕ್ಬರಾ ಪ್ರದೇಶದಲ್ಲಿ ವಾಸಿಸುವ ಆರೋಪಿ ಮೌಲಾನಾ ಮುಖ್ತಾರ್ ಎಂಬಾತ ಹಲವು ವರ್ಷಗಳಿಂದ ಧರ್ಮಗುರುವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇತ್ತೀಚಿಗಷ್ಟೇ ನೆರೆಮನೆಯ ಏಳು ವರ್ಷದ ಮುಗ್ಧ ಬಾಲಕಿಗೆ ಚಾಕೊಲೇಟ್‌ ಕೊಡಿಸುವುದಾಗಿ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಬಳಿಕ ಅಮಾನವೀಯ ಕೃತ್ಯಕ್ಕೆ ಯತ್ನಿಸಿದ್ದಾನೆ.

ಧರ್ಮಗುರುವಿನೊಂದಿಗೆ ಬಾಲಕಿ ಮನೆಗೆ ಹೋಗುವುದನ್ನು ಸ್ಥಳೀಯರೊಬ್ಬರು ನೋಡಿದ್ದು, ಅನುಮಾನ ಬಂದು ಹಿಂಬಾಲಿಸಿಕೊಂಡು ಹೋಗಿದ್ದಾರೆ. ಬಳಿಕ ಅವನು ಕಿಟಕಿಯಿಂದ ಒಳಗಿನ ದೃಶ್ಯವನ್ನು ನೋಡಿ ಆಘಾತಕ್ಕೊಳಗಾಗಿ ಆರೋಪಿಯ ಕೊಳಕು ಕೃತ್ಯವನ್ನು ತನ್ನ ಮೊಬೈಲ್ ಕ್ಯಾಮರಾದಲ್ಲಿ ರೆಕಾರ್ಡ್ ಮಾಡಿ ಸ್ಥಳೀಯ ಜನರನ್ನು ಕರೆಸಿ ಆತನ ಹೀನಾ ಕೃತ್ಯವನ್ನು ಬಯಲಿಗೆಳೆದಿದ್ದಾನೆ. ಸ್ಥಳೀಯರು ಆತನನ್ನು ಬೆತ್ತಲೆ ಸ್ಥಿತಿಯಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿದು ಮನಬಂದಂತೆ ಥಳಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಪುರುಷರೇ ಇಲ್ಲಿನ ಕಾಗೆಗಳ ಟಾರ್ಗೆಟ್, ಹೋಗೋ-ಬರೋ ಗಂಡಸ್ರ ತಲೆಗೆ ಈ ಕಾಗಕ್ಕಗಳು ಹೇಗೆ ಕುಕ್ಕುತ್ತವೆ ನೋಡಿ

ಪೊಲೀಸರು ಸ್ಥಳಕ್ಕೆ ಬರುವಷ್ಟರಲ್ಲಿ ಆರೋಪಿ ತನ್ನ ಮನೆಯ ಹಿಂಬಾಗಿಲಿನಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕಾಗಮಿಸಿದ ಪೊಲೀಸರು ಮತ್ತು ಅಧಿಕಾರಿಗಳು ಹಲವು ತಂಡಗಳನ್ನು ರಚಿಸಿ ತಲೆಮರೆಸಿಕೊಂಡಿರುವ ಧರ್ಮಗುರುಗಳ ಹುಡುಕಾಟ ನಡೆಸಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ