AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: 70 ಹರೆಯದ ಮುದುಕನನ್ನು ಮದುವೆಯಾದ 20ರ ತರುಣಿ

ಇತ್ತೀಚಿಗೆ 20, 25 ವರ್ಷ ವಯಸ್ಸಿನ ಯುವತಿಯರು ಹಣ್ಣು ಹಣ್ಣು ಮುದುಕರನ್ನು ಮದುವೆಯಾಗುವ ಟ್ರೆಂಡ್‌ ಒಂದು ಹುಟ್ಟಿಕೊಂಡಿದೆ. ಹೌದು ಈ ಹಿಂದೆಯೂ ಚೆಂದುಳ್ಳಿ ಚೆಲುವೆಯರು ತಮ್ಮ ತಾತನ ವಯಸ್ಸಿನ ವ್ಯಕ್ತಿಗಳನ್ನು ಮದುವೆಯಾಗುವ ಸುದ್ದಿಗಳು ವೈರಲ್‌ ಆಗಿದ್ದವು. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, 20 ರ ತರುಣಿಯೊಬ್ಬರು 70 ವರ್ಷದ ಹಣ್ಣು ಮುದುಕನನ್ನು ಮದುವೆಯಾಗಿದ್ದಾಳೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

Viral: 70 ಹರೆಯದ ಮುದುಕನನ್ನು ಮದುವೆಯಾದ 20ರ ತರುಣಿ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on:Sep 27, 2024 | 2:50 PM

Share

ಪ್ರತಿಯೊಬ್ಬ ಹೆಣ್ಣು ಕೂಡಾ ನನ್ನನ್ನು ಮದುವೆಯಾಗುವ ಗಂಡು ಹಾಗಿರಬೇಕು, ಹೀಗಿರಬೇಕು ಎಂದೆಲ್ಲಾ ಬಯಸುತ್ತಾಳೆ. ತನ್ನ ಬಯಕೆಗೆ ತಕ್ಕಂತೆ ವಯಸ್ಸಿನಲ್ಲಿ ತನಗಿಂತ 5-6 ವರ್ಷ ದೊಡ್ಡವವನ್ನು ಮದುವೆಯಾಗುತ್ತಾರೆ. ಆದ್ರೆ ಈಗ 20, 25 ವರ್ಷ ವರ್ಷ ಯುವತಿಯರು ತಮ್ಮ ತಾತನ ವಯಸ್ಸಿನ ವ್ಯಕ್ತಿಯನ್ನು ಮದುವೆಯಾಗುವ ಟ್ರೆಂಡ್‌ ಒಂದು ಹುಟ್ಟಿಕೊಂಡಿದೆ. ಈ ಹಿಂದೆಯೂ ಇಂತಹ ಸಾಕಷ್ಟು ಘಟನೆಗಳ ಸುದ್ದಿಗಳು ವೈರಲ್‌ ಆಗಿದ್ದವು. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, 20 ರ ತರುಣಿಯೊಬ್ಬರು 70 ವರ್ಷದ ಹಣ್ಣು ಮುದುಕನನ್ನು ಮದುವೆಯಾಗಿದ್ದಾಳೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಈ ದೃಶ್ಯ ನೋಡಿ ನಾವುಗಳು ಮಠ ಸೇರೋದೇ ಬೆಸ್ಟು ಎಂದಿದ್ದಾರೆ ಯುವಕರು.

ಈ ಕುರಿತ ವಿಡಿಯೋವನ್ನು Gulzar_sahab ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಚೆಂದುಳ್ಳಿ ಚೆಲುವೆಯೊಬ್ಬಳು 70 ರ ಹರೆಯದ ಮುದುಕನನ್ನು ಮದುವೆಯಾಗುವ ದೃಶ್ಯವನ್ನು ಕಾಣಬಹುದು. ಕುಟುಂಬಸ್ಥರ ಸಮ್ಮಖದಲ್ಲಿ ನಡೆದ ಈ ಮದುವೆಯಲ್ಲಿ ಮುದುಕ ಯುವತಿಯ ಕುತ್ತಿಗೆಗೆ ಹೂವಿನ ಹಾರ ಹಾಕುತ್ತಿದ್ದಂತೆ ಬಹಳ ಖುಷಿ ಖುಷಿಯಿಂದ ಯುವತಿಯು ಸಹ ಮುದುಕನಿಗೆ ಹಾರ ಬದಲಾಯಿಸಿದ್ದಾಳೆ.

ಇದನ್ನೂ ಓದಿ: ಚೆಸ್‌ ಒಲಿಂಪಿಯಾಡ್‌ನಲ್ಲಿ ಭಾರತದ ಧ್ವಜ ಹಿಡಿದು ಸಂಭ್ರಮಿಸಿದ ಪಾಕಿಸ್ತಾನ ತಂಡ, ಅಪರೂಪದ ದೃಶ್ಯ ವೈರಲ್‌

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ;

ಸೆಪ್ಟೆಂಬರ್‌ 26 ರಂದು ಹಂಚಿಕೊಳ್ಳಲಾದ ಈ ವಿಡಿಯೋ 4 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇದನ್ನೆಲ್ಲಾ ನೋಡಿ ಸಿಂಗಲ್‌ ಆಗಿರುವ ನನ್ನ ದುಃಖ ಇನ್ನೂ ಜಾಸ್ತಿಯಾಗ್ತಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಇದು ಕಲಿಯುಗ ಇಲ್ಲಿ ಏನೂ ಬೇಕಾದ್ರೂ ಆಗ್ಬೋದುʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:14 pm, Fri, 27 September 24

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ