AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ನೇ ತರಗತಿ ಪರೀಕ್ಷೆಗೆ ನೋಂದಣಿ ಮಾಡಿಸಿಕೊಂಡ 77 ವರ್ಷದ ವೃದ್ಧ

ನೀರಿನ ಇಲಾಖೆಯಲ್ಲಿ 4ನೇ ಹಂತದ ನೌಕರರಾಗಿ ನೇಮಕಗೊಂಡಿದ್ದರು. ಆದರೂ ಪ್ರಯತ್ನ ಬಿಡದೆ ಪರೀಕ್ಷೆಯನ್ನು ಬರೆಯುತ್ತಿದ್ದರು. ಕೊನೆಗೂ 2019 ರಲ್ಲಿ 10 ನೇ ತರಗತಿ ಪರೀಕ್ಷೆಯಲ್ಲಿ ಹುಕುಮ್​ದಾಸ್​ ಉತ್ತೀರ್ಣರಾಗಿದ್ದರು.

12 ನೇ ತರಗತಿ ಪರೀಕ್ಷೆಗೆ ನೋಂದಣಿ ಮಾಡಿಸಿಕೊಂಡ 77 ವರ್ಷದ ವೃದ್ಧ
ಹುಕುಮ್​ದಾಸ್​ ವೈಷ್ಣವ್​
TV9 Web
| Edited By: |

Updated on: Jan 13, 2022 | 5:58 PM

Share

ಕಲಿಯಬೇಕೆಂಬ ಹಠವಿದ್ದರೆ ವಯಸ್ಸು ಅಡ್ಡಿಯಲ್ಲ ಎಂದು ಹೇಳುವ ಹಲವಾರು ಘಟನೆಗಳನ್ನು ಕೇಳಿದ್ದೇವೆ. ಇದೀಗ ರಾಜಸ್ಥಾನದ 77 ವರ್ಷದ ವೃದ್ಧರೊಬ್ಬರು 12ನೇ ತರಗತಿ ಪರೀಕ್ಷೆ ಬರೆಯಲು ಹೊರಟಿದ್ದಾರೆ. ಈ ಸುದ್ದಿ ಈಗ ಎಲ್ಲರನ್ನೂ ಹುಬ್ಬೇರಿಸುವಂತೆ ಮಾಡಿದೆ. ರಾಜಸ್ಥಾನದ ಹುಕುಮ್​ದಾಸ್​ ವೈಷ್ಣವ್​ ಎನ್ನುವ ಮಾಜಿ ಸರ್ಕಾರಿ ನೌಕರ 12 ನೇ ತರಗತಿ ಪರೀಕ್ಷೆ ಬರೆಯಲು ತಯಾರಿ ನಡೆಸಿದ್ದಾರೆ. ಇನ್ನೊಂದು ಅಚ್ಚರಿಯ ಸಂಗತಿಯೆಂದರೆ ಇವರು 10 ನೇ ತರಗತಿಯನ್ನು ಬರೋಬ್ಬರಿ 56ನೇ ಬಾರಿ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದರು.

1945 ರಲ್ಲಿ ಜಲೋರ್‌ನ ಸರ್ದಾರ್‌ಗಢ ಗ್ರಾಮದಲ್ಲಿ ಜನಿಸಿದ ಇವರು 1ರಿಂದ 8 ನೇ ತರಗತಿಯನ್ನು ತೇಖಿ ಊರಿನಲ್ಲಿ ಕಲಿತಿದ್ದರು. 1962ರಲ್ಲಿ ಮೊದಲ ಬಾರಿಗೆ 10ನೇ ತರಗತಿ ಪರೀಕ್ಷೆಯನ್ನು ಬರೆದಿದ್ದರು ಆದರೆ ಉತ್ತೀರ್ಣರಾಗಿರಲಿಲ್ಲ. ಇದರಿಂದ 2ನೇ ಬಾರಿಗೆ ಪರೀಕ್ಷೆ ಬರೆದಿದ್ದರು ಅದರಲ್ಲೂ ಪಾಸ್​ ಆಗದ ಕಾರಣ ಅವರ ಸ್ನೇಹಿತರು ರೇಗಿಸಿದ್ದರು. ನಿನ್ನಿಂದ 10ನೇ ತರಗತಿ ಉತ್ತೀರ್ಣರಾಗಲು ಸಾಧ್ಯವಿಲ್ಲ ಎಂದಿದ್ದರು. ಆ ಬಳಿಕ ನೀರಿನ ಇಲಾಖೆಯಲ್ಲಿ 4ನೇ ಹಂತದ ನೌಕರರಾಗಿ ನೇಮಕಗೊಂಡಿದ್ದರು. ಆದರೂ ಪ್ರಯತ್ನ ಬಿಡದೆ ಪರೀಕ್ಷೆಯನ್ನು ಬರೆಯುತ್ತಿದ್ದರು. ಕೊನೆಗೂ 2019 ರಲ್ಲಿ 10 ನೇ ತರಗತಿ ಪರೀಕ್ಷೆಯಲ್ಲಿ ಹುಕುಮ್​ದಾಸ್​ ಉತ್ತೀರ್ಣರಾಗಿದ್ದರು.

ಈ ಬಾರಿ ಅದೇ ಆತ್ಮವಿಶ್ವಾಸದೊಂದಿಗೆ 2021-22ನೇ ಸಾಲಿನ 12 ನೇ ತರಗತಿ ಪರೀಕ್ಷೆ ಬರೆಯಲು ನೋಂದಣಿ ಮಾಡಿಸಿಕೊಂಡಿದ್ದಾರೆ. ತಮ್ಮೂರಿನ ಶಾಲೆಯಲ್ಲಿಯೇ ಪರೀಕ್ಷೆ ಬರೆಯಲು ಸಿದ್ಧತೆ ನಡೆಸುತ್ತಿದ್ದಾರೆ. ಅಚ್ಚರಿಯ ವಿಷಯವೆಂದರೆ ಹುಕುಮ್​ದಾಸ್​ ಮೊಮ್ಮಗ ಕೂಡ ಈ ಬಾರಿ 12 ನೇ ತರಗತಿ ಪರೀಕ್ಷೆ ಬರೆಯುತ್ತಿದ್ದಾರೆ. ಸದ್ಯ ಈ ಸಂಗತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಹುಕುಮ್​ದಾಸ್​ ಪ್ರಯತ್ನಕ್ಕೆ ನೆಟ್ಟಿಗರು ಶ್ಲಾಘನೆ ವ್ಯಕ್ತಪಡಿಸಿದ್ದು, ಶುಭ ಹಾರೈಸಿದ್ದಾರೆ.

ಇದನ್ನೂ ಓದಿ:

Video: ಸಿನಿಮಾ ಶೈಲಿಯಲ್ಲಿ ಕಳ್ಳನನ್ನು ಬೆನ್ನಟ್ಟಿ ಸೆರೆಹಿಡಿದ ಮಂಗಳೂರು ಪೊಲೀಸರು

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ