AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: 13 ಗಂಟೆಗಳ ಕಾಲ ನೀರಿನಲ್ಲಿ ಸಿಲುಕಿದ್ದ 78ರ ವೃದ್ಧೆ

13 ಗಂಟೆಗಳ ಕಾಲ ಪ್ರವಾಹದಲ್ಲಿ ಸಿಲುಕಿದ್ದ 78ರ ವೃದ್ಧೆಯೊಬ್ಬರು ಪವಾಡ ಸದೃಶ್ಯ ರೀತಿಯಲ್ಲಿ ಬದುಕುಳಿದು ಬಂದಿದ್ದಾರೆ. ಇನ್ನಷ್ಟು ವಿವರ ಇಲ್ಲಿದೆ.

Viral News: 13 ಗಂಟೆಗಳ ಕಾಲ ನೀರಿನಲ್ಲಿ ಸಿಲುಕಿದ್ದ 78ರ ವೃದ್ಧೆ
13 ಗಂಟೆಗಳ ಕಾಲ ನೀರಿನಲ್ಲಿ ಸಿಲುಕಿದ್ದ 78ರ ವೃದ್ಧೆ Image Credit source: mathrubhumi.com
ಅಕ್ಷತಾ ವರ್ಕಾಡಿ
|

Updated on: Jul 15, 2023 | 4:50 PM

Share

ಕೇರಳ: 13 ಗಂಟೆಗಳ ಕಾಲ ಪ್ರವಾಹದಲ್ಲಿ ಸಿಲುಕಿದ್ದ 78ವರ್ಷದ ವೃದ್ಧೆಯೊಬ್ಬರು ಪವಾಡ ಸದೃಶ್ಯ ರೀತಿಯಲ್ಲಿ ಬದುಕುಳಿದು ಬಂದಿದ್ದಾರೆ. ಕೇರಳದ ಕಟ್ಟಿಪರದ ಕುಡುವಕುಂಞವಿನ ಕಮಲಾಕ್ಷಿ(78) ನದಿಯ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದರು. ಸುಮಾರು 13 ಗಂಟೆಗಳ ಹುಡುಕಾಟದ ನಂತರ ವೃದ್ಧೆಯನ್ನು ರಕ್ಷಣೆ ಮಾಡಲಾಗಿದೆ. ಈ ಘಟನೆ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ 13 ಗಂಟೆಗಳ ಕಾಲ ನೀರಿನಲ್ಲಿ ಜೀವನ್ಮರಣಾ ಹೋರಾಟ ನಡೆಸಿದ 78ರ ವೃದ್ಧೆಯ ಸಾಹಸಕ್ಕೆ ಭಾರೀ ಶ್ಲಾಘನೆ ವ್ಯಕ್ತವಾಗಿದೆ.

ರಾತ್ರಿಯಿಡೀ ನೀರಿನಲ್ಲೇ ಕಳೆದ 78ರ ವೃದ್ಧೆ:

ನದಿಯ ಸ್ನಾನಕ್ಕೆ ಹೋದ ವೇಳೆ ಕಾಲು ಜಾರಿ ನೀರಿನ ಸೆಳೆತಕ್ಕೆ ಕೊಚ್ಚಿ ಹೋದ ಕಮಲಾಕ್ಷಿವರು ಮನೆಯಿಂದ ಸುಮಾರು 50 ಮೀಟರ್​​​ ದೂರದಲ್ಲಿ ನೀರಿನ ಮಧ್ಯೆ ಸಿಕ್ಕಿಕೊಂಡಿದ್ದರು. ಮಧ್ಯರಾತ್ರಿ ಮನೆಯ ಪಕ್ಕದ ನದಿಯ ದಡದಲ್ಲಿ ವೃದ್ಧೆಯ ಚಪ್ಪಲಿ ಪತ್ತೆಯಾಗಿದ್ದು, ನೀರಿನಲ್ಲಿ ಕೊಚ್ಚಿ ಹೋಗಿರುವುದು ತಿಳಿದುಬಂದಿದೆ. ರಾತ್ರಿಯಿಡೀ ಮನೆಯವರು ಹುಡುಕಾಟ ನಡೆಸಿದ್ದಾರೆ ಆದರೆ ಏನೂ ಪ್ರಯೋಜನವಾಗಲಿಲ್ಲ.

ಇದನ್ನೂ ಓದಿ: ಡೆಲಿವರಿ ಏಜೆಂಟರುಗಳಿಗಾಗಿ ರಿಲ್ಯಾಕ್ಸ್​ ಸ್ಟೇಷನ್​; ನೆಟ್ಟಿಗರ ಹೃದಯಗೆದ್ದ ಯುವಕ

ಕಮಲಾಕ್ಷಿಯವರ ಕುತ್ತಿಗೆಯ ವರೆಗೆ ನೀರು ಇದ್ದರೂ ಕೂಡ ರಾತ್ರಿಪೂರ ಬಂಡೆಯ ನಡುವೆ ಗಿಡದ ರೆಂಬೆಯನ್ನು ಹಿಡಿದು ಕುಳಿತ್ತಿದ್ದಾರೆ. ಮರುದಿನ ಬೆಳಗ್ಗೆ ಸ್ಥಳೀಯರು ಹಾಗೂ ನರಿಕುಣಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ವೃದ್ಧೆಯನ್ನು ರಕ್ಷಣೆ ಮಾಡಿ, ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಪುತ್ರಿಯ ಮನೆಗೆ ಸುರಕ್ಷಿತವಾಗಿ ತಲುಪಿಸಿದ್ದಾರೆ. ಈ ಘಟನೆ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ 13 ಗಂಟೆಗಳ ಕಾಲ ನೀರಿನಲ್ಲಿ ಜೀವನ್ಮರಣಾ ಹೋರಾಟ ನಡೆಸಿದ 78ರ ವೃದ್ಧೆಯ ಸಾಹಸಕ್ಕೆ ಭಾರೀ ಶ್ಲಾಘನೆ ವ್ಯಕ್ತವಾಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ