AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಹಾ ಮಾರಿ ಕೇವಲ ಎರಡೂವರೆ ವರ್ಷದಲ್ಲಿ ತನ್ನ 8 ಲಕ್ಷ ರೂ ಸಾಲ ತೀರಿಸಿದ ಮಂಗಳೂರಿನ ವ್ಯಕ್ತಿ

ಕೋವಿಡ್ ಸಮಯದಲ್ಲಿ ತಾನು ನಡೆಸುತ್ತಿದ್ದಂತ ಜಿಮ್ ಮುಚ್ಚಿ ಹೋದಂತಹ ಸಂದರ್ಭದಲ್ಲಿ ಎದೆಗುಂದದೆ   ಒಂದು ಸಣ್ಣ ಅಂಗಡಿ ಹಾಕಿ ಚಹಾ ಮಾರುವಂತಹ ಕೆಲಸವನ್ನು ಆರಂಭಿಸಿದಂತಹ ವ್ಯಕ್ತಿಯೊಬ್ಬರು ಕೇವಲ ಎರಡುವರೆ ವರ್ಷದಲ್ಲಿ ಚಹಾ ಮಾರಿಯೇ ತಮ್ಮ  ಜಿಮ್ ಮೇಲಿದ್ದ 8 ಲಕ್ಷ ಸಾಲವನ್ನು ತೀರಿಸಿದ್ದಾರೆ. ಇವರ ಈ ಸ್ಪೂರ್ತಿದಾಯಕ ಕಥೆಯ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Viral Video: ಚಹಾ ಮಾರಿ ಕೇವಲ ಎರಡೂವರೆ ವರ್ಷದಲ್ಲಿ ತನ್ನ 8 ಲಕ್ಷ ರೂ ಸಾಲ ತೀರಿಸಿದ ಮಂಗಳೂರಿನ ವ್ಯಕ್ತಿ
ಮಾಲಾಶ್ರೀ ಅಂಚನ್​
| Edited By: |

Updated on: Jun 05, 2024 | 12:11 PM

Share

ಆಗದು ಎಂದು ಕೈ ಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ… ಎಂದು ಅಣ್ಣಾವ್ರು ಹಾಡಿದ ಗೀತೆ ಎಲ್ಲರನ್ನೂ ಒಂದಲ್ಲ ಒಂದು ರೀತಿಯಲ್ಲಿ ಹಿಡಿದ ಕಾರ್ಯವನ್ನು ಮುಗಿಸುವಂತೆ ಪ್ರೇರೇಪಿಸುತ್ತದೆ. ಅದೇ ರೀತಿ ಇಲ್ಲೊಬ್ಬ ವ್ಯಕ್ತಿ ಇದ್ದ ಕೆಲಸ ಹೋದರೇನಂತೆ ಚಹಾ ಮಾರಿಯಾದರೂ ಜೀವನ ನಡೆಸುತ್ತೇನೆ ಎಂದು ಛಲ ತೊಟ್ಟು ಚಹಾ ಮಾರಿಯೇ ಕೇವಲ ಎರಡುವರೆ ವರ್ಷದಲ್ಲಿ ತನ್ನ 8 ಲಕ್ಷ ಸಾಲವನ್ನು ತೀರಿಸಿದ್ದಾರೆ. ಇವರ ಈ ಸ್ಪೂರ್ತಿದಾಯಕ ಕಥೆಯ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಮಂಗಳೂರಿನ ಸಚಿನ್ ಎಂಬವರು ಬೆಲ್ಲದ ಚಹಾ ಮಾರಿ ಒಂದೊಳ್ಳೆ ಜೀವನವನ್ನು ನಡೆಸುತ್ತಿದ್ದಾರೆ.   ಜಿಮ್ ಓನರ್ ಆಗಿದ್ದ ಸಚಿನ್ ಅವರಿಗೆ ಕೋವಿಡ್ ಸಮಯದಲ್ಲಿ ಜಿಮ್ ಅನ್ನು ಮುಚ್ಚಬೇಕಾದಂತಹ ಪರಿಸ್ಥಿತಿ ಬಂದೊದಗುತ್ತದೆ. ಅಂತಹ ಸಂದರ್ಭದಲ್ಲಿ ಎದೆಗುಂದದೆ ಹೇಗಾದರೂ ಜೀವನ ನಡೆಸಲೇಬೇಕೆಂದು ಮಂಗಳೂರಿನ ಬಿಜೈ ಎಂಬಲ್ಲಿ “ಕಾಮಧೇನು ಕೆಫೆ” ಎಂಬ ಸಣ್ಣ ಕೆಫೆ ಒಂದನ್ನು ಪ್ರಾರಂಭಿಸುತ್ತಾರೆ. ಹೀಗೆ ಚಹಾ ಮಾರಿಯೇ ಸಚಿನ್ ಕೇವಲ ಎರಡುವರೆ ವರ್ಷದಲ್ಲಿ ತಮ್ಮ ಜಿಮ್ ವ್ಯವಹಾರದ ಮೇಲಿನ  8 ಲಕ್ಷ ಸಾಲವನ್ನು ತೀರಿಸಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಈ ಕುರಿತ ವಿಡಿಯೋವನ್ನು Try Thindi ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಚಹಾ ಮಾರಿ ಎರಡುವರೆ ವರ್ಷದಲ್ಲಿ 8 ಲಕ್ಷ ಸಾ ಮರು ಪಾವತಿಸಿದ ಮಂಗಳೂರಿನ ಯುವಕ! ಇವರ ಕಹಾನಿ ನಿಜಕ್ಕೂ ನಮಗೆಲ್ಲರಿಗೂ ಸ್ಪೂರ್ತಿ!!” ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ.

ಇದನ್ನೂ ಓದಿ: ಕ್ರಿಕೆಟ್ ಆಡುತ್ತಿರುವಾಗಲೇ ಬಂದ ಜವರಾಯ; ಹೃದಯಾಘಾತದಿಂದ ಮೈದಾನದಲ್ಲೇ ಪ್ರಾಣಬಿಟ್ಟ ಯುವಕ

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ಖಂಡಿತವಾಗಿಯೂ ಪ್ರಾಮಾಣಿಕ ವ್ಯಕ್ತಿ ಕಷ್ಟದಲ್ಲಿರುವಾಗ ಪರಮಾತ್ಮ ಕೈಬಿಡಲಾರ ಎಂಬುದಕ್ಕೆ ನಿಮ್ಮ ಜೀವನವೇ ಜ್ವಲಂತ ನಿದರ್ಶನ ಎಂದು ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ