AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending : ಮದುವೆಯಾದ 8 ವರ್ಷಗಳ ನಂತರ ಬಹಿರಂಗವಾದ ಪತಿಯ ಸತ್ಯ

Cheating : ಸ್ಥೂಲಕಾಯಕ್ಕೆ ಸಂಬಂಧಿಸಿದ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕೆಂದು ಹೇಳಿದ ಪತಿ, ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆಗೆ ಒಳಗಾದರು. ಈ ವಿಷಯ ಬಹಿರಂಗಪಡಿಸಿದರೆ ಭಯಂಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪತ್ನಿಯನ್ನು ಹೆದರಿಸಿದರು.

Trending : ಮದುವೆಯಾದ 8 ವರ್ಷಗಳ ನಂತರ ಬಹಿರಂಗವಾದ ಪತಿಯ ಸತ್ಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Sep 17, 2022 | 11:08 AM

Share

Trending : ತನ್ನ ಪತಿ ವಿರಾಜ್ ವರ್ಧನ್ (ವಿಜಯತಾ) ಅಸ್ವಾಭಾವಿಕ ಲೈಂಗಿಕತೆಯಡಿ ತನಗೆ ವಂಚನೆ ಮಾಡಿದ್ದಾರೆ ಎಂದು ಗುಜರಾತ್​ನ ವಡೋದರಾ ನಿವಾಸಿ ಶೀತಲ್ (40)​ ಆರೋಪಿಸಿ ಪತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. 2014 ರಲ್ಲಿ ಇವರಿಬ್ಬರೂ ಮದುವೆಯಾದರು. ಹನಿಮೂನ್​ಗಾಗಿ ಕಾಶ್ಮೀರಕ್ಕೂ ತೆರಳಿದರು. ಎಂಟು ವರ್ಷಗಳ ನಂತರ ಪತಿಯ ಲಿಂಗತ್ವದ ಬಗ್ಗೆ ಸತ್ಯ ತಿಳಿದು ಶೀತಲ್​ ಆಘಾತಕ್ಕೆ ಒಳಗಾದರು. ನಂತರ ಪತಿಯು ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆಗೆ ಒಳಗಾದ ವಿಷಯವೂ ಬಹಿರಂಗಗೊಂಡಿತು. ಗುಜರಾತಿನ ಗೋತ್ರಿ ಪೊಲೀಸ್​ ಠಾಣೆಯಲ್ಲಿ ಪತಿ ಮತ್ತು ಕುಟುಂಬದವರ ವಿರುದ್ಧ ಇದೀಗ ಪ್ರಕರಣ ದಾಖಲಿಸಿದ್ದಾರೆ ಶೀತಲ್.

ಶೀತಲ್​ ಮೊದಲ​ ಪತಿ ರಸ್ತೆ ಅಪಘಾತದಲ್ಲಿ ನಿಧನರಾದರು. ಆಗ ಅವರಿಗೆ ಹದಿನಾಲ್ಕು ವರ್ಷದ ಮಗಳಿದ್ದಳು.  ಎರಡನೇ ಮದುವೆಯ ಬಗ್ಗೆ ಅವರಿಗೆ ಆಲೋಚನೆ ಬಂದಿತು. ನಂತರ ಮ್ಯಾಟ್ರಿಮೋನಿಯಲ್ ವೆಬ್‌ಸೈಟ್ ಒಂದನ್ನು ಸಂಪರ್ಕಿಸಿದರು. ಆಗ ವಿರಾಜ್ ವರ್ಧನ್ ಎನ್ನುವವರ ಪರಿಚಯವಾಯಿತು. 2014ರಲ್ಲಿ ಕುಟುಂಬ ಸದಸ್ಯರ ಸಮ್ಮುಖದಲ್ಲಿ ವಿರಾಜ್ ವರ್ಧನ್​ ಅವರೊಂದಿಗೆ ಶಾಸ್ತ್ರೋಕ್ತವಾಗಿ ಶೀತಲ್​ ಮದುವೆಯಾದರು.

ಆದರೆ ಗಂಡಹೆಂಡತಿ ಮಧ್ಯೆ ಲೈಂಗಿಕ ಜೀವನಕ್ಕೆ ಸಂಬಂಧಿಸಿ ಪ್ರಶ್ನೆಗಳು ಎದ್ದಾಗೆಲ್ಲ ವಿರಾಜ್​, ಶೀತಲ್​ ಬಳಿ ಕ್ಷಮೆ ಕೇಳಲಾರಂಭಿಸಿದರು. ಆದರೆ ಶೀತಲ್​ ಒತ್ತಾಯ ಮಾಡಿದಾಗ, ಕೆಲ ವರ್ಷಗಳ ಹಿಂದೆ ರಷ್ಯಾದಲ್ಲಿ ಸಂಭವಿಸಿದ ಅಪಘಾತದಲ್ಲಿ ತಾನು ಲೈಂಗಿಕ ಶಕ್ತಿಯನ್ನು ಕಳೆದುಕೊಂಡಿದ್ದು, ಸಣ್ಣ ಶಸ್ತ್ರಚಿಕಿತ್ಸೆಯ ನಂತರ ಸರಿಹೋಗುತ್ತದೆ ಎಂದು ಭರವಸೆ ನೀಡಿದರು. ಅಲ್ಲಿಗೆ ಸಂಸಾರ ಸುಗಮವಾಗಿ ಸಾಗಬಹುದೆಂದು ಶೀತಲ್​ ಸಮಾಧಾನಿಸಿಕೊಂಡರು.

ಇದನ್ನೂ ಓದಿ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಇದನ್ನೂ ಓದಿ : Trending : ಒಡಿಶಾದ ವಿವಾಹಿತ ಪುರುಷನೊಂದಿಗೆ ತೃತೀಯಲಿಂಗಿ ಮಹಿಳೆಯ ವಿವಾಹ

ಆದರೆ ಜನವರಿ 2020ರಲ್ಲಿ, ಸ್ಥೂಲಕಾಯಕ್ಕೆ ಸಂಬಂಧಿಸಿದ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕೆಂದು ಸುಳ್ಳು ಹೇಳಿದ ವಿರಾಜ್, ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆಗೆ ಒಳಗಾದರು. ನಂತರ ಈ ವಿಷಯವನ್ನು ಶೀತಲ್​ ಅವರಿಗೆ ಈ ವಿಷಯ ತಿಳಿದು ಆಕೆ ಆಘಾತಕ್ಕೆ ಒಳಗಾದರು. ಅಷ್ಟಕ್ಕೆ ಸುಮ್ಮನಾಗದ ವಿರಾಜ್ ಅಸಹಜ ಲೈಂಗಿಕ ಕ್ರಿಯೆಯಲ್ಲಿ ಒಳಗೊಳ್ಳಲು ಒತ್ತಾಯಿಸಲಾರಂಭಿಸಿದರು. ಈ ವಿಷಯವನ್ನು ಬಹಿರಂಗಪಡಿದಿರೆ ಭಯಂಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದೂ ಬೆದರಿಸಿದರು.

ಉಪಾಯಗಾಣದ ಶೀತಲ್​ ಪೊಲೀಸರಿಗೆ ಈ ವಿಷಯ ತಿಳಿಸಿ ಪ್ರಕರಣ ದಾಖಲಿಸಿದರು. ದೆಹಲಿ ನಿವಾಸಿಯಾಗಿರುವ ಆರೋಪಿ ವಿರಾಜ್​ ಇದೀಗ ವಡೋದರಾ ಪೊಲೀಸರ ಬಂಧನದಲ್ಲಿದ್ದಾರೆ.

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 10:51 am, Sat, 17 September 22

Follow Us
Web contact
Web contact

TV9 Kannada

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ