AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​ ಸೇನೆ ಸೇರಲು ಸರತಿ ಸಾಲಿನಲ್ಲಿ ನಿಂತ 80 ವರ್ಷದ ವೃದ್ಧ: ಫೋಟೋ ವೈರಲ್​

ದೇಶ ಉಳಸಿಕೊಳ್ಳಲು ಉಕ್ರೇನ್​ ಸರ್ಕಾರ ನಾಗರಿಕರಿಗೂ ಶಸ್ತ್ರಾಸ್ತ್ರ ನೀಡಿ ಯುದ್ಧಕ್ಕೆ ಕಳುಹಿಸುತ್ತಿದೆ. ಈ ನಡುವೆ 80 ವರ್ಷದ ವೃದ್ಧರೋಬ್ಬರು ಬ್ಯಾಗ್​ ಹಿಡಿದು ಸೇನೆ ಸೇರಲು ಹೋದ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಉಕ್ರೇನ್​ ಸೇನೆ ಸೇರಲು ಸರತಿ ಸಾಲಿನಲ್ಲಿ ನಿಂತ 80 ವರ್ಷದ ವೃದ್ಧ: ಫೋಟೋ ವೈರಲ್​
ವೈರಲ್​ ಫೋಟೋ
TV9 Web
| Edited By: |

Updated on:Feb 26, 2022 | 9:46 AM

Share

ರಷ್ಯಾ (Russia)  ಸೇನೆಯ ದಾಳಿಗೆ ನಲುಗಿದ ಉಕ್ರೇನ್ (Ukraine)​ ಸ್ಥಿತಿ ಹೇಳತೀರದಾಗಿದೆ.  ನಾಗರಿಕರ, ಸೈನಿಕರ ಸಾವಿನ ಪ್ರಮಾಣ ಹೆಚ್ಚುತ್ತಿದೆ. ಈಗಾಗಲೇ ಉಕ್ರೇನ್​ ರಾಜಧಾನಿಯನ್ನು ವಶಪಡಿಸಿಕೊಳ್ಳುವತ್ತ ರಷ್ಯಾ ಸೇನೆ ಮುನ್ನುಗ್ಗುತ್ತಿದೆ. ಈ ನಡುವೆ ಒಂದಷ್ಟು ಮನಕಲಕುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಕಾಣಸಿಕೊಳ್ಳುತ್ತಿದ್ದು, ಉಕ್ರೇನ್​ನ ಸ್ಥಿತಿಗೆ ಹಿಡಿದ ಕೈಗನ್ನಡಿಯಂತಿದೆ. ಈಗಾಗಲೇ ಪ್ರೀತಿ ಪಾತ್ರರನ್ನು ಕಳೆದುಕೊಂಡ, ಕಳೆದುಕೊಳ್ಳವ ಆತಂಕದಲ್ಲಿರುವ ಭಯಹುಟ್ಟಿಸುವ ಫೋಟೋಗಳು, ಯುದ್ಧಕ್ಕೆ ಹೋಗುವ ಮುಂಚೆ ಮಗಳನ್ನು ಮುದ್ದಾಡಿದ ತಂದೆಯ ವಿಡಿಯೋ, ಅನ್ನ, ನೀರಿಲ್ಲದೆ ಹಸಿವೆಯಿಂದ ಬಳಲುತ್ತಿರುವ ಜನರ ಫೋಟೊಗಳು ವೈರಲ್​ ಆಗಿವೆ. ದೇಶ ಉಳಸಿಕೊಳ್ಳಲು ಉಕ್ರೇನ್​ ಸರ್ಕಾರ ನಾಗರಿಕರಿಗೂ ಶಸ್ತ್ರಾಸ್ತ್ರ ನೀಡಿ ಯುದ್ಧಕ್ಕೆ ಕಳುಹಿಸತ್ತಿದೆ. ಈ ನಡುವೆ 80 ವರ್ಷದ ವೃದ್ಧರೋಬ್ಬರು ಬ್ಯಾಗ್​ ಹಿಡಿದು ಸೇನೆ ಸೇರಲು ಸರತಿ ಸಾಲಿನಲ್ಲಿ ನಿಂತ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಟ್ವಿಟರ್​ನಲ್ಲಿ ಈ ಫೋಟೋ ಹಂಚಿಕೊಳ್ಳಲಾಗಿದೆ. 80 ವೃರ್ಷದ ವೃದ್ಧ ಕೈಲ್ಲೊಂದು ಬ್ಯಾಗ್​ ಹಿಡಿದು ಸೇನೆಗೆ ಸೇರಲು ಸರತಿ ಸಾಲಿನಲ್ಲಿ ನಿಂತಿರುವುದನ್ನು ಫೋಟೋದಲ್ಲಿ ಕಾಣಬಹುದು. ಈ ಬಗ್ಗೆ ಇಂಡಿಯಾ ಟುಡೆ ಮಾಹಿತಿ ಹಂಚಿಕೊಂಡಿದೆ, ವೃದ್ಧನ ಬ್ಯಾಗ್​ನಲ್ಲಿ 2 ಟೀ ಶರ್ಟ್​, ಪ್ಯಾಂಟ್ಸ್​, ಟೂತ್​​ಬ್ರಶ್​,  ಹಾಗೂ ಸ್ವಲ್ಪ ತಿಂಡಿಯಿದೆ. ನೀವೇಕೆ ಬಂದಿದ್ದೀರಿ ಎಂದರೆ, ನನ್ನ ಮೊಮ್ಮಕ್ಕಳನ್ನು ಉಳಿಸಿಕೊಳ್ಳಬೇಕು ಅದಕ್ಕಾಗಿಯೇ ಯುದ್ಧಮಾಡಬೇಕು ಎಂದಿದ್ದಾರೆ ಎಂದು ವರದಿ ತಿಳಿಸಿದೆ. ಸದ್ಯ ಈ ಫೋಟೋ ಒಂದು ಲಕ್ಷಕ್ಕೂ ಹೆಚ್ಚು ಲೈಕ್ಸ್​ ಗಳಿಸಿದ್ದು, ನೆಟ್ಟಿಗರು ವೃದ್ಧನ ಧೈರ್ಯವನ್ನು ಶ್ಲಾಘಿಸಿದ್ದಾರೆ.

ಇದನ್ನೂ ಓದಿ:

ರಷ್ಯಾ-ಉಕ್ರೇನ್​ ಯುದ್ಧ: ದೇಶದ ಪರವಾಗಿ ನಿಂತು ಮಗಳಿಗೆ ಕಣ್ಣೀರಿನ ವಿದಾಯ ಹೇಳಿದ ತಂದೆ: ವಿಡಿಯೋ ವೈರಲ್​

Published On - 9:45 am, Sat, 26 February 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!