ಉಕ್ರೇನ್​ ಸೇನೆ ಸೇರಲು ಸರತಿ ಸಾಲಿನಲ್ಲಿ ನಿಂತ 80 ವರ್ಷದ ವೃದ್ಧ: ಫೋಟೋ ವೈರಲ್​

ದೇಶ ಉಳಸಿಕೊಳ್ಳಲು ಉಕ್ರೇನ್​ ಸರ್ಕಾರ ನಾಗರಿಕರಿಗೂ ಶಸ್ತ್ರಾಸ್ತ್ರ ನೀಡಿ ಯುದ್ಧಕ್ಕೆ ಕಳುಹಿಸುತ್ತಿದೆ. ಈ ನಡುವೆ 80 ವರ್ಷದ ವೃದ್ಧರೋಬ್ಬರು ಬ್ಯಾಗ್​ ಹಿಡಿದು ಸೇನೆ ಸೇರಲು ಹೋದ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಉಕ್ರೇನ್​ ಸೇನೆ ಸೇರಲು ಸರತಿ ಸಾಲಿನಲ್ಲಿ ನಿಂತ 80 ವರ್ಷದ ವೃದ್ಧ: ಫೋಟೋ ವೈರಲ್​
ವೈರಲ್​ ಫೋಟೋ
Follow us
| Updated By: Pavitra Bhat Jigalemane

Updated on:Feb 26, 2022 | 9:46 AM

ರಷ್ಯಾ (Russia)  ಸೇನೆಯ ದಾಳಿಗೆ ನಲುಗಿದ ಉಕ್ರೇನ್ (Ukraine)​ ಸ್ಥಿತಿ ಹೇಳತೀರದಾಗಿದೆ.  ನಾಗರಿಕರ, ಸೈನಿಕರ ಸಾವಿನ ಪ್ರಮಾಣ ಹೆಚ್ಚುತ್ತಿದೆ. ಈಗಾಗಲೇ ಉಕ್ರೇನ್​ ರಾಜಧಾನಿಯನ್ನು ವಶಪಡಿಸಿಕೊಳ್ಳುವತ್ತ ರಷ್ಯಾ ಸೇನೆ ಮುನ್ನುಗ್ಗುತ್ತಿದೆ. ಈ ನಡುವೆ ಒಂದಷ್ಟು ಮನಕಲಕುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಕಾಣಸಿಕೊಳ್ಳುತ್ತಿದ್ದು, ಉಕ್ರೇನ್​ನ ಸ್ಥಿತಿಗೆ ಹಿಡಿದ ಕೈಗನ್ನಡಿಯಂತಿದೆ. ಈಗಾಗಲೇ ಪ್ರೀತಿ ಪಾತ್ರರನ್ನು ಕಳೆದುಕೊಂಡ, ಕಳೆದುಕೊಳ್ಳವ ಆತಂಕದಲ್ಲಿರುವ ಭಯಹುಟ್ಟಿಸುವ ಫೋಟೋಗಳು, ಯುದ್ಧಕ್ಕೆ ಹೋಗುವ ಮುಂಚೆ ಮಗಳನ್ನು ಮುದ್ದಾಡಿದ ತಂದೆಯ ವಿಡಿಯೋ, ಅನ್ನ, ನೀರಿಲ್ಲದೆ ಹಸಿವೆಯಿಂದ ಬಳಲುತ್ತಿರುವ ಜನರ ಫೋಟೊಗಳು ವೈರಲ್​ ಆಗಿವೆ. ದೇಶ ಉಳಸಿಕೊಳ್ಳಲು ಉಕ್ರೇನ್​ ಸರ್ಕಾರ ನಾಗರಿಕರಿಗೂ ಶಸ್ತ್ರಾಸ್ತ್ರ ನೀಡಿ ಯುದ್ಧಕ್ಕೆ ಕಳುಹಿಸತ್ತಿದೆ. ಈ ನಡುವೆ 80 ವರ್ಷದ ವೃದ್ಧರೋಬ್ಬರು ಬ್ಯಾಗ್​ ಹಿಡಿದು ಸೇನೆ ಸೇರಲು ಸರತಿ ಸಾಲಿನಲ್ಲಿ ನಿಂತ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಟ್ವಿಟರ್​ನಲ್ಲಿ ಈ ಫೋಟೋ ಹಂಚಿಕೊಳ್ಳಲಾಗಿದೆ. 80 ವೃರ್ಷದ ವೃದ್ಧ ಕೈಲ್ಲೊಂದು ಬ್ಯಾಗ್​ ಹಿಡಿದು ಸೇನೆಗೆ ಸೇರಲು ಸರತಿ ಸಾಲಿನಲ್ಲಿ ನಿಂತಿರುವುದನ್ನು ಫೋಟೋದಲ್ಲಿ ಕಾಣಬಹುದು. ಈ ಬಗ್ಗೆ ಇಂಡಿಯಾ ಟುಡೆ ಮಾಹಿತಿ ಹಂಚಿಕೊಂಡಿದೆ, ವೃದ್ಧನ ಬ್ಯಾಗ್​ನಲ್ಲಿ 2 ಟೀ ಶರ್ಟ್​, ಪ್ಯಾಂಟ್ಸ್​, ಟೂತ್​​ಬ್ರಶ್​,  ಹಾಗೂ ಸ್ವಲ್ಪ ತಿಂಡಿಯಿದೆ. ನೀವೇಕೆ ಬಂದಿದ್ದೀರಿ ಎಂದರೆ, ನನ್ನ ಮೊಮ್ಮಕ್ಕಳನ್ನು ಉಳಿಸಿಕೊಳ್ಳಬೇಕು ಅದಕ್ಕಾಗಿಯೇ ಯುದ್ಧಮಾಡಬೇಕು ಎಂದಿದ್ದಾರೆ ಎಂದು ವರದಿ ತಿಳಿಸಿದೆ. ಸದ್ಯ ಈ ಫೋಟೋ ಒಂದು ಲಕ್ಷಕ್ಕೂ ಹೆಚ್ಚು ಲೈಕ್ಸ್​ ಗಳಿಸಿದ್ದು, ನೆಟ್ಟಿಗರು ವೃದ್ಧನ ಧೈರ್ಯವನ್ನು ಶ್ಲಾಘಿಸಿದ್ದಾರೆ.

ಇದನ್ನೂ ಓದಿ:

ರಷ್ಯಾ-ಉಕ್ರೇನ್​ ಯುದ್ಧ: ದೇಶದ ಪರವಾಗಿ ನಿಂತು ಮಗಳಿಗೆ ಕಣ್ಣೀರಿನ ವಿದಾಯ ಹೇಳಿದ ತಂದೆ: ವಿಡಿಯೋ ವೈರಲ್​

Published On - 9:45 am, Sat, 26 February 22

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ