AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​ ಸೇನೆ ಸೇರಲು ಸರತಿ ಸಾಲಿನಲ್ಲಿ ನಿಂತ 80 ವರ್ಷದ ವೃದ್ಧ: ಫೋಟೋ ವೈರಲ್​

ದೇಶ ಉಳಸಿಕೊಳ್ಳಲು ಉಕ್ರೇನ್​ ಸರ್ಕಾರ ನಾಗರಿಕರಿಗೂ ಶಸ್ತ್ರಾಸ್ತ್ರ ನೀಡಿ ಯುದ್ಧಕ್ಕೆ ಕಳುಹಿಸುತ್ತಿದೆ. ಈ ನಡುವೆ 80 ವರ್ಷದ ವೃದ್ಧರೋಬ್ಬರು ಬ್ಯಾಗ್​ ಹಿಡಿದು ಸೇನೆ ಸೇರಲು ಹೋದ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಉಕ್ರೇನ್​ ಸೇನೆ ಸೇರಲು ಸರತಿ ಸಾಲಿನಲ್ಲಿ ನಿಂತ 80 ವರ್ಷದ ವೃದ್ಧ: ಫೋಟೋ ವೈರಲ್​
ವೈರಲ್​ ಫೋಟೋ
TV9 Web
| Updated By: Pavitra Bhat Jigalemane|

Updated on:Feb 26, 2022 | 9:46 AM

Share

ರಷ್ಯಾ (Russia)  ಸೇನೆಯ ದಾಳಿಗೆ ನಲುಗಿದ ಉಕ್ರೇನ್ (Ukraine)​ ಸ್ಥಿತಿ ಹೇಳತೀರದಾಗಿದೆ.  ನಾಗರಿಕರ, ಸೈನಿಕರ ಸಾವಿನ ಪ್ರಮಾಣ ಹೆಚ್ಚುತ್ತಿದೆ. ಈಗಾಗಲೇ ಉಕ್ರೇನ್​ ರಾಜಧಾನಿಯನ್ನು ವಶಪಡಿಸಿಕೊಳ್ಳುವತ್ತ ರಷ್ಯಾ ಸೇನೆ ಮುನ್ನುಗ್ಗುತ್ತಿದೆ. ಈ ನಡುವೆ ಒಂದಷ್ಟು ಮನಕಲಕುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಕಾಣಸಿಕೊಳ್ಳುತ್ತಿದ್ದು, ಉಕ್ರೇನ್​ನ ಸ್ಥಿತಿಗೆ ಹಿಡಿದ ಕೈಗನ್ನಡಿಯಂತಿದೆ. ಈಗಾಗಲೇ ಪ್ರೀತಿ ಪಾತ್ರರನ್ನು ಕಳೆದುಕೊಂಡ, ಕಳೆದುಕೊಳ್ಳವ ಆತಂಕದಲ್ಲಿರುವ ಭಯಹುಟ್ಟಿಸುವ ಫೋಟೋಗಳು, ಯುದ್ಧಕ್ಕೆ ಹೋಗುವ ಮುಂಚೆ ಮಗಳನ್ನು ಮುದ್ದಾಡಿದ ತಂದೆಯ ವಿಡಿಯೋ, ಅನ್ನ, ನೀರಿಲ್ಲದೆ ಹಸಿವೆಯಿಂದ ಬಳಲುತ್ತಿರುವ ಜನರ ಫೋಟೊಗಳು ವೈರಲ್​ ಆಗಿವೆ. ದೇಶ ಉಳಸಿಕೊಳ್ಳಲು ಉಕ್ರೇನ್​ ಸರ್ಕಾರ ನಾಗರಿಕರಿಗೂ ಶಸ್ತ್ರಾಸ್ತ್ರ ನೀಡಿ ಯುದ್ಧಕ್ಕೆ ಕಳುಹಿಸತ್ತಿದೆ. ಈ ನಡುವೆ 80 ವರ್ಷದ ವೃದ್ಧರೋಬ್ಬರು ಬ್ಯಾಗ್​ ಹಿಡಿದು ಸೇನೆ ಸೇರಲು ಸರತಿ ಸಾಲಿನಲ್ಲಿ ನಿಂತ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಟ್ವಿಟರ್​ನಲ್ಲಿ ಈ ಫೋಟೋ ಹಂಚಿಕೊಳ್ಳಲಾಗಿದೆ. 80 ವೃರ್ಷದ ವೃದ್ಧ ಕೈಲ್ಲೊಂದು ಬ್ಯಾಗ್​ ಹಿಡಿದು ಸೇನೆಗೆ ಸೇರಲು ಸರತಿ ಸಾಲಿನಲ್ಲಿ ನಿಂತಿರುವುದನ್ನು ಫೋಟೋದಲ್ಲಿ ಕಾಣಬಹುದು. ಈ ಬಗ್ಗೆ ಇಂಡಿಯಾ ಟುಡೆ ಮಾಹಿತಿ ಹಂಚಿಕೊಂಡಿದೆ, ವೃದ್ಧನ ಬ್ಯಾಗ್​ನಲ್ಲಿ 2 ಟೀ ಶರ್ಟ್​, ಪ್ಯಾಂಟ್ಸ್​, ಟೂತ್​​ಬ್ರಶ್​,  ಹಾಗೂ ಸ್ವಲ್ಪ ತಿಂಡಿಯಿದೆ. ನೀವೇಕೆ ಬಂದಿದ್ದೀರಿ ಎಂದರೆ, ನನ್ನ ಮೊಮ್ಮಕ್ಕಳನ್ನು ಉಳಿಸಿಕೊಳ್ಳಬೇಕು ಅದಕ್ಕಾಗಿಯೇ ಯುದ್ಧಮಾಡಬೇಕು ಎಂದಿದ್ದಾರೆ ಎಂದು ವರದಿ ತಿಳಿಸಿದೆ. ಸದ್ಯ ಈ ಫೋಟೋ ಒಂದು ಲಕ್ಷಕ್ಕೂ ಹೆಚ್ಚು ಲೈಕ್ಸ್​ ಗಳಿಸಿದ್ದು, ನೆಟ್ಟಿಗರು ವೃದ್ಧನ ಧೈರ್ಯವನ್ನು ಶ್ಲಾಘಿಸಿದ್ದಾರೆ.

ಇದನ್ನೂ ಓದಿ:

ರಷ್ಯಾ-ಉಕ್ರೇನ್​ ಯುದ್ಧ: ದೇಶದ ಪರವಾಗಿ ನಿಂತು ಮಗಳಿಗೆ ಕಣ್ಣೀರಿನ ವಿದಾಯ ಹೇಳಿದ ತಂದೆ: ವಿಡಿಯೋ ವೈರಲ್​

Published On - 9:45 am, Sat, 26 February 22

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ