Viral Video: ಮಹಾರಾಷ್ಟ್ರ; 8 ವರ್ಷದ ಬಾಲಕನ ವಿರುದ್ಧ ಅತ್ಯಾಚಾರ, ಅಟ್ರಾಸಿಟಿ, ಪೋಕ್ಸೋ ಪ್ರಕರಣ ದಾಖಲು; ನೆಟ್ಟಿಗರ ಆಕ್ರೋಶ

Atrocity Act: ತನ್ನ ವಿರುದ್ಧ ಅತ್ಯಾಚಾರ, ಅಟ್ರಾಸಿಟಿ, ಪೋಕ್ಸೋ ಪ್ರಕರಣಗಳನ್ನು ನೆರೆಮನೆಯ ಬೌದ್ಧ ಬೌದ್ಧ ಕುಟುಂಬವು ದಾಖಲಿಸಿದೆ ಎಂದು ಮಹಾರಾಷ್ಟ್ರದ 8 ವರ್ಷದ ಬಾಲಕ ಹೇಳುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸುಳ್ಳು ಪ್ರಕರಣ ದಾಖಲಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Viral Video: ಮಹಾರಾಷ್ಟ್ರ; 8 ವರ್ಷದ ಬಾಲಕನ ವಿರುದ್ಧ ಅತ್ಯಾಚಾರ, ಅಟ್ರಾಸಿಟಿ, ಪೋಕ್ಸೋ ಪ್ರಕರಣ ದಾಖಲು; ನೆಟ್ಟಿಗರ ಆಕ್ರೋಶ
8 ವರ್ಷದ ವೈಷ್ಣವ್​ ಸತ್ಯವಾನ್ ನಿಮ್ಸೆ
Follow us
|

Updated on:Aug 18, 2023 | 12:17 PM

Maharashtra: ‘ನನ್ನ ಹೆಸರು ವೈಷ್ಣವ್ ಸತ್ಯವಾನ್ ನಿಮ್ಸೆ. ವೈಷ್ಣವ್ ಸತ್ಯವಾನ್​ ಎಂಬ ಕೀರ್ತನಕಾರರ ಮಗನಾದ ನಾನು ಸಾಮಾನ್ಯ ವರ್ಗದಿಂದ ಬಂದವನು. ನನಗೀಗ ಎಂಟು ವರ್ಷ. ನನ್ನ ನೆರೆಮನೆಯ ಬೌದ್ಧ ಕುಟುಂಬವು ನನ್ನ ವಿರುದ್ಧ ಅತ್ಯಾಚಾರ ಪ್ರಕರಣ, ಅಟ್ರಾಸಿಟಿ ಪ್ರಕರಣ ಮತ್ತು ಪೋಕ್ಸೋ (Pocso Act) ಪ್ರಕರಣ ದಾಖಲಿಸಿದೆ. ನಾನು ಈಗ ಶಾಲೆ ತಪ್ಪಿಸಿ ಕೋರ್ಟ್​ಗೆ ಹಾಜರಾಗಬೇಕಿದೆ. ನನ್ನ ಶಾಲೆಯ ಶಿಕ್ಷಕರೇ, ಉಪಮುಖ್ಯಮಂತ್ರಿಗಳೇ, ಮುಖ್ಯಮಂತ್ರಿಗಳೇ ದಯವಿಟ್ಟು ಈ ವಿಷಯದ ಬಗ್ಗೆ ಗಮನ ಹರಿಸಿ, ನನ್ನ ತಿಳಿವಳಿಕೆಯನ್ನು ವಿಸ್ತರಿಸಿ’ ಈಗ ರೆಡ್ಡಿಟ್​ನಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಎಂಟು ವರ್ಷದ ಈ ಬಾಲಕ ಹೀಗೆ ಹಂಚಿಕೊಂಡಿದ್ದಾನೆ.

ಇದನ್ನೂ ಓದಿ : Viral Optical Illusion; ಇಷ್ಟೊತ್ತಾದರೂ ಏಳುತ್ತಲೇ ಇಲ್ಲ, ವಾಕಿಂಗ್​ಗೆ ತಡವಾಗುತ್ತಿದೆ ಇವರನ್ನು ಹುಡುಕಿ ಕಳಿಸುವಿರಾ?

ಈ ವಿಡಿಯೋ ನೋಡಿದ ನೆಟ್ಟಿಗರು ದಿಗ್ಭ್ರಾಂತರಾಗಿದ್ದಾರೆ. 8 ವರ್ಷದ ಮಗುವಿನ ವಿರುದ್ಧ ಇಂಥ ಪ್ರಕರಣಗಳನ್ನು ದಾಖಲಿಸಲು ಸಾಧ್ಯವೆ? ಇದರಿಂದ ಮಗುವಿನ ಮನಸ್ಸಿನ ಮೇಲೆ ಎಂಥ ಪರಿಣಾಮ ಉಂಟಾಗಬಹುದು? ಕಾನೂನಿನ ದುರುಪಯೋಗ ಪಡೆದುಕೊಳ್ಳುತ್ತಿರುವವರಿಗೆ ಧಿಕ್ಕಾರ ಎಂದಿದ್ದಾರೆ. ಈ ಮಗು ಶಾಲೆಯಲ್ಲಿರಲು ಅರ್ಹ ನ್ಯಾಯಾಲಯದಲ್ಲಿ ಅಲ್ಲ, 8 ವರ್ಷದ ಮಗುವಿನ ವಿರುದ್ಧ ಇಂಥ ಪ್ರಕರಣ? ದೇವರೇ, ಇನ್ನು ಮಾಧ್ಯಮ ಇದನ್ನು ಹೇಗೆ ನಿಭಾಯಿಸುತ್ತದೆಯೋ? ಎಂದು ಆತಂಕ ವ್ಯಕಪಡಿಸಿದ್ದಾರೆ ಒಬ್ಬರು.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಸತ್ಯವಾನ್​ ವೈಷ್ಣವ್​ ನಿಮ್ಸೆ ಮರಾಠಿಯಲ್ಲಿ ತನ್ನ ಸಂಕಷ್ಟ ಹಂಚಿಕೊಂಡ ವಿಡಿಯೋ

8yr old booked for rape and sc/st atrocity case by u/samsaracope in IndiaSpeaks

ಅರ್ಥವಾಯಿತು! ಇವರು, ಕಾನೂನನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಸುಳ್ಳು ಪ್ರಕರಣವನ್ನು ದಾಖಲಿಸಿದ ಆ ಕುಟುಂಬ ಸದಸ್ಯರನ್ನು ಜೈಲಿಗೆ ಕಳಿಸಿ ಬುದ್ಧಿ ಕಲಿಸಬೇಕು ಎಂದಿದ್ದಾರೆ ಮತ್ತೊಬ್ಬರು. ಮುಗ್ಧ ಮಗುವಿನ ಬಾಲ್ಯವನ್ನು ಹಾಳು ಮಾಡಿದ್ದಾರೆ, ನಾಚಿಕೆಯಾಗಬೇಕು ಅವರಿಗೆ ಎಂದಿದ್ದಾರೆ ಮತ್ತೊಬ್ಬರು. 8 ವರ್ಷದ ಮಗುವಿಗೆ ಲೈಂಗಿಕ ವಿಷಯಗಳ ಬಗ್ಗೆ ಏನು ತಿಳಿದಿರಲು ಸಾಧ್ಯ, ಇಂಥ ಸುಳ್ಳು ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾದರೂ ಹೇಗೆ? ಎಂದು ಕೇಳಿದ್ದಾರೆ ಮತ್ತೊಬ್ಬರು. ಇದೇನು ಹೊಸದಲ್ಲ, ಮಕ್ಕಳ ವಿರುದ್ಧ ಎಸ್‌ಸಿ/ಎಸ್‌ಟಿ ಅಟ್ರಾಸಿಟಿ ಕೇಸ್ ದಾಖಲಿಸಿದ ಬಗ್ಗೆ ಈ ಹಿಂದೆ ಕೂಡ ಓದಿದ್ದೇನೆ ಎಂದಿದ್ದಾರೆ ಒಬ್ಬರು.

ಇದನ್ನೂ ಓದಿ : Viral Video: ಸೆಲ್ಫೀ ತೆಗೆದುಕೊಳ್ಳುತ್ತಿರುವ ಗಾಂಧೀಜಿ, ಭಗತ್, ಬೋಸ್​, ಝಾನ್ಸೀ, ಪಾಂಡೆ, ತಿಲಕ್

ದುರುಪಯೋಗಪಡಿಸಿಕೊಳ್ಳುವ ಇಂಥ ಕಾಯ್ದೆಗಳನ್ನೇ ತೆಗೆದುಹಾಕಿ, ಎಲ್ಲಾ ಜನರು ಒಂದೇ ಎನ್ನುವ ಭಾವನೆ ಮೂಡಿಸಿ ಎಂದಿದ್ದಾರೆ ಒಬ್ಬರು. ಮೀಸಲಾತಿ ಆರ್ಥಿಕತೆಗಿರಲಿ, ಜಾತಿ ಆಧಾರದ ಮೇಲೆ ಅಲ್ಲ ಎಂದಿದ್ದಾರೆ ಮತ್ತೊಬ್ಬರು. ಭಾರತದಲ್ಲಿ ಹಣಕಾಸಿನ ಜವಾಬ್ದಾರಿ ತಮಾಷೆಯ ವಿಷಯವಾಗಿದೆ. ನಾನು 5 ಲಕ್ಷಕ್ಕಿಂತಲೂ ಕಡಿಮೆ ಆದಾಯ ಹೊಂದಿದ್ದೇನೆ ಮತ್ತು ಕೋಟಿಗಟ್ಟಲೆ ಮೌಲ್ಯದ ಆಸ್ತಿ ಹೊಂದಿದ್ದೇನೆ ಎಂದು ಹೇಳಿಕೊಳ್ಳುವ ಅನೇಕ ಜನರನ್ನು ನಾನು ನೋಡಿದ್ದೇನೆ ಎಂದಿದ್ದಾರೆ ಇನ್ನೊಬ್ಬರು. ಅಪ್ರಾಪ್ತ ವಯಸ್ಕರ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಬಹುದೆ? ಹಾಗಿದ್ದರೆ ಹದಿಹರೆಯದ ಮಕ್ಕಳನ್ನೆಲ್ಲ ಬಂಧಿಸಬೇಕಾಗುತ್ತದೆ! ಎಂದಿದ್ದಾರೆ ಮತ್ತೊಬ್ಬರು.

ಈ ವಿಷಯವಾಗಿ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 12:06 pm, Fri, 18 August 23

ತಾಜಾ ಸುದ್ದಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ