AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಮಾಣ ಹಂತದ ಸುರಂಗದಲ್ಲಿ ಸಿಲುಕಿಕೊಂಡ 9 ಕಾರ್ಮಿಕರು; ರಕ್ಷಣೆಗೆ ಎಸ್​ಡಿಇಆರ್​ಎಫ್​ ತಂಡ ಹರಸಾಹಸ

ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಒಂಬತ್ತು ಕಾರ್ಮಿಕರಲ್ಲಿ ಏಳು ಕಾರ್ಮಿಕರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿರ್ಮಾಣ ಹಂತದ ಸುರಂಗದಲ್ಲಿ ಸಿಲುಕಿಕೊಂಡ 9 ಕಾರ್ಮಿಕರು; ರಕ್ಷಣೆಗೆ ಎಸ್​ಡಿಇಆರ್​ಎಫ್​ ತಂಡ ಹರಸಾಹಸ
ಸುರಂಗದಲ್ಲಿ ಸಿಲಿಕಿಕೊಂಡಿರುವವರನ್ನು ರಕ್ಷಿಸುತ್ತಿರುವುದು
TV9 Web
| Edited By: |

Updated on: Feb 13, 2022 | 10:54 AM

Share

ಭೋಪಾಲ್: ಬಾರ್ಗಿ ಕಾಲುವೆ ಯೋಜನೆಯ ನಿರ್ಮಾಣ ಹಂತದ ಸುರಂಗದಲ್ಲಿ ಒಂಬತ್ತು ಕಾರ್ಮಿಕರು (labourers) ಸಿಕ್ಕಿಬಿದ್ದಿರುವಂತಹ ಘಟನೆ ಸಂಭವಿಸಿದೆ. ಮಧ್ಯಪ್ರದೇಶದ ಕಟ್ನಿ ಜಿಲ್ಲೆಯ ಸ್ಲೀಮನಾಬಾದ್‌ನಲ್ಲಿ ಈ ಘಟನೆ ನಡೆದಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಒಂಬತ್ತು ಕಾರ್ಮಿಕರಲ್ಲಿ ಏಳು ಕಾರ್ಮಿಕರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯ ವಿಪತ್ತು ತುರ್ತು ನಿರ್ವಹಣಾ ಪಡೆ (SDERF) ತಂಡದೊಂದಿಗೆ ಸ್ಥಳೀಯ ಅಧಿಕಾರಿಗಳು ಉಳಿದ ಕಾರ್ಮಿಕರನ್ನು ಸುರಕ್ಷಿತವಾಗಿ ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ. ಎಸ್‌ಡಿಇಆರ್‌ಎಫ್ ತಂಡ ಜಬಲ್‌ಪುರದಿಂದ ಆಗಮಿಸಿದೆ ಎಂದು ಕಟ್ನಿ ಕಲೆಕ್ಟರ್ ಪ್ರಿಯಾಂಕ್ ಮಿಶ್ರಾ ತಿಳಿಸಿದ್ದಾರೆ.

ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ

ಮಧ್ಯಪ್ರದೇಶದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ರಾಜೇಶ್ ರಾಜೋರಾ ಅವರು ರಾಜ್ಯ ಸಚಿವಾಲಯದಿಂದ ರಕ್ಷಣಾ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಅಗತ್ಯ ಸಾಧನಗಳೊಂದಿಗೆ ಎಸ್‌ಡಿಇಆರ್‌ಎಫ್ ತಂಡವು ಶಾಫ್ಟ್ ಅಗೆಯುವ ಮೂಲಕ ಕಾರ್ಮಿಕರನ್ನು ತಲುಪಲು ಪ್ರಯತ್ನಿಸುತ್ತಿದೆ. ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆಗಾಗಿ ಜಿಲ್ಲಾಧಿಕಾರಿ ಮತ್ತು ಎಸ್‌ಪಿ ಸ್ಥಳದಲ್ಲಿ ಬಿಡು ಬಿಟ್ಟಿದ್ದಾರೆ ಎಂದು ಶ್ರೀ ರಾಜೋರಾ ಪಿಟಿಐಗೆ ತಿಳಿಸಿದ್ದಾರೆ.

ಸಿಕ್ಕಿಬಿದ್ದ ಕಾರ್ಮಿಕರು ರಕ್ಷಣಾ ಸಿಬ್ಬಂದಿಯ ಕರೆಗಳಿಗೆ ಸ್ಪಂದಿಸುತ್ತಿದ್ದಾರೆ ಎಂದು ಸ್ಲೀಮನಾಬಾದ್ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಸಂಘ ಮಿತ್ರ ಗೌತಮ್ ಹೇಳಿದ್ದಾರೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕೂಡ ಸ್ಲೀಮನಾಬಾದ್‌ನಲ್ಲಿ ನಡೆದ ಘಟನೆಯ ಬಗ್ಗೆ ಗಮನ ಹರಿಸಿದ್ದಾರೆ. ಕಟ್ನಿ ಸಂಗ್ರಾಹಕರೊಂದಿಗೆ ದೂರವಾಣಿ ಸಂಭಾಷಣೆಯಲ್ಲಿ ಅವರು ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ:

Shocking Video: ಕೆಳಗೆ ಬಿದ್ದ ಬಟ್ಟೆ ತರಲು ಮಗನನ್ನು ಸೀರೆಗೆ ಕಟ್ಟಿ 10ನೇ ಮಹಡಿಯಿಂದ ನೇತಾಡಿಸಿದ ತಾಯಿ!

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್