AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

9ನೇ ವಯಸ್ಸಿಗೆ ಯೋಗ ಟೀಚರ್​ ಆಗುವ ಮೂಲಕ ಗಿನ್ನಿಸ್​ ವರ್ಲ್ಡ್​ ರೆಕಾರ್ಡ್ ನಿರ್ಮಿಸಿದ ​ ಬಾಲಕ

ಇಲ್ಲೊಬ್ಬ 9 ವರ್ಷದ ಬಾಲಕ  ಅತೀ ಕಿರಿಯ ಪ್ರಮಾಣೀಕೃತ ಯೋಗ ಟೀಚರ್​ ಎನಿಸಿಕೊಂಡಿದ್ದಾನೆ. ಅಲ್ಲದೆ ಅತಿ ಕಿರಿಯ ಯೋಗ ಟೀಚರ್​ ಎನಿಸಿಕೊಳ್ಳುv ಮೂಲಕ  ಗಿನ್ನಿಸ್​ ವರ್ಲ್ಡ್​​ ರೆಕಾರ್ಡ್​ ನಿರ್ಮಿಸಿದ್ದಾನೆ.

9ನೇ ವಯಸ್ಸಿಗೆ ಯೋಗ ಟೀಚರ್​ ಆಗುವ ಮೂಲಕ ಗಿನ್ನಿಸ್​ ವರ್ಲ್ಡ್​ ರೆಕಾರ್ಡ್ ನಿರ್ಮಿಸಿದ ​ ಬಾಲಕ
ರೆಯಾಶ್​ ಸುರಾನಿ
TV9 Web
| Edited By: |

Updated on:Feb 19, 2022 | 3:44 PM

Share

ಸಾಧನೆಗೆ ವಯಸ್ಸಿನ ಹಂಗಿಲ್ಲ, ವಯಸ್ಸು ಎಷ್ಟೇ ದಾಟಿದರು, ಎಷ್ಟೇ ಸಣ್ಣದಾದರೂ ಸಾಧನೆ ಸಾಧ್ಯವಾಗುವುದು ಮಾತ್ರ ದೃಢ ಸಂಕಲ್ಪದಿಂದಲೇ ಆಗಿದೆ. ಇಲ್ಲೊಬ್ಬ 9 ವರ್ಷದ ಬಾಲಕ  ಅತೀ ಕಿರಿಯ ಪ್ರಮಾಣೀಕೃತ ಯೋಗ ಟೀಚರ್ (Yoga Teacher)​ ಎನಿಸಿಕೊಂಡಿದ್ದಾನೆ. ಅಲ್ಲದೆ ಅತಿ ಕಿರಿಯ ಯೋಗ ಟೀಚರ್​ ಎನಿಸಿಕೊಳ್ಳುವ ಮೂಲಕ  ಗಿನ್ನಿಸ್​ ವರ್ಲ್ಡ್​​ ರೆಕಾರ್ಡ್(Guinness World Record)​ ನಿರ್ಮಿಸಿದ್ದಾನೆ. ಈ ಕುರಿತು ಗಿನ್ನೀ ಸ್ ​ವರ್ಲ್ಡ್​​ ರೆಕಾರ್ಡ್​ ಸಂಸ್ಥೆ ತನ್ನ ಯುಟ್ಯೂಬ್ ​(YouTube) ನಲ್ಲಿ ಮಾಹಿತಿ ಹಂಚಿಕೊಂಡಿದೆ.

ರೆಯಾಶ್​ ಸುರಾನಿ ಎನ್ನುವ 9 ವರ್ಷದ ಬಾಲಕ ಈ ಸಾಧನೆ ಮಾಡಿದ್ದಾನೆ. ಗಿನ್ನೀಸ್​ವರ್ಲ್ಡ್​​ ರೆಕಾರ್ಡ್​ ಹಂಚಿಕೊಂಡಿರುವ ವಿಡಿಯೋದಲ್ಲಿ  ಬಾಲಕ ಮೊದಲು ತನ್ನ ಪರಿಚಯವನ್ನು ಮಾಡಿಕೊಳ್ಳುತ್ತಾನೆ. ನಂತರ ಯೋಗದ ಬಗೆಗೆ ಆತನಿಗಿರುವ ಆಸಕ್ತಿಯ ಬಗ್ಗೆ ಹೇಳುತ್ತಾನೆ. ಯೋಗವನ್ನು ಮಾಡುವುದನ್ನು ನಾನು ಎಂಜಾಯ್​ ಮಾಡುತ್ತೇನೆ ಎನ್ನುವ ರೆಯಾಶ್​ ಯೋಗದಿಂದ ಇಂಟರ್​ನೆಟ್​ ಮತ್ತುಏರ್​ಕೂಲರ್​ಗಳಿಲ್ಲದೆಯೂ ಬದುಕಬಹುದು ಎಂದಿದ್ದಾನೆ. ಸದ್ಯ ಈ ವಿಡಿಯೋ ಎಲ್ಲೆಡೆ ಸಖತ್​ ವೈರಲ್​ ಆಗಿದೆ. ಯುಟ್ಯೂಬ್​ನಲ್ಲಿ ಹಂಚಿಕೊಂಡ ವಿಡಿಯೋ 500 ಕ್ಕೂ ಹೆಚ್ಚು ಲೈಕ್ಸ್​ಗಳನ್ನು ಗಳಿಸಿದ್ದು, ಬಾಲಕನ ಸಾಧನೆ ನೋಡಿ ನೆಟ್ಟಿಗರು ಶ್ಲಾಘಿಸಿದ್ದಾರೆ.

ರೆಯಾಶ್​ ಆನಂದ ಶೇಖರ್​ ಯೋಗ ಶಾಲೆಯಲ್ಲಿ 200 ಗಂಟೆಗಳ ಯೋಗ ತರಬೇತಿಯನ್ನು ಪಡೆದು ನಂತರ ಪ್ರಮಾಣಪತ್ರವನ್ನು ಪಡೆದಿದ್ದಾರೆ.  ವರ್ಲ್ಡ್​ ರೆಕಾರ್ಡ್​ ವರದಿಯ ಪ್ರಕಾರ ರೆಯಾಶ್​ ತನ್ನ 4ನೇ ವಯಸ್ಸಿಗೇ ಯೋಗದ ತರಬೇತಿ ಪಡೆಯಲು ಆರಂಭಿಸಿದ್ದನು.  ಸದ್ಯ ಅತೀ ಕಿರಿಯ ಯೋಗ ಟೀಚರ್​ ಬಗ್ಗೆ ಕೇಳಿ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:

ಕಿತ್ತು ತಿನ್ನುವ ಬಡತನವಿದ್ದರೂ ಆಹಾರಕ್ಕೆ ಹಣ ನೀಡಲು ಮುಂದಾದ ವೃದ್ಧೆ: ಸ್ವಾಭಿಮಾನದ ಬದುಕು ಎಂದ ನೆಟ್ಟಿಗರು

Published On - 3:43 pm, Sat, 19 February 22

Follow Us
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ