AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

9ನೇ ವಯಸ್ಸಿಗೆ ಯೋಗ ಟೀಚರ್​ ಆಗುವ ಮೂಲಕ ಗಿನ್ನಿಸ್​ ವರ್ಲ್ಡ್​ ರೆಕಾರ್ಡ್ ನಿರ್ಮಿಸಿದ ​ ಬಾಲಕ

ಇಲ್ಲೊಬ್ಬ 9 ವರ್ಷದ ಬಾಲಕ  ಅತೀ ಕಿರಿಯ ಪ್ರಮಾಣೀಕೃತ ಯೋಗ ಟೀಚರ್​ ಎನಿಸಿಕೊಂಡಿದ್ದಾನೆ. ಅಲ್ಲದೆ ಅತಿ ಕಿರಿಯ ಯೋಗ ಟೀಚರ್​ ಎನಿಸಿಕೊಳ್ಳುv ಮೂಲಕ  ಗಿನ್ನಿಸ್​ ವರ್ಲ್ಡ್​​ ರೆಕಾರ್ಡ್​ ನಿರ್ಮಿಸಿದ್ದಾನೆ.

9ನೇ ವಯಸ್ಸಿಗೆ ಯೋಗ ಟೀಚರ್​ ಆಗುವ ಮೂಲಕ ಗಿನ್ನಿಸ್​ ವರ್ಲ್ಡ್​ ರೆಕಾರ್ಡ್ ನಿರ್ಮಿಸಿದ ​ ಬಾಲಕ
ರೆಯಾಶ್​ ಸುರಾನಿ
TV9 Web
| Edited By: |

Updated on:Feb 19, 2022 | 3:44 PM

Share

ಸಾಧನೆಗೆ ವಯಸ್ಸಿನ ಹಂಗಿಲ್ಲ, ವಯಸ್ಸು ಎಷ್ಟೇ ದಾಟಿದರು, ಎಷ್ಟೇ ಸಣ್ಣದಾದರೂ ಸಾಧನೆ ಸಾಧ್ಯವಾಗುವುದು ಮಾತ್ರ ದೃಢ ಸಂಕಲ್ಪದಿಂದಲೇ ಆಗಿದೆ. ಇಲ್ಲೊಬ್ಬ 9 ವರ್ಷದ ಬಾಲಕ  ಅತೀ ಕಿರಿಯ ಪ್ರಮಾಣೀಕೃತ ಯೋಗ ಟೀಚರ್ (Yoga Teacher)​ ಎನಿಸಿಕೊಂಡಿದ್ದಾನೆ. ಅಲ್ಲದೆ ಅತಿ ಕಿರಿಯ ಯೋಗ ಟೀಚರ್​ ಎನಿಸಿಕೊಳ್ಳುವ ಮೂಲಕ  ಗಿನ್ನಿಸ್​ ವರ್ಲ್ಡ್​​ ರೆಕಾರ್ಡ್(Guinness World Record)​ ನಿರ್ಮಿಸಿದ್ದಾನೆ. ಈ ಕುರಿತು ಗಿನ್ನೀ ಸ್ ​ವರ್ಲ್ಡ್​​ ರೆಕಾರ್ಡ್​ ಸಂಸ್ಥೆ ತನ್ನ ಯುಟ್ಯೂಬ್ ​(YouTube) ನಲ್ಲಿ ಮಾಹಿತಿ ಹಂಚಿಕೊಂಡಿದೆ.

ರೆಯಾಶ್​ ಸುರಾನಿ ಎನ್ನುವ 9 ವರ್ಷದ ಬಾಲಕ ಈ ಸಾಧನೆ ಮಾಡಿದ್ದಾನೆ. ಗಿನ್ನೀಸ್​ವರ್ಲ್ಡ್​​ ರೆಕಾರ್ಡ್​ ಹಂಚಿಕೊಂಡಿರುವ ವಿಡಿಯೋದಲ್ಲಿ  ಬಾಲಕ ಮೊದಲು ತನ್ನ ಪರಿಚಯವನ್ನು ಮಾಡಿಕೊಳ್ಳುತ್ತಾನೆ. ನಂತರ ಯೋಗದ ಬಗೆಗೆ ಆತನಿಗಿರುವ ಆಸಕ್ತಿಯ ಬಗ್ಗೆ ಹೇಳುತ್ತಾನೆ. ಯೋಗವನ್ನು ಮಾಡುವುದನ್ನು ನಾನು ಎಂಜಾಯ್​ ಮಾಡುತ್ತೇನೆ ಎನ್ನುವ ರೆಯಾಶ್​ ಯೋಗದಿಂದ ಇಂಟರ್​ನೆಟ್​ ಮತ್ತುಏರ್​ಕೂಲರ್​ಗಳಿಲ್ಲದೆಯೂ ಬದುಕಬಹುದು ಎಂದಿದ್ದಾನೆ. ಸದ್ಯ ಈ ವಿಡಿಯೋ ಎಲ್ಲೆಡೆ ಸಖತ್​ ವೈರಲ್​ ಆಗಿದೆ. ಯುಟ್ಯೂಬ್​ನಲ್ಲಿ ಹಂಚಿಕೊಂಡ ವಿಡಿಯೋ 500 ಕ್ಕೂ ಹೆಚ್ಚು ಲೈಕ್ಸ್​ಗಳನ್ನು ಗಳಿಸಿದ್ದು, ಬಾಲಕನ ಸಾಧನೆ ನೋಡಿ ನೆಟ್ಟಿಗರು ಶ್ಲಾಘಿಸಿದ್ದಾರೆ.

ರೆಯಾಶ್​ ಆನಂದ ಶೇಖರ್​ ಯೋಗ ಶಾಲೆಯಲ್ಲಿ 200 ಗಂಟೆಗಳ ಯೋಗ ತರಬೇತಿಯನ್ನು ಪಡೆದು ನಂತರ ಪ್ರಮಾಣಪತ್ರವನ್ನು ಪಡೆದಿದ್ದಾರೆ.  ವರ್ಲ್ಡ್​ ರೆಕಾರ್ಡ್​ ವರದಿಯ ಪ್ರಕಾರ ರೆಯಾಶ್​ ತನ್ನ 4ನೇ ವಯಸ್ಸಿಗೇ ಯೋಗದ ತರಬೇತಿ ಪಡೆಯಲು ಆರಂಭಿಸಿದ್ದನು.  ಸದ್ಯ ಅತೀ ಕಿರಿಯ ಯೋಗ ಟೀಚರ್​ ಬಗ್ಗೆ ಕೇಳಿ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:

ಕಿತ್ತು ತಿನ್ನುವ ಬಡತನವಿದ್ದರೂ ಆಹಾರಕ್ಕೆ ಹಣ ನೀಡಲು ಮುಂದಾದ ವೃದ್ಧೆ: ಸ್ವಾಭಿಮಾನದ ಬದುಕು ಎಂದ ನೆಟ್ಟಿಗರು

Published On - 3:43 pm, Sat, 19 February 22

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ