AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕ ಮೊಬೈಲ್​​​​ನಲ್ಲಿ ಗೇಮ್ ಆಡುತ್ತಿದ್ದಂತೆ ಕಚೇರಿಯೊಳಗೆ ನುಗ್ಗಿದ ಚಿರತೆ

ಮಂಟಪದ ಬುಕಿಂಗ್ ಕಚೇರಿಯ ಪ್ರವೇಶ ದ್ವಾರದ ಬಳಿಯ ಬಾಲಕ ಕುಳಿತು ಮೊಬೈಲ್​​ನಲ್ಲಿ ಆಟವಾಡುತ್ತಿರುವುದನ್ನು ಸಿಸಿಟಿವಿಯಲ್ಲಿ ಕಾಣಬಹುದು. ಸ್ವಲ್ಪ ಹೊತ್ತಿನಲ್ಲಿ ಚಿರತೆ ಕಚೇರಿಯ ಒಳಗೆ ಬರುತ್ತಿರುವುದು ಕೂಡ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ದೃಶ್ಯಾವಳಿ ಎದೆ ನಡುಕ ಹುಟ್ಟಿಸುವುದಂತೂ ಖಂಡಿತಾ.

ಬಾಲಕ ಮೊಬೈಲ್​​​​ನಲ್ಲಿ ಗೇಮ್ ಆಡುತ್ತಿದ್ದಂತೆ ಕಚೇರಿಯೊಳಗೆ ನುಗ್ಗಿದ ಚಿರತೆ
ಅಕ್ಷತಾ ವರ್ಕಾಡಿ
|

Updated on: Mar 06, 2024 | 3:24 PM

Share

ಮಹಾರಾಷ್ಟ್ರದ ಮಾಲೆಗಾಂವ್‌ನ ಸಾಯಿ ಸೆಲೆಬ್ರೇಷನ್ ಮದುವೆ ಮಂಟಪದ ಬುಕಿಂಗ್ ಕಚೇರಿಯೊಳಗೆ ಏಕಾಏಕಿ ಚಿರತೆ ನುಗ್ಗಿದ್ದು, ಅಲ್ಲೇ ಪಕ್ಕದಲ್ಲಿ ಕುಳಿತು ಮೊಬೈನಲ್ಲಿ ಗೇಮ್ ಆಡುತ್ತಿದ್ದ ಬಾಲಕ ಮೋಹಿತ್ ಅಹಿರೆ (12) ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಚಿರತೆ ರಾಜಾರೋಷವಾಗಿ ಕಚೇರಿಯೊಳಗೆ ಪ್ರವೇಶಿಸುತ್ತಿರುವುದು ಅಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಿರತೆ ಒಳಗಡೆ ಪ್ರವೇಶಿಸುತ್ತಿದ್ದಂತೆ ಬಾಲಕ ತಕ್ಷಣ ಹೊರಗೆ ಧಾವಿಸಿ ಬಾಗಿಲು ಹಾಕಿಕೊಂಡಿದ್ದಾನೆ. ಬಾಲಕನ ಧೈರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮಾಲೆಗಾಂವ್-ನಂಪುರ್ ರಸ್ತೆಯಲ್ಲಿರುವ ಸಾಯಿ ಸೆಲೆಬ್ರೇಷನ್ ಮದುವೆ ಮಂಟಪದಲ್ಲಿ ಬೆಳಗ್ಗೆ 7 ಗಂಟೆಗೆ ಈ ಘಟನೆ ನಡೆದಿದೆ. ಆ ಸಮಯದಲ್ಲಿ, ಮಂಟಪದ ಬುಕಿಂಗ್ ಕಚೇರಿಯ ಪ್ರವೇಶ ದ್ವಾರದ ಬಳಿಯ ಬಾಲಕ ಕುಳಿತು ಮೊಬೈಲ್​​ನಲ್ಲಿ ಆಟವಾಡುತ್ತಿರುವುದನ್ನು ಸಿಸಿಟಿವಿಯಲ್ಲಿ ಕಾಣಬಹುದು. ಸ್ವಲ್ಪ ಹೊತ್ತಿನಲ್ಲಿ ಚಿರತೆ ಕಚೇರಿಯ ಒಳಗೆ ಬರುತ್ತಿರುವುದು ಕೂಡ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ದೃಶ್ಯಾವಳಿ ಎದೆ ನಡುಕ ಹುಟ್ಟಿಸುವುದಂತೂ ಖಂಡಿತಾ.

ಇದನ್ನೂ ಓದಿ: Mental Abuse: ಫಸ್ಟ್ ನೈಟ್‌ ದಿನದಿಂದಲೇ ಗಂಡು ಮಗು ಹೆರುವಂತೆ ಅತ್ತೆ ಮಾವನಿಂದ ಕಿರುಕುಳ; ಕೋರ್ಟ್​​​ ಮೆಟ್ಟಿಲೇರಿದ ಯುವತಿ

“ಚಿರತೆ ತುಂಬಾ ಹತ್ತಿರದಲ್ಲಿತ್ತು. ನನ್ನ ಮುಂದೆಯೇ ಕ್ಯಾಬಿನ್‌ಗೆ ಕಾಲಿಟ್ಟಿದ್ದನ್ನು ಕಂಡು ನನಗೆ ಭಯವಾಯಿತು, ಆದರೆ ನಾನು ಸದ್ದಿಲ್ಲದೆ ಬೆಂಚ್‌ನಿಂದ ಇಳಿದು ಹೊರಗೆ ಓಡಿ ಬಾಗಿಲು ಮುಚ್ಚಿದೆ” ಎಂದು ಅಹಿರೆ ಕೇಳಿಕೊಂಡಿರುವುದು ವರದಿಯಾಗಿದೆ. ನಂತರ ಸ್ಥಳಕ್ಕಾಗಮಿಸಿದ ಸ್ಥಳೀಯ ಪೊಲೀಸರು ಹಾಗೂ ಅರಣ್ಯ ಇಲಾಖೆಯ ತಂಡ ಚಿರತೆಗೆ ಅರಿವಳಿಕೆ ಚುಚ್ಚುಮದ್ದು ನೀಡಿ, ಪ್ರಜ್ಞೆ ತಪ್ಪಿಸಿ ನಂತರ ಎಚ್ಚರಿಕೆಯಿಂದ ಚಿರತೆಯನ್ನು ರಕ್ಷಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!