AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಚಿಕನ್‌ ಶವರ್ಮಾ ತಿಂದು 14 ವರ್ಷದ ಬಾಲಕಿ ಸಾವು; 13 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ಚಿಕನ್ ಶವರ್ಮಾ ತಿಂದ ಕೆಲಹೊತ್ತಿನಲ್ಲಿ 14ರ ಹರೆಯದ ಬಾಲಕಿಗೆ ವಿಪರೀತ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಆಸ್ಪ್ರತೆಗೆ ದಾಖಲಿಸಿದ ಕೆಲ ಹೊತ್ತಿನಲ್ಲೇ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಫಟನೆ ನಡೆದಿದೆ. ಇದಲ್ಲದೇ ಇದೇ ರೆಸ್ಟೋರೆಂಟ್‌ನಲ್ಲಿ ಸೇವಿಸಿದ 13 ವೈದ್ಯಕೀಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Viral News: ಚಿಕನ್‌ ಶವರ್ಮಾ ತಿಂದು 14 ವರ್ಷದ ಬಾಲಕಿ ಸಾವು; 13 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು
Chicken shawarmImage Credit source: Pinterest
ಅಕ್ಷತಾ ವರ್ಕಾಡಿ
|

Updated on:Sep 20, 2023 | 2:30 PM

Share

ತಮಿಳುನಾಡು: ಚಿಕನ್​​​ ಅಂದ್ರೇನೇ ಸಾಕು ಮಾಂಸಹಾರಿಗಳಿಗೆ ಬಾಯಲ್ಲಿ ನೀರೂರುವುದಂತೂ ಖಂಡಿತಾ. ಆದರೆ ಮಾಂಸಹಾರಿಗಳಿಗೆ ಭಯ ಹುಟ್ಟಿಸುವ ಘಟನೆಯೊಂದು ನಡೆದಿದೆ. ಚಿಕನ್ ಶವರ್ಮಾ(Chicken shawarma) ತಿಂದ ಕೆಲಹೊತ್ತಿನಲ್ಲಿ 14ರ ಹರೆಯದ ಬಾಲಕಿಗೆ ವಿಪರೀತ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಆಸ್ಪ್ರತೆಗೆ ದಾಖಲಿಸಿದ ಕೆಲ ಹೊತ್ತಿನಲ್ಲೇ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಇದಲ್ಲದೇ ಇದೇ ರೆಸ್ಟೋರೆಂಟ್‌ನಲ್ಲಿ ಸೇವಿಸಿದ 13 ವೈದ್ಯಕೀಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ರಾತ್ರಿ ಶವರ್ಮಾ ತಿಂದಿದ್ದು, ತಿಂದ ಕೆಲ ಹೊತ್ತಿನಲ್ಲೇ ವಿಪರೀತ ಹೊಟ್ಟೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಬಾಲಕಿಯನ್ನು ತಮಿಳುನಾಡಿನ ನಾಮಕ್ಕಲ್‌ನ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಮೃತಪಟ್ಟಿರುವುದು ವರದಿಯಾಗಿದೆ. ಬಾಲಕಿಯ ತಂದೆ  ರೆಸ್ಟೋರೆಂಟ್‌ನಿಂದ ಹಲವಾರು ಮಾಂಸಾಹಾರಿ ಆಹಾರವನ್ನು ಮನೆಗೆ ತಂದಿದ್ದು, ಬಾಲಕಿ ಚಿಕನ್‌ ಶವರ್ಮಾ ತಿಂದಿದ್ದಾಳೆ.

ಇದನ್ನೂ ಓದಿ: ಆಗ್ರಾ; ಸರ್ಕಾರಿ ಮಕ್ಕಳ ಆಶ್ರಮದಲ್ಲಿ ಅಪ್ರಾಪ್ತ ಬಾಲಕಿಗೆ ಚಪ್ಪಲಿಯಿಂದ ಥಳಿಸಿದ ಮಹಿಳಾ ಅಧಿಕಾರಿ; ತನಿಖೆಗೆ ಆದೇಶ

ಇದೇ ರೆಸ್ಟೋರೆಂಟ್‌ನಲ್ಲಿ ಮಾಂಸಾಹಾರ ಸೇವಿಸಿ 13 ವೈದ್ಯಕೀಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಧಿಕಾರಿಗಳು ತಕ್ಷಣ ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿ, ಆಹಾರದ ಮಾದರಿಗಳನ್ನು ಸಂಗ್ರಹಿಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಗ್ರಿಲ್ಡ್ ಚಿಕನ್, ತಂದೂರಿ ಚಿಕನ್ ಅಥವಾ ಷಾವರ್ಮಾ ತಿಂದ ನಂತರ ಅಸ್ವಸ್ಥಗೊಂಡಿರುವುದರಿಂದ ಅಲ್ಲಿ ಬಳಸಲಾಗಿದ್ದ ಮಾಂಸವನ್ನು ಪರೀಕ್ಷೆಗೆ ಒಳಪಡಿಸಲಾಗಿದೆ  ಆಹಾರ ಸುರಕ್ಷತಾ ತಂಡ ತಿಳಿಸಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 2:23 pm, Wed, 20 September 23

Follow Us
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?