AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರಾಶ್ರಿತ ಉಕ್ರೇನ್​ನಿಯನ್ನರಿಗಾಗಿ ಅಪ್ಲಿಕೇಶನ್ ಸಿದ್ಧಪಡಿಸಿದ ಭಾರತದ 15 ವರ್ಷದ ಹುಡುಗ

ಸಾಫ್ಟ್‌ವೇರ್ ಡೆವಲಪರ್ ತೇಜಸ್ ರಚಿಸಿರುವ ಈ ಆ್ಯಪ್ ಹಲವು ವಿಶೇಷತೆಗಳನ್ನು ಹೊಂದಿದೆ. ಇದರಲ್ಲಿ ನಿರಾಶ್ರಿತರಿಗೆ ಹತ್ತಿರದ ನೆರವು ಸ್ಥಳಕ್ಕಾಗಿ ಇಡೀ ಪ್ರಪಂಚದ ನಕ್ಷೆಯನ್ನು ನೀಡಲಾಗುತ್ತದೆ.

ನಿರಾಶ್ರಿತ ಉಕ್ರೇನ್​ನಿಯನ್ನರಿಗಾಗಿ ಅಪ್ಲಿಕೇಶನ್ ಸಿದ್ಧಪಡಿಸಿದ ಭಾರತದ 15 ವರ್ಷದ ಹುಡುಗ
ಆ್ಯಪ್ ಕಂಡುಹಿಡಿದ ಭಾರತೀಯ ಹುಡುಗ ತೇಜಸ್
TV9 Web
| Edited By: |

Updated on: Apr 01, 2022 | 10:38 AM

Share

ರಷ್ಯಾ ಮತ್ತು ಉಕ್ರೇನ್ ನಡುವೆ ಒಂದು ತಿಂಗಳಿಗೂ ಹೆಚ್ಚು ಕಾಲ ಯುದ್ಧ ನಡೆಯುತ್ತಿದೆ. ಯುದ್ಧದಿಂದಾಗಿ ಲಕ್ಷಾಂತರ ಜನರು ನಿರಾಶ್ರಿತರಾಗಿ ಬೇರೆ ದೇಶಗಳಿಗೆ ಸ್ಥಳಾಂತರಗೊಳ್ಳುತ್ತಿದ್ದಾರೆ. ಈ ನಿರಾಶ್ರಿತರಿಗೆ ಸಹಾಯ ಮಾಡಲು, 15 ವರ್ಷದ ಭಾರತೀಯ ಹುಡುಗನೊಬ್ಬ ಆ್ಯಪ್ (APP) ​ನ್ನು ವಿನ್ಯಾಸಗೊಳಿಸಿದ್ದು, ಉಕ್ರೇನಿಯನ್ ನಿರಾಶ್ರಿತರು ಅಗತ್ಯವಿರುವ ಸಹಾಯವನ್ನು ಪಡೆಯಲು ಬಳಸಬಹುದಾಗಿದೆ. ಈ ಆ್ಯಪ್​ನ್ನು ಸಿಕ್ವೊಯಾ ಇಂಡಿಯಾ ಮ್ಯಾನೇಜರ್ ಜಿವಿ ರವಿಶಂಕರ್ ಅವರ ಪುತ್ರ ತೇಜಸ್ ಅಭಿವೃದ್ಧಿಪಡಿಸಿದ್ದಾರೆ. ಉತ್ತಮ ಸಾಫ್ಟ್‌ವೇರ್ ಎಂಜಿನಿಯರ್‌ಗಳು ಅಪ್ಲಿಕೇಶನ್​ನ್ನು ನಿರ್ಮಿಸಲು ತಿಂಗಳಾನು ತಿಂಗಳು ಸಮಯ ತೆಗೆದುಕೊಳ್ಳುತ್ತಾರೆ. ಆದರೆ ತೇಜಸ್ ಕೇವಲ ಎರಡು ವಾರಗಳಲ್ಲಿ ಈ ಅಪ್ಲಿಕೇಶನ್​ನ್ನು ಸಿದ್ಧಪಡಿಸಿದ್ದಾರೆ.  ತೇಜಸ್ ತಯಾರಿಸಿದ ಈ ಆ್ಯಪ್​ನ್ನು ಇದೀಗ ಗೂಗಲ್ ಪ್ಲೇಸ್ಟೋರ್ ನಲ್ಲಿ ಸೇರಿಸಲಾಗಿದ್ದು, ಅದರ ಲಿಂಕ್ ಅನ್ನು ಸ್ವತಃ ತೇಜಸ್ ಟ್ವೀಟ್ ಮಾಡಿದ್ದಾರೆ.

ಸಾಫ್ಟ್‌ವೇರ್ ಡೆವಲಪರ್ ತೇಜಸ್ ರಚಿಸಿರುವ ಈ ಆ್ಯಪ್ ಹಲವು ವಿಶೇಷತೆಗಳನ್ನು ಹೊಂದಿದೆ. ಇದರಲ್ಲಿ ನಿರಾಶ್ರಿತರಿಗೆ ಹತ್ತಿರದ ನೆರವು ಸ್ಥಳಕ್ಕಾಗಿ ಇಡೀ ಪ್ರಪಂಚದ ನಕ್ಷೆಯನ್ನು ನೀಡಲಾಗುತ್ತದೆ. ರಾಷ್ಟ್ರೀಯ ID ಆಧಾರಿತ ಪರಿಶೀಲನಾ ಸೌಲಭ್ಯಗಳು, ಆಹಾರ, ಉಳಿದುಕೊಳ್ಳಲು ಸುರಕ್ಷಿತ ಸ್ಥಳಗಳು ಮತ್ತು ಪ್ರಪಂಚದಾದ್ಯಂತ ಔಷಧಿಗಳಂತಹ ಅವಶ್ಯಕತೆಗಳನ್ನು ಪೂರೈಸಲು ಪಟ್ಟಿಯನ್ನು ಸಿದ್ಧಪಡಿಸಲಾಗಿದೆ.

ಅಗತ್ಯವಿರುವ ವ್ಯಕ್ತಿ ಕೇವಲ ಎರಡು ಕ್ಲಿಕ್‌ಗಳಲ್ಲಿ ಸಹಾಯ ಪಡೆಯಬಹುದು ಎಂದು ತೇಜಸ್ ತಮ್ಮ ಟ್ವೀಟ್‌ನಲ್ಲಿ ಬರೆದಿದ್ದಾರೆ. ಈ ಅಪ್ಲಿಕೇಶನ್ ಇಂಗ್ಲಿಷ್ ಜೊತೆಗೆ 12 ಇತರ ಭಾಷೆಗಳಲ್ಲಿ ಕಾರ್ಯನಿರ್ವಹಿಸುತ್ತದೆ. ತೇಜಸ್ ತಂದೆ ಜಿವಿ ರವಿಶಂಕರ್ ಅವರು ತಮ್ಮ ಸಾಧನೆಯನ್ನು ಟ್ವಿಟ್ಟರ್​​ನಲ್ಲಿ ಹಂಚಿಕೊಂಡಿದ್ದು, ಮಗನ ಯಶಸ್ಸನ್ನು ಶ್ಲಾಘಿಸಿದ್ದಾರೆ. ಕೆಲವು ದಿನಗಳ ಹಿಂದೆ, ತೇಜಸ್ ತನ್ನ ಅಪ್ಲಿಕೇಶನ್​ನ್ನು ಅನುಮೋದಿಸಲು ಗೂಗಲ್​ ಪ್ಲೇ ಗೆ ಮನವಿ ಮಾಡಿದ್ದರು.

ಇದನ್ನೂ ಓದಿ:

ಸುಲಭವಾಗಿ ಆನೆ ಸೊಂಡಿಲು ಮೇಲೆ ಕಾಲಿಟ್ಟು ಮೇಲೇರಿ ಕುಳಿತ ಮಾವುತ; ನಿಜ ಜೀವನದ ಬಾಹುಬಲಿ ಎಂದ ನೆಟ್ಟಿಗರು

ಹಳೇ ವಾಹನಗಳ ಮೇಲಿನ ತೆರಿಗೆ ಇಂದಿನಿಂದ 60 ಪಟ್ಟು ಹೆಚ್ಚು: ದುಬಾರಿ ಗ್ರೀನ್ ಟ್ಯಾಕ್ಸ್​ಗೆ ವಾಹನ ಮಾಲೀಕರ ತೀವ್ರ ಆಕ್ಷೇಪ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್