AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಪರೀಕ್ಷೆಯಲ್ಲಿ ಫೇಲ್ ಎಂಬ ಕಾರಣಕ್ಕೆ ಅಪಹರಣದ ನಾಟಕವಾಡಿದ ಡಿಗ್ರಿ ಹುಡುಗಿ

ವಾರ್ಷಿಕ ಪರೀಕ್ಷೆಯಲ್ಲಿ ಪೇಲ್ ಆದ ಕಾರಣ ತಂದೆ ತಾಯಿ ತನಗೆ ಗದರಿಸಬಹುದು ಎಂದು, ಭಯಪಟ್ಟು ತನ್ನನ್ನು ಅಪಹರಣ ಮಾಡಿದ್ದಾರೆ ಎಂದು ಬಾಲಕಿಯೊಬ್ಬಳು ನಾಟಕವನ್ನಾಡಿದ ಘಟನೆ ಮಧ್ಯಪ್ರೇಶದ ಇಂದೋರ್​​​ನಲ್ಲಿ ನಡೆದಿದೆ.

Viral News: ಪರೀಕ್ಷೆಯಲ್ಲಿ ಫೇಲ್ ಎಂಬ ಕಾರಣಕ್ಕೆ ಅಪಹರಣದ ನಾಟಕವಾಡಿದ ಡಿಗ್ರಿ ಹುಡುಗಿ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: May 15, 2023 | 2:40 PM

Share

ಮಧ್ಯಪ್ರದೇಶ: ವಾರ್ಷಿಕ ಪದವಿ ಪರೀಕ್ಷೆಯಲ್ಲಿ ಅನುತ್ತೀರ್ಣಳಾದ 17ರ ಹರೆಯದ ಹುಡುಗಿಯೊಬ್ಬಳು ತನ್ನ ಹೆತ್ತವರು ಗದರಿಸಬಹುದೆಂಬ ಭಯದಿಂದ ತನ್ನ ಅಪಹರಣದ ಕಥೆಯನ್ನು ತಾನೇ ಹೆಣೆದಿರುವ ಘಟನೆ ಮಧ್ಯಪ್ರದೇಶದ ಇಂದೋರ್​​​ನಲ್ಲಿ ನಡೆದಿದೆ. ಆಕೆ ತನ್ನ ಪೋಷಕರನ್ನು ಹೇಗೆ ಎದುರಿಸುವುದು ಎಂಬ ಭಯದಿಂದ ಇಂದೋರ್​​​ನಿಂದ ನೆರೆಯ ಉಜ್ಜಯಿನಿಗೆ ಪರಾರಿಯಾಗಿದ್ದಾಳೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಇಂದೋರ್ ಕಾಲೇಜೊಂದರಲ್ಲಿ ಬ್ಯಾಚುಲರ್ ಆಫ್ ಆಟ್ಸ್ (ಬಿಎ) ಕೋರ್ಸ್​​ನ ಮೊದದ ವರ್ಷ ಓದುತ್ತಿದ್ದ ಈ ಬಾಲಕಿಯನ್ನು ಇಂದೋರ್​​ನಿಂದ ಸುಮಾರು 50 ಕಿಮೀ ದೂರದಲ್ಲಿರುವ ಉಜ್ಜಯಿನಿಯಿಂದ ಸುರಕ್ಷಿತವಾಗಿ ಕರೆತಂದ ನಂತರ ಆಕೆಯನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಪರೀಕ್ಷೆಯ ಫಲಿತಾಂಶ ಪ್ರಕಟವಾದ ಕೆಲವೇ ಗಂಟೆಗಳಲ್ಲಿ ತನ್ನ ಮಗಳು ಕಾಲೇಜಿನಿಂದ ಮನೆಗೆ ಬರುತ್ತಿದ್ದಾಗ ಇಂದೋರ್​​​ನ ದೇವಸ್ಥಾನದ ಬಳಿಯಿಂದ ತನ್ನ ಮಗಳನ್ನು ಅಪಹರಿಸಲಾಗಿದೆ ಎಂದು ಬಾಲಕಿಯ ತಂದೆ ಶುಕ್ರವಾರ ರಾತ್ರಿ ದೂರು ನೀಡಿದ್ದಾರೆ’ ಎಂದು ಇಂದೋರ್​​​ನ ಬಂಗಾಂಗ ಪೋಲಿಸಗ ಠಾಣೆ ಇನ್ಸ್ಪೆಕ್ಟರ್ ರಾಜೇಂದ್ರ ಸೋನಿ ಹೇಳಿದ್ದಾರೆ.

ತನ್ನ ಮಗಳು ಅಪರಿಚಿತ ಸಂಖ್ಯೆಯಿಂದ ತನಗೆ ಕರೆ ಮಾಡಿ ಇಂದೋರ್​​​ನಲ್ಲಿ ಆಕೆಯನ್ನು ಅಪಹರಿಸಿರುವುದಾಗಿ ಹೇಳಿದಳು ಎಂದು ಬಾಲಕಿಯ ತಂದೆ ತಿಳಿಸಿದ್ದಾರೆ. ರಿಕ್ಷಾ ಹತ್ತುವ ಮೊದಲು ದೇವಸ್ಥಾನದ ಸಮೀಪದಲ್ಲಿ ತನ್ನನ್ನು ಪ್ರಾದ್ಯಾಪಕರೊಬ್ಬರು ಡ್ರಾಪ್ ಮಾಡಿದ್ದಾರೆ. ನಂತರ ರಿಕ್ಷಾ ಹತ್ತಿದ ಬಳಿಕ ರಿಕ್ಷಾ ಡ್ರೆವರ್ ತನ್ನನ್ನು ಯಾವುದೋ ನಿರ್ಜನ ಸ್ಥಳಕ್ಕೆ ಕರೆದೊಯ್ದು ಬಾಯಿಗೆ ಬಟ್ಟೆ ಕಟ್ಟಿ ಪ್ರಜ್ಞಾಹೀನಳನ್ನಾಗಿ ಮಾಡಿದ ಎಂದು ಆಕೆ ತನ್ನ ತಂದೆಗೆ ಕರೆ ಮಾಡಿ ಹೇಳಿದ್ದಾಳೆ.

ಇದನ್ನೂ ಓದಿ;Viral News : ಶಸ್ತ್ರಚಿಕಿತ್ಸೆ ಮೂಲಕ ಗುಪ್ತಾಂಗದಿಂದ ಬುಲೆಟ್ ತೆಗೆದು ಹಾಕಿದ ಮಹಿಳೆ!

ಬಾಲಕಿ ಹೇಳಿದ ಪ್ರದೇಶದ ಸಿಸಿಟಿವಿಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಬಾಲಕಿ ಹೇಳಿದಂತೆ ಯಾವುದೇ ಘಟನೆಗಳು ನಡೆದಿಲ್ಲ ಎಂದು ಪೋಲಿಸರ ಗಮನಕ್ಕೆ ಬಂತು. ಈ ಮಧ್ಯೆ ಉಜ್ಜಯಿನಿಯ ರೆಸ್ಟೋರೆಂಟ್ ಒಂದರಲ್ಲಿ ಹುಡುಗಿಯೊಬ್ಬಳು ಕುಳಿತಿರುವ ಬಗ್ಗೆ ಪೋಲಿಸರಿಗೆ ಮಾಹಿತಿ ಸಿಕ್ಕಿತು ಮತ್ತು ಆ ಹುಡುಗಿಯ ಫೋಟೋ ದೂರುದಾರರು ನೀಡಿದ ಫೋಟೊಗೆ ಹೊಂದಿಕೆಯಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಬಳಿಕ ಬಾಲಕಿಯನ್ನು ಇಂದೋರ್​​ಗೆ ಕರೆತಂದು ಆಕೆಯ ಬ್ಯಾಗ್​​​ನ್ನು ಪರಿಶೀಲಿಸಲಾಯಿತು. ಅದರಲ್ಲಿ ಇಂದೋರ್-ಉಜ್ಜಯಿನಿ ಬಸ್ ಟಿಕೆಟ್ ಮತ್ತು ಉಜ್ಜಯಿನಿಯ ರೆಸ್ಟೋರೆಂಟ್​​​ನ ಬಿಲ್ ಪತ್ತೆಯಾಗಿದೆ. ನಂತರ ವೈದ್ಯರು ಆಕೆಗೆ ಕೌನ್ಸೆಲಿಂಗ್ ಮಾಡಿದಾಗ, ಪರೀಕ್ಷೆಯಲ್ಲಿ ಫೇಲ್ ಆದ ಕಾರಣ ಹೆತ್ತವರನ್ನು ಎದುರಿಸುವ ಧೈರ್ಯ ಇಲ್ಲದೆ ಅಪಹರಣದ ನಾಟಕವಾಡಬೇಕಾಯಿತು ಎಂದು ಹೇಳಿದ್ದಾಳೆ. ಕೌನ್ಸೆಲಿಂಗ್ ಮುಗಿದ ಬಳಿಕ ಆ ಬಾಲಕಿಯನ್ನು ಪೋಷಕರಿಗೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ