AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಾರಿನ ಬಾನೆಟ್ ಮೇಲೆ ಕುಳಿತು ಸ್ಪೈಡರ್ ಮ್ಯಾನ್ ಸವಾರಿ; ಬಂಧಿಸಿ ಜೈಲಿಗಟ್ಟಿದ ಪೊಲೀಸರು

ಸೋಶಿಯಲ್​ ಮೀಡಿಯಾದಲ್ಲಿ ಫೇಮಸ್​ ಆಗಲು ಸ್ಪೈಡರ್ ಮ್ಯಾನ್ ವೇಷಧರಿಸಿ ಯುವಕನೊಬ್ಬ ಚಲಿಸುತ್ತಿರುವ ಕಾರಿನ ಬಾನೆಟ್‌ ಮೇಲೆ ಕುಳಿತುಕೊಂಡು ಸವಾರಿ ಮಾಡಿದ್ದಾನೆ. ಈ ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ದೆಹಲಿ ಪೊಲೀಸರು ತ್ವರಿತ ಕ್ರಮಕೈಗೊಂಡು ಭಾರೀ ದಂಡ ವಿಧಿಸಿದ್ದಾರೆ.

Viral Video: ಕಾರಿನ ಬಾನೆಟ್ ಮೇಲೆ ಕುಳಿತು ಸ್ಪೈಡರ್ ಮ್ಯಾನ್  ಸವಾರಿ; ಬಂಧಿಸಿ ಜೈಲಿಗಟ್ಟಿದ ಪೊಲೀಸರು
ಅಕ್ಷತಾ ವರ್ಕಾಡಿ
|

Updated on: Jul 24, 2024 | 6:27 PM

Share

ದೆಹಲಿ: ಸ್ಪೈಡರ್ ಮ್ಯಾನ್ ವೇಷಭೂಷಣವನ್ನು ಧರಿಸಿದ ವ್ಯಕ್ತಿಯೊಬ್ಬ ಕಾರಿನ ಬಾನೆಟ್ ಮೇಲೆ ಸವಾರಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆ ದೆಹಲಿ ಪೊಲೀಸರು ತ್ವರಿತ ಕ್ರಮ ಕೈಗೊಂಡಿದ್ದಾರೆ. ಚಾಲಕ ಮತ್ತುಸ್ಪೈಡರ್ ಮ್ಯಾನ್ ವೇಷಭೂಷಣವನ್ನು ಧರಿಸಿದ ವ್ಯಕ್ತಿಯ ಮೇಲೆ ಭಾರೀ ದಂಡ ವಿಧಿಸಿದ್ದಾರೆ. ಸದ್ಯ ಘಟನೆಗೆ ಸಂಬಂಧಿಸಿದ ಪೋಸ್ಟ್​​​ ಒಂದು ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

ದ್ವಾರಕಾ ರಸ್ತೆಗಳಲ್ಲಿ ಸ್ಪೈಡರ್ ಮ್ಯಾನ್ ವೇಷಧಾರಿ ವ್ಯಕ್ತಿಯೊಬ್ಬರು ಚಲಿಸುತ್ತಿರುವ ಕಾರಿನ ಬಾನೆಟ್‌ನಲ್ಲಿ ಕಾಣಿಸಿಕೊಂಡಿರುವ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ದೂರನ್ನು ಸ್ವೀಕರಿಸಿದ ದೆಹಲಿ ಟ್ರಾಫಿಕ್ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಸ್ಪೈಡರ್ ಮ್ಯಾನ್ ವೇಷಭೂಷಣದಲ್ಲಿರುವ ವ್ಯಕ್ತಿಯನ್ನು ಆದಿತ್ಯ (20) ಎಂದು ಗುರುತಿಸಲಾಗಿದ್ದು, ಆತ ನಜಾಫ್‌ಗಢದ ನಿವಾಸಿ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಬೀದಿ ಬದಿ ಟೀ ಮಾರುತ್ತಿದ್ದ ವ್ಯಕ್ತಿಯ ಮಗಳು ಸಿಎ ಪಾಸ್​​​; ವಿಡಿಯೋ ವೈರಲ್​​

ಕಾರಿನ ಚಾಲಕನನ್ನು ಮಹಾವೀರ್ ಎನ್‌ಕ್ಲೇವ್‌ನಲ್ಲಿ ನೆಲೆಸಿರುವ ಗೌರವ್ ಸಿಂಗ್ (19) ಎಂದು ಗುರುತಿಸಲಾಗಿದೆ. ವಾಹನದ ಮಾಲೀಕರು ಮತ್ತು ಚಾಲಕರು ಅಪಾಯಕಾರಿ ಚಾಲನೆ, ಮಾಲಿನ್ಯ ಪ್ರಮಾಣ ಪತ್ರವಿಲ್ಲದೆ ಚಾಲನೆ, ಮತ್ತು ಸೀಟ್‌ಬೆಲ್ಟ್ ಧರಿಸದಿದ್ದಕ್ಕಾಗಿ ಕಾನೂನು ಕ್ರಮ ಜರುಗಿಸಲಾಗಿದ್ದು, ಗರಿಷ್ಠ 26,000 ರೂ. ದಂಡ ಅಥವಾ ಜೈಲು ಶಿಕ್ಷೆ ಅಥವಾ ಎರಡನ್ನೂ ವಿಧಿಸಲಾಗುತ್ತದೆ ಎಂದು ಸುದ್ದಿ ಸಂಸ್ಥೆ ANI ಪೋಸ್ಟ್​​​ ಒಂದನ್ನು ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ