AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಕೈಗಳನ್ನು ಕಟ್ಟಿ 780 ಮೀಟರ್ ದೂರ ಸ್ವಿಮ್ಮಿಂಗ್ ಮಾಡಿದ 70 ವರ್ಷದ ಮಹಿಳೆ!

ಅಕಾಡೆಮಿಯಲ್ಲಿ ತರಬೇತಿ ಪಡೆದ ನನ್ನ ಮಕ್ಕಳನ್ನು ನೋಡಿ ನಾನು ಈಜು ಕಲಿಯಲು ನಿರ್ಧರಿಸಿದೆ. ನನ್ನ ಕುಟುಂಬದ ಒಂಬತ್ತು ಮಂದಿಗೆ ಈಜು ಗೊತ್ತು. ನನ್ನ ತರಬೇತುದಾರರಾದ ಸಾಜಿ ವಳಸ್ಸೆರಿ ಅವರು ನನ್ನ ಕೈಗಳನ್ನು ಕಟ್ಟಿಕೊಂಡು ಈಜಲು ಹೇಳಿ, ನನ್ನಲ್ಲಿ ಆತ್ಮವಿಶ್ವಾಸ ನೀಡಿದ್ದಾರೆ.

Viral News: ಕೈಗಳನ್ನು ಕಟ್ಟಿ 780 ಮೀಟರ್ ದೂರ ಸ್ವಿಮ್ಮಿಂಗ್ ಮಾಡಿದ 70 ವರ್ಷದ ಮಹಿಳೆ!
Viral News
TV9 Web
| Edited By: |

Updated on:Jun 30, 2022 | 12:05 PM

Share

ಕೊಚ್ಚಿ: ಎಲ್ಲಾ ವಯೋಮಾನದವರಿಗೂ ಈಜು ಕಲಿಯಲು ಉತ್ತೇಜನ ನೀಡಲು  ವಲಸ್ಸೆರಿ ರಿವರ್ ಸ್ವಿಮ್ಮಿಂಗ್ ಕ್ಲಬ್ ಈಜು ಸ್ಪರ್ಧೆಯನ್ನು  ಆಯೋಜಿಸಿತ್ತು.  70 ವರ್ಷದ ಮಹಿಳೆಯೊಬ್ಬರು 780 ಮೀಟರ್ ಅಗಲದ ಪೆರಿಯಾರ್ ನದಿಯಲ್ಲಿ ಕೈಗಳನ್ನು ಕಟ್ಟಿಕೊಂಡು ಈಜಿದ್ದಾರೆ. ಇದೀಗ ಈ ವಿಡಿಯೋ ಸಖತ್ ವೈರಲ್ ಆಗಿದೆ. ಮನಸ್ಸಿದರೆ ಯಾವುದೇ ಕೆಲಸವನ್ನು ಮಾಡಬಹುದು ಎಂಬುದಕ್ಕೆ ಆರಿಫಾ ವಿಕೆ  ಮಾದರಿಯಾಗಿದ್ದಾರೆ. ವಯಸ್ಸು ಕೇವಲ ಸಂಖ್ಯೆ ಅಷ್ಟೇ ಎಂಬುದನ್ನು ಇವರು ಸಾಬೀತು ಮಾಡಿದ್ದಾರೆ. ಈ ಸ್ವಿಮ್ಮಿಂಗ್ ಸ್ಪರ್ಧೆಯಲ್ಲಿ  ತೈಕ್ಕಾಟ್ಟುಕರದ ಆರಿಫಾ ವಿಕೆ, ಕುನ್ನೂಂಪುರಂನ 11 ವರ್ಷದ ಭರತ್ ಕೃಷ್ಣ ಮತ್ತು ಅಶೋಕಪುರಂನ 38 ವರ್ಷದ ಧನ್ಯಾ ಕೆ.ಜಿ ಮಡಪಂ ಕಡವುನಿಂದ ಮಣಪ್ಪುರಂ ದೇಸೋಮ್ ಕಡವುವರೆಗೆ ಈಜಿದರು.

ಅಕಾಡೆಮಿಯಲ್ಲಿ ತರಬೇತಿ ಪಡೆದ ನನ್ನ ಮಕ್ಕಳನ್ನು ನೋಡಿ ನಾನು ಈಜು ಕಲಿಯಲು ನಿರ್ಧರಿಸಿದೆ. ನನ್ನ ಕುಟುಂಬದ ಒಂಬತ್ತು ಮಂದಿಗೆ ಈಜು ಗೊತ್ತು. ನನ್ನ ತರಬೇತುದಾರರಾದ ಸಾಜಿ ವಳಸ್ಸೆರಿ ಅವರು ನನ್ನ ಕೈಗಳನ್ನು ಕಟ್ಟಿಕೊಂಡು ಈಜಲು ಹೇಳಿ, ನನ್ನಲ್ಲಿ ಆತ್ಮವಿಶ್ವಾಸ ನೀಡಿದ್ದಾರೆ. ಇದರಿಂದ ನಾನು ಕಲಿತಾ ಪಾಠ ಮತ್ತು ನಾನು ಈ ಬಗ್ಗೆ ಹೇಳಲು ಬಯಸುವುದು    ಎಲ್ಲರೂ ಈಜುವುದನ್ನು ಕಲಿಯಬೇಕು. ಏಕೆಂದರೆ ನೀರಿನಲ್ಲಿ ಕೊಚ್ಚಿ ಹೋದ ಅಥವಾ ಈಜಲು ಬರದೇ ನೀರಿನಲ್ಲಿ ಮುಳುಗಿ ಹೋದ ಪ್ರಕರಣಗಳನ್ನು ನೋಡಿದಾಗ ಈಜಲು ಕಲಿಬೇಕು ಮತ್ತು  ಜನರು ಹಿಂಜರಿಯಬಾರದು ಎಂದು ಹೇಳಿದ್ದಾರೆ.

ಮೂವರೂ ಈಜುಪಟುಗಳಿಗೆ ಕಳೆದ ವಾರದಿಂದ ಸಾಜಿ ಮತ್ತು ಅವರ ತಂಡ ವಿಶೇಷ ತರಬೇತಿ ನೀಡಿತ್ತು. ಈಜು ಕಲಿಯುವ ಮುನ್ನ ಎಲ್ಲ ರೀತಿ ಕ್ರಮಗಳನ್ನು ತೆಗೆದುಕೊಂಡಿದ್ದರು. ಸುರಕ್ಷತೆ ಕ್ರಮಗಳು ಸರಿಯಾಗಿದೆ ಎಂದು ಪರಿಶೀಲನೆ ನಡೆಸಲು ಮತ್ತು ಅವರಿಗೆ ರಕ್ಷಣೆಯನ್ನು ನೀಡಲು ಸುರಕ್ಷತಾ ಸಿಬ್ಬಂದಿಗಳು ಅವರನ್ನು  ದೋಣಿಗಳಲ್ಲಿ ಹಿಂಬಾಲಿಸಿತು.  ಬೆಳಿಗ್ಗೆ 8 ಗಂಟೆ ಸುಮಾರಿಗೆ ಈಜಲು ಪ್ರಾರಂಭಿಸಿದರು ಮತ್ತು  8.45 ರ ಸುಮಾರಿಗೆ ಯಶಸ್ವಿಯಾಗಿ ದಾಟಿದರು. “ಜನರಿಗೆ ಈಜು ಕಲಿಯಲು ವಯಸ್ಸು ಅಡ್ಡಿಯಾಗುವುದಿಲ್ಲ. ಈ ಸಂದೇಶವನ್ನು ಸಾರುವ ಸಲುವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈಜು ಬರದೇ ಅದೆಷ್ಟೋ ಜನ ಪ್ರಾಣ ಕಳೆದುಕೊಂಡಿದ್ದರು, ಇದರಲ್ಲಿ ಮಕ್ಕಳು ಹೆಚ್ಚು ಪ್ರಾಣ ಕಳೆದುಕೊಂಡ ಪ್ರಕರಣಗಳು ಬೆಳಕಿಗೆ ಬಂದಿದೆ ಎಂದು ಸಾಜಿ ಹೇಳಿದರು.

ಇದನ್ನೂ ಓದಿ
Image
ಬೆಂಗಳೂರು ಮೈಸೂರು ರಸ್ತೆಯಲ್ಲಿ ಸರಣಿ ಅಪಘಾತ! ಟೆಂಪೋ, ಬಿಎಂಟಿಸಿ ಬಸ್ ನಡುವೆ ಸಿಲುಕಿ ಆಟೋ ಜಖಂ
Image
36 ವರ್ಷದ ಬಳಿಕ ಮರುಕಳಿಸಿತು ಇತಿಹಾಸ; ಕಮಲ್​ ಹಾಸನ್​-ಚಿರಂಜೀವಿ ಸ್ನೇಹದ ರೆಟ್ರೋ ಫೋಟೋ ವೈರಲ್
Image
ಶಿಕ್ಷಕರ ಮತ್ತು ಪದವಿಧರ ಕ್ಷೇತ್ರಗಳ ಚುನಾವಣೆ: ಇಂದು ಮೂರು ಪಕ್ಷಗಳ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
Image
Chicago Shootings: ಅಮೆರಿಕದಲ್ಲಿ ಮತ್ತೆ ಗುಂಡಿನ ಸದ್ದು, ಚಿಕಾಗೊದಲ್ಲಿ ಐವರು ಸಾವು, 16 ಮಂದಿಗೆ ಗಾಯ

ಇದನ್ನು ಓದಿ: ಕ್ಯಾಮಾರಾ ಕಣ್ಣಿಗೆ ಬಿದ್ದ ‘ಚಿನ್ನದ ಸರ ಸಾಗಾಣಿಕದಾರರು’: ಇರುವೆಗಳ ಸಾಹಸದ ವಿಡಿಯೋ ವೈರಲ್

ಪೆರಿಯಾರ್ ಸ್ಟ್ರೆಚ್ ಎರ್ನಾಕುಲಂ ಗ್ರಾಮಾಂತರ ಪೊಲೀಸ್ ಸಿಬ್ಬಂದಿಗಳು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು ಮತ್ತು ಅವರು ಇದಕ್ಕೆ ಮಾರ್ಗದರ್ಶವನ್ನು ನೀಡಿದ್ದಾರೆ. ಅವರು ತಿಳಿಸಿರುವಂತೆ ಕಳೆದ ವರ್ಷ 102 ಜನರು ಈಜು ಬರದೇ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.  ಇದರಲ್ಲಿ 77 ಅಪಘಾತಗಳಿಂದ ಪ್ರಾಣ ಕಳೆದುಕೊಂಡರೆ,  ಇನ್ನೂ 25 ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕಸ್ಮಿಕವಾಗಿ ಮುಳುಗಿದ ಘಟನೆಗಳಲ್ಲಿ 62 ಪುರುಷರು ಮತ್ತು 15 ಮಹಿಳೆಯರು.

ವಲಸ್ಸೆರಿ ರಿವರ್ ಸ್ವಿಮ್ಮಿಂಗ್ ಕ್ಲಬ್ ಅನ್ನು 2010 ರಲ್ಲಿ ಆಲುವಾ ಮೂಲದ ಸಾಜಿ ವಲಸ್ಸೆರಿ ಅವರು ಪ್ರಾರಂಭಿಸಿದರು. ಅವರು 2009 ರ ತೆಕ್ಕಡಿ ದೋಣಿ ದುರಂತದಿಂದ ಸುಮಾರು 45 ಜನರು ಪ್ರಾಣ ಕಳೆದುಕೊಂಡರು. ಇದನ್ನು ಕಂಡು ಜನರಿಗೆ ಈಜಲು ಕಲಿಸಬೇಕು ಎಂದು ನಿರ್ಧಾರ ಮಾಡಿದರು. ಇವರು  5,700 ಕ್ಕೂ ಹೆಚ್ಚು ಜನರಿಗೆ ಉಚಿತವಾಗಿ ತರಬೇತಿ ನೀಡಿದ್ದಾರೆ, ಅವರಲ್ಲಿ 700 ಮಂದಿ ವಿಕಲಚೇತನರು ಮತ್ತು ಹಿರಿಯ ನಾಗರಿಕರು. ಈ ವರ್ಷದ ಬೇಸಿಗೆ ರಜೆಯಲ್ಲಿ, 720 ಜನರು ಸಜಿ ಅವರಿಂದ ಈಜು ಕಲಿತರು ಮತ್ತು ಅವರಲ್ಲಿ 130 ಜನರು ಪೆರಿಯಾರ್ ದಾಟಲು ಕಲಿಯುತ್ತಿದ್ದಾರೆ.

Published On - 12:04 pm, Thu, 30 June 22

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ