AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸರ ಸರನೆ ಬಂದು ಗಣಪನ ಕೊರಳಲ್ಲಿ ಹೆಡೆ ಎತ್ತಿ ಕುಳಿತ ನಾಗಪ್ಪ; ರೋಮಾಂಚನಕಾರಿ ವಿಡಿಯೋ ವೈರಲ್‌

ದೇಶದೆಲ್ಲೆಡೆ ಬಹಳ ವಿಜೃಂಭನೆಯಿಂದ ಗಣೇಶ ಚತುರ್ಥಿ ಹಬ್ಬ ನಡೆದಿದೆ. ಭಕ್ತರು ಗಣಪನ ದರ್ಶನ ಪಡೆದು ಪುನೀತರಾಗಿದ್ದಾರೆ. ಮನುಷ್ಯರಂತೆಯೇ ಇಲ್ಲೊಂದು ನಾಗರ ಹಾವು ಕೂಡಾ ಗಣಪನ ದರ್ಶನ ಪಡೆಯಲು ಬಂದಿದ್ದು, ಗಣೇಶ ಮೂರ್ತಿಯನ್ನು ಕೂರಿಸಿದ್ದ ಸ್ಥಳಕ್ಕೆ ಸರಸರನೇ ಬಂದಂತಹ ಈ ನಾಗಪ್ಪ ಶಿವನ ಕೊರಳಲ್ಲಿ ಕುಳಿತಂತೆ, ಸೀದಾ ಹೋಗಿ ಗಣಪನ ಕೊರಳಲ್ಲಿ ಎಡೆ ಎತ್ತೆ ಕುಳಿತಿದೆ. ಈ ದೃಶ್ಯವನ್ನು ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದಾರೆ.

Viral Video: ಸರ ಸರನೆ ಬಂದು ಗಣಪನ ಕೊರಳಲ್ಲಿ ಹೆಡೆ ಎತ್ತಿ ಕುಳಿತ ನಾಗಪ್ಪ; ರೋಮಾಂಚನಕಾರಿ ವಿಡಿಯೋ ವೈರಲ್‌
ಮಾಲಾಶ್ರೀ ಅಂಚನ್​
| Edited By: |

Updated on: Sep 15, 2024 | 2:45 PM

Share

ಮನುಷ್ಯರಂತೆ ಪ್ರಾಣಿಗಳೂ ಕೂಡಾ ದೇವರನ್ನು ಆರಾಧಿಸುತ್ತವೆ, ಪ್ರಾರ್ಥಿಸುತ್ತವೆ ಎಂಬುದಕ್ಕೆ ಸಾಕ್ಷಿಯಾಗಿರುವ ಹಲವಾರು ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಆಗಾಗ್ಗೆ ಹರಿದಾಡುತ್ತಿರುತ್ತವೆ. ಮೊನ್ನೆಯಷ್ಟೆ ಇಲಿಯೊಂದು ಗಣಪನ ಮುಂದೆ ಕೈ ಮುಗಿದು ಕುಳಿತಿದ್ದಂತಹ ವಿಡಿಯೋವೊಂದು ಸಖತ್‌ ವೈರಲ್‌ ಆಗಿತ್ತು, ಇದೀಗ ಅಂತಹದ್ದೇ ವಿಡಿಯೋವೊಂದು ವೈರಲ್‌ ಆಗಿದ್ದು, ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಗಣೇಶ ಮೂರ್ತಿಯನ್ನು ಕೂರಿಸಿದ್ದ ಸ್ಥಳಕ್ಕೆ ಬಂದಂತಹ ನಾಗರ ಹಾವೊಂದು ಶಿವನ ಕೊರಳಲ್ಲಿ ಕುಳಿತಂತೆ, ಸೀದಾ ಹೋಗಿ ಗಣಪನ ಕೊರಳಲ್ಲಿ ಎಡೆ ಎತ್ತೆ ಕುಳಿತಿದ್ದು, ಈ ದೃಶ್ಯವನ್ನು ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದಾರೆ.

ಮಹೇಶ್‌ ಸಾಳ್ವೆ (mahesh_salve) ಎಂಬವರು ಈ ಕುರಿತ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ಗಣೇಶನ ದರ್ಶನ ಪಡೆಯಲು ಬಂದ ನಾಗರಾಜ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಗಣೇಶನ ಮೂರ್ತಿ ಕೂರಿಸಿದಂತಹ ಸ್ಥಳಕ್ಕೆ ನಾಗರ ಹಾವೊಂದು ಸರಸರನೆ ಬರುವಂತಹ ದೃಶ್ಯವನ್ನು ಕಾಣಬಹುದು. ಹೀಗೆ ಬಂದ ಹಾವು ಸೀದಾ ಹೋಗಿ ಗಣಪನ ಕೊರಳಲ್ಲಿ ಎಡೆ ಎತ್ತಿ ಕುಳಿತಿದೆ.

ಇದನ್ನೂ ಓದಿ: ಅಯ್ಯಯ್ಯೋ… ತಾಜ್‌ ಮಹಲ್‌ ಆವರಣದಲ್ಲಿಯೇ ಮೂತ್ರ ವಿಸರ್ಜನೆ ಮಾಡಿದ ಪ್ರವಾಸಿಗರು; ವಿಡಿಯೋ ವೈರಲ್‌

ಆರು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 22.7 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಈ ದೃಶ್ಯ ನಿಜಕ್ಕೂ ರೋಮಾಂಚನಕಾರಿಯಾಗಿದೆʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ಜೈ ಗಣೇಶ, ಎಂಥಹಾ ಸುಂದರ ದೃಶ್ಯವಿದು ಎಂದು ಹೇಳಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ