AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನೀರು ಕುಡಿಯಲು ಹೋಗಿ ಕೊಳದಲ್ಲಿ ಬಿದ್ದ ಮರಿಯಾನೆ: ರಕ್ಷಣಾ ಕಾರ್ಯಾಚರಣೆ ಹೇಗಿತ್ತು ಗೊತ್ತಾ?

ವಿಡಿಯೋದಲ್ಲಿ ತಾಯಿ ಮತ್ತು ಮರಿ ಆನೆ ಕೊಳದಲ್ಲಿ ನೀರು ಕುಡಿಯಲು ಹೋದಾಗ ಆಕಸ್ಮಿಕವಾಗಿ  ಮರಿಯಾನೆ ನೀರಿನ ಕೊಳಕ್ಕೆ ಬಿಳುತ್ತದೆ. ಸ್ಥಳದಲ್ಲಿದ್ದ ತಾಯಾನೆ ಕೂಡಲೇ ಮರಿಯಾನೆಯನ್ನು ರಕ್ಷಿಸಲು ಮುಂದಾಗುತ್ತದೆ.

Viral Video: ನೀರು ಕುಡಿಯಲು ಹೋಗಿ ಕೊಳದಲ್ಲಿ ಬಿದ್ದ ಮರಿಯಾನೆ: ರಕ್ಷಣಾ ಕಾರ್ಯಾಚರಣೆ ಹೇಗಿತ್ತು ಗೊತ್ತಾ?
ಕೊಳದಲ್ಲಿ ಬಿದ್ದ ಮರಿಯಾನೆಯನ್ನು ಕಾಪಾಡುತ್ತಿರುವ ಆನೆಗಳು.
TV9 Web
| Edited By: |

Updated on: Aug 14, 2022 | 5:24 PM

Share

ಮಕ್ಕಳು ತಂದೆ ತಾಯಿಯ ದೊಡ್ಡ ಸಂಪತ್ತು. ಅದು ಮನುಷ್ಯರಾಗಿರಲಿ ಅಥವಾ ಪ್ರಾಣಿಯಾಗಿರಲಿ. ಮಕ್ಕಳಿಗೆ ಅಪಾಯವಾದರೆ ಪೋಷಕರು ತಮ್ಮ ಮಕ್ಕಳನ್ನು ರಕ್ಷಿಸಲು ಏನು ಬೇಕಾದರೂ ಮಾಡುತ್ತಾರೆ ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ.  ಕೊಳದಲ್ಲಿ ಬಿದ್ದ ತನ್ನ ಮರಿ ಆನೆಯನ್ನು ಎರಡು ಆನೆಗಳು ರಕ್ಷಣೆ ಮಾಡಿರುವಂತಹ ವಿಡಿಯೋ ಒಂದು ಸಾಮಾಜಿಕ  ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಶನಿವಾರದಂದು ಗೇಬ್ರಿಯೆಲ್ ಕಾರ್ನೊ ಎಂಬ ಹೆಸರಿನ ಟ್ವಿಟರ್‌ನಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ವಿಡಿಯೋದಲ್ಲಿ ತಾಯಿ ಮತ್ತು ಮರಿ ಆನೆ ಕೊಳದಲ್ಲಿ ನೀರು ಕುಡಿಯಲು ಹೋದಾಗ ಆಕಸ್ಮಿಕವಾಗಿ  ಮರಿಯಾನೆ ನೀರಿನ ಕೊಳಕ್ಕೆ ಬಿಳುತ್ತದೆ. ಸ್ಥಳದಲ್ಲಿದ್ದ ತಾಯಾನೆ ಕೂಡಲೇ ಮರಿಯಾನೆಯನ್ನು ರಕ್ಷಿಸಲು ಮುಂದಾಗುತ್ತದೆ. ಅಷ್ಟರಲ್ಲಿ ಅಲ್ಲೇ ಪಕ್ಕದಲ್ಲಿದ್ದ ಮತ್ತೊಂದು ಆನೆ ಓಡಿಬಂದು ರಕ್ಷಣೆಗೆ ಪ್ರಯತ್ನಿಸುತ್ತದೆ.

ಇದನ್ನೂ ಓದಿ: ಪ್ರಿಯಕರನಿಂದ ಮೋಸಹೋದ ಆಸ್ಸೀ ಮಹಿಳೆ ಮಾಡಿದ್ದೇನು ಗೊತ್ತಾ? ಈ ಕತೆ ಓದಿ!

ಇದನ್ನೂ ಓದಿ: Udupi News: ಚಿರತೆ ದಾಳಿಯಿಂದ ಪವಾಡ ಸದೃಶವಾಗಿ ಬದುಕುಳಿದ ಸಾಕುನಾಯಿ

ಕೊಳದ ಮೇಲಿಂದ ರಕ್ಷಣೆಗೆ ಪ್ರಯತ್ನಿಸಿದರು ಸಾಧ್ಯವಾಗದಿದ್ದಾಗ ನೇರವಾಗಿ ಕೊಳದಲ್ಲಿ ಇಳಿದು ಮರಿಯಾನೆಯನ್ನು ರಕ್ಷಣೆ ಮಾಡುತ್ತವೆ. ಪೋಸ್ಟ್ ಪ್ರಕಾರ, ಈ ವಿಡಿಯೋವನ್ನು ಸಿಯೋಲ್ ಪಾರ್ಕ್‌ನಲ್ಲಿ ಸೆರೆಹಿಡಿಯಲಾಗಿದ್ದು, ವಿಡಿಯೋವನ್ನು ಶೇರ್​ ಮಾಡಿದ ಕೆಲವೇ ಗಂಟೆಗಳಲ್ಲಿ 6.7 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಮತ್ತು 34,000 ಕ್ಕೂ ಹೆಚ್ಚು ಲೈಕ್ಸ್​ ಪಡೆದುಕೊಂಡಿದೆ. ಸಾವಿರಾರು ಬಳಕೆದಾರರು ಪೋಸ್ಟ್​ನ್ನು ರಿಟ್ವೀಟ್ ಮಾಡಿದ್ದು, ಸಾಕಷ್ಟು ಜನರು ಒಳ್ಳೆಯ ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!