AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನೀರು ಕುಡಿಯಲು ಹೋಗಿ ಕೊಳದಲ್ಲಿ ಬಿದ್ದ ಮರಿಯಾನೆ: ರಕ್ಷಣಾ ಕಾರ್ಯಾಚರಣೆ ಹೇಗಿತ್ತು ಗೊತ್ತಾ?

ವಿಡಿಯೋದಲ್ಲಿ ತಾಯಿ ಮತ್ತು ಮರಿ ಆನೆ ಕೊಳದಲ್ಲಿ ನೀರು ಕುಡಿಯಲು ಹೋದಾಗ ಆಕಸ್ಮಿಕವಾಗಿ  ಮರಿಯಾನೆ ನೀರಿನ ಕೊಳಕ್ಕೆ ಬಿಳುತ್ತದೆ. ಸ್ಥಳದಲ್ಲಿದ್ದ ತಾಯಾನೆ ಕೂಡಲೇ ಮರಿಯಾನೆಯನ್ನು ರಕ್ಷಿಸಲು ಮುಂದಾಗುತ್ತದೆ.

Viral Video: ನೀರು ಕುಡಿಯಲು ಹೋಗಿ ಕೊಳದಲ್ಲಿ ಬಿದ್ದ ಮರಿಯಾನೆ: ರಕ್ಷಣಾ ಕಾರ್ಯಾಚರಣೆ ಹೇಗಿತ್ತು ಗೊತ್ತಾ?
ಕೊಳದಲ್ಲಿ ಬಿದ್ದ ಮರಿಯಾನೆಯನ್ನು ಕಾಪಾಡುತ್ತಿರುವ ಆನೆಗಳು.
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 14, 2022 | 5:24 PM

Share

ಮಕ್ಕಳು ತಂದೆ ತಾಯಿಯ ದೊಡ್ಡ ಸಂಪತ್ತು. ಅದು ಮನುಷ್ಯರಾಗಿರಲಿ ಅಥವಾ ಪ್ರಾಣಿಯಾಗಿರಲಿ. ಮಕ್ಕಳಿಗೆ ಅಪಾಯವಾದರೆ ಪೋಷಕರು ತಮ್ಮ ಮಕ್ಕಳನ್ನು ರಕ್ಷಿಸಲು ಏನು ಬೇಕಾದರೂ ಮಾಡುತ್ತಾರೆ ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ.  ಕೊಳದಲ್ಲಿ ಬಿದ್ದ ತನ್ನ ಮರಿ ಆನೆಯನ್ನು ಎರಡು ಆನೆಗಳು ರಕ್ಷಣೆ ಮಾಡಿರುವಂತಹ ವಿಡಿಯೋ ಒಂದು ಸಾಮಾಜಿಕ  ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಶನಿವಾರದಂದು ಗೇಬ್ರಿಯೆಲ್ ಕಾರ್ನೊ ಎಂಬ ಹೆಸರಿನ ಟ್ವಿಟರ್‌ನಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ವಿಡಿಯೋದಲ್ಲಿ ತಾಯಿ ಮತ್ತು ಮರಿ ಆನೆ ಕೊಳದಲ್ಲಿ ನೀರು ಕುಡಿಯಲು ಹೋದಾಗ ಆಕಸ್ಮಿಕವಾಗಿ  ಮರಿಯಾನೆ ನೀರಿನ ಕೊಳಕ್ಕೆ ಬಿಳುತ್ತದೆ. ಸ್ಥಳದಲ್ಲಿದ್ದ ತಾಯಾನೆ ಕೂಡಲೇ ಮರಿಯಾನೆಯನ್ನು ರಕ್ಷಿಸಲು ಮುಂದಾಗುತ್ತದೆ. ಅಷ್ಟರಲ್ಲಿ ಅಲ್ಲೇ ಪಕ್ಕದಲ್ಲಿದ್ದ ಮತ್ತೊಂದು ಆನೆ ಓಡಿಬಂದು ರಕ್ಷಣೆಗೆ ಪ್ರಯತ್ನಿಸುತ್ತದೆ.

ಇದನ್ನೂ ಓದಿ: ಪ್ರಿಯಕರನಿಂದ ಮೋಸಹೋದ ಆಸ್ಸೀ ಮಹಿಳೆ ಮಾಡಿದ್ದೇನು ಗೊತ್ತಾ? ಈ ಕತೆ ಓದಿ!

ಇದನ್ನೂ ಓದಿ: Udupi News: ಚಿರತೆ ದಾಳಿಯಿಂದ ಪವಾಡ ಸದೃಶವಾಗಿ ಬದುಕುಳಿದ ಸಾಕುನಾಯಿ

ಕೊಳದ ಮೇಲಿಂದ ರಕ್ಷಣೆಗೆ ಪ್ರಯತ್ನಿಸಿದರು ಸಾಧ್ಯವಾಗದಿದ್ದಾಗ ನೇರವಾಗಿ ಕೊಳದಲ್ಲಿ ಇಳಿದು ಮರಿಯಾನೆಯನ್ನು ರಕ್ಷಣೆ ಮಾಡುತ್ತವೆ. ಪೋಸ್ಟ್ ಪ್ರಕಾರ, ಈ ವಿಡಿಯೋವನ್ನು ಸಿಯೋಲ್ ಪಾರ್ಕ್‌ನಲ್ಲಿ ಸೆರೆಹಿಡಿಯಲಾಗಿದ್ದು, ವಿಡಿಯೋವನ್ನು ಶೇರ್​ ಮಾಡಿದ ಕೆಲವೇ ಗಂಟೆಗಳಲ್ಲಿ 6.7 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಮತ್ತು 34,000 ಕ್ಕೂ ಹೆಚ್ಚು ಲೈಕ್ಸ್​ ಪಡೆದುಕೊಂಡಿದೆ. ಸಾವಿರಾರು ಬಳಕೆದಾರರು ಪೋಸ್ಟ್​ನ್ನು ರಿಟ್ವೀಟ್ ಮಾಡಿದ್ದು, ಸಾಕಷ್ಟು ಜನರು ಒಳ್ಳೆಯ ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ