AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video : ಸೈಕಲ್‌ ಸವಾರನನ್ನು ಕಂಡು ಭಯಬಿದ್ದ ಕರಡಿ

ಸೋಶಿಯಲ್ ಮೀಡಿಯಾದಲ್ಲಿ ಪ್ರಾಣಿ ಸಾಮ್ರಾಜ್ಯಕ್ಕೆ ಸಂಬಂಧಿಸಿದ ಕೆಲವು ಕುತೂಹಲಕಾರಿ ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಕೆಲವುದೃಶ್ಯಗಳನ್ನು ಕಂಡಾಗ ಪ್ರಾಣಿಗಳು ಕೂಡ ಮನುಷ್ಯರಿಗೆ ಹೆದರುತ್ತದೆಯೇ ಎಂದೆನಿಸುತ್ತದೆ. ಇದೀಗ ವ್ಯಕ್ತಿಯೊಬ್ಬನು ಕಾಡಿನ ಮಧ್ಯೆ ಸೈಕಲ್ ಸವಾರಿ ಮಾಡುತ್ತಿದ್ದ ವೇಳೆ ಕರಡಿಯೊಂದು ಅಡ್ಡಬಂದಿದ್ದು, ಮುಂದೇನಾಯ್ತು ಎಂದು ತಿಳಿದರೆ ನಿಮಗೆ ನಂಬಲು ಕಷ್ಟವಾಗುತ್ತದೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಬಳಕೆದಾರರು ಈ ರೀತಿಯೂ ಆಗುತ್ತಾ ಎಂದು ಕಾಮೆಂಟ್‌ಗಳನ್ನು ಮಾಡಿದ್ದಾರೆ.

ಸಾಯಿನಂದಾ
|

Updated on: Jun 06, 2025 | 12:24 PM

Share

ಕಾಡು ಪ್ರಾಣಿಗಳು ಈ ಮನುಷ್ಯರು ಸೇರಿದಂತೆ ಪ್ರಾಣಿಗಳ ಮೇಲೆ ದಾಳಿ ಮಾಡುವ ಸುದ್ದಿಗಳನ್ನು ನೀವು ದಿನನಿತ್ಯ ಕೇಳುತ್ತೀರಿ. ಆದರೆ ಯಾವ ಪ್ರಾಣಿಯ ದಾಳಿಯನ್ನು ಬೇಕಾದರೂ ಸಹಿಸಿಕೊಳ್ಳಬಹುದು. ಆದರೆ ಕರಡಿ (bear) ದಾಳಿಯೂ ಮಾತ್ರ ಅಷ್ಟೇ ಭಯಾನಕವಾಗಿರುತ್ತದೆ. ತನ್ನ ಚೂಪಾದ ಉಗುರುಗಳಿಂದ ಮುಖಕ್ಕೆ ಪರಚಿದರೆ ಕಥೆ ಮುಗಿದೇ ಹೋಯಿತು. ಹೀಗಿರುವಾಗ ಈ ಕರಡಿಗಳು ಮನುಷ್ಯರನ್ನು ಕಂಡು ಓಡುವುದನ್ನು ನೀವು ಎಂದಾದರೂ ನೋಡಿದ್ದೀರಾ. ಆದರೆ ಇದೀಗ ಸೈಕಲ್ ಸವಾರರ (Cycle rider) ನ್ನು ಕಂಡು ಭಯಬಿದ್ದ ಕರಡಿಯೊಂದು ಅಲ್ಲಿಂದ ಓಟಕ್ಕಿತ್ತಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾ (social media) ದಲ್ಲಿ ವೈರಲ್ ಆಗಿದೆ.

Amazing nature ಹೆಸರಿನ ಖಾತೆಯಲ್ಲಿ ಈ ಪ್ರಾಣಿ ಸಾಮ್ರಾಜ್ಯಕ್ಕೆ ಸಂಬಂಧಿಸಿದ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ಅತೀ ವೇಗವಾಗಿ ಬಂದ ಸೈಕಲ್ ಸವಾರನ ಮುಂದೆ ಕರಡಿಯೊಂದು ಪ್ರತ್ಯಕ್ಷವಾಗಿದೆ. ಆದರೆ, ಈ ಕರಡಿಯೂ ಸವಾರರನ್ನು ಕಂಡ ತಕ್ಷಣವೇ ಭಯಬಿದ್ದು ಅಲ್ಲಿಂದ ಓಡಿಹೋಗುತ್ತಿರುವ ದೃಶ್ಯವನ್ನು ನೀವಿಲ್ಲಿ ನೋಡಬಹುದು.

ಇದನ್ನೂ ಓದಿ
Image
ನಳಿನ್​​​ ಕುಮಾರ್​​ ಕಟೀಲ್‌ಗೆ ಥ್ಯಾಂಕ್ಸ್​​​​ ಹೇಳಿ : ಪ್ರತಾಪ್​​​ ಸಿಂಹ
Image
ಕಾಲೇಜ್ ಬಂಕ್ ಮಾಡಿ ಗಲ್ಲಿಯಲ್ಲಿ ರೊಮ್ಯಾನ್ಸ್ ಮಾಡ್ತಾ ನಿಂತ ಸ್ಟೂಡೆಂಟ್
Image
ಯುವತಿಯ ಎರಡು ಆಫರ್ ರಿಜೆಕ್ಟ್ ಮಾಡಿದ ಯುವಕ
Image
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ

ಇದನ್ನೂ ಓದಿ :Video : ಶಾಪಿಂಗ್ ಮಾಡಲು ಸೂಪರ್ ಮಾರ್ಕೆಟ್‌ಗೆ ಎಂಟ್ರಿ ಕೊಟ್ಟ ಗಜರಾಜ, ವಿಡಿಯೋ ವೈರಲ್

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಬಳಕೆದಾರರ ಕಾಮೆಂಟ್‌ಗಳು  ಹೀಗಿವೆ

ಜೂನ್ 5 ರಂದು ಶೇರ್ ಮಾಡಲಾದ ಈ ವಿಡಿಯೋವನ್ನು 3.5 ಮಿಲಿಯನ್‌ಗೂ ಅಧಿಕ ಜನರು ವೀಕ್ಷಿಸಿದ್ದಾರೆ. ಬಳಕೆದಾರರೊಬ್ಬರು, ಕಪ್ಪು ಕರಡಿಗಳು ವಾಸ್ತವವಾಗಿ ಕೆಲವು ಜನರನ್ನು ಮುಜುಗರಕ್ಕೀಡು ಮಾಡುವುದಿದೆ. ಬಹುಷಃ ಅವುಗಳು ಪ್ರತಿದಾಳಿ ಮಾಡುವುದಿಲ್ಲ ಎಂದಿದ್ದಾರೆ. ಮತ್ತೊಬ್ಬರು, ದಟ್ಟ ಕಾಡಿನ ನಡುವೆ ರೈಡ್ ಮಾಡುವಾಗ ಎಚ್ಚರ ವಹಿಸಬೇಕು. ಕಾಡು ಪ್ರಾಣಿಗಳು ಕಾಣಸಿಗುತ್ತವೆ, ಈ ಬಗ್ಗೆ ಅರಿವಿರಲಿ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬ ಬಳಕೆದಾರರು, ಈ ಕಾಡು ಪ್ರಾಣಿಗಳ ವಾಸಸ್ಥಾನದ ಕಡೆಗೆ ಹೋಗುವುದು ಎಷ್ಟು ಸರಿ, ಅವುಗಳಿಗೂ ಕೂಡ ಭಯ ಇದೆ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ