Viral Video: ಜನರೆಲ್ಲ ಬದುಕುಳಿದದ್ದಕ್ಕೆ ಈ ಕಾರಿನ ಗುಣಮಟ್ಟ ಕಾರಣವೋ, ಅವರ ಅದೃಷ್ಟವೋ?

Accident : ಇದನ್ನು ಟ್ವೀಟ್ ಮಾಡಿದ ವ್ಯಕ್ತಿಯ ವಿತಂಡವಾದದಿಂದ ಬೇಸತ್ತ ನೆಟ್ಟಿಗರು, ನಿನಗೆ 'ಟಾಟಾ' ಹಣ ಕೊಟ್ಟಿದೆಯೇ? ಎನ್ನುತ್ತಿದ್ದಾರೆ. ನಿಮಗೆ ಅಟೋಮೊಬೈಲ್​ ಬಗ್ಗೆ ಗೊತ್ತಿಲ್ಲ, ನನ್ನ ಟ್ವೀಟ್​ನ ಒಳಾರ್ಥವೂ ಅರ್ಥವಾಗುತ್ತಿಲ್ಲ ಎನ್ನುತ್ತಿದ್ದಾನೆ ಈತ.

Viral Video: ಜನರೆಲ್ಲ ಬದುಕುಳಿದದ್ದಕ್ಕೆ ಈ ಕಾರಿನ ಗುಣಮಟ್ಟ ಕಾರಣವೋ, ಅವರ ಅದೃಷ್ಟವೋ?
ಟಾಟಾ ಹ್ಯಾರಿಯರ್​ ಕಾರಿನ ಮೇಲೆ ದೊಡ್ಡ ಬಂಡೆಗಲ್ಲೊಂದು ಉರುಳಿ ಬಿದ್ದಾಗ...
Follow us
|

Updated on:Jul 13, 2023 | 4:38 PM

Tata Harrier : ‘ಟಾಟಾ ಹ್ಯಾರಿಯರ್‌ನಲ್ಲಿರುವ ಜನರು ಅದೃಷ್ಟವಂತರು. ಆ ದೊಡ್ಡ ಬಂಡೆಗಲ್ಲು ಎರಡು ಅಡಿ ಹಿಂದೆ ಏನಾದರೂ ಬಿದ್ದಿದ್ದರೆ ಕಾರಿನೊಳಗಿನವರೆಲ್ಲರೂ ಖಂಡಿತ ಸಾವನ್ನಪ್ಪುತ್ತಿದ್ದರು. ಟಾಟಾ ಮೊಟಾರ್ಸ್​​ನ ಈ ಕಾರು​ ಉತ್ತಮ ಗುಣಮಟ್ಟವನ್ನು ಹೊಂದಿದೆ. ಇಷ್ಟೊಂದು ದೊಡ್ಡ ಹೊಡೆತಕ್ಕೂ ಅದು ಬಗ್ಗಲಿಲ್ಲ. ಉತ್ತಮ ಗುಣಮಟ್ಟವು ಜೀವವನ್ನು ಉಳಿಸುತ್ತದೆ.’ ಸಿನಿಕಲ್​ ಉಜ್ವಲ್​ ಎಂಬ ಟ್ವಿಟರ್​ ಖಾತೆಯಲ್ಲಿ ಈ ವಿಡಿಯೋ ಟ್ವೀಟ್​ ಆಗಿದೆ. ಈ ಟ್ವೀಟ್​ನಡಿಯೇ, ಖಂಡಿತ ಟಾಟಾ ಮೋಟಾರ್ಸ್​ ಈ ಟ್ವೀಟ್ ಮಾಡಲು ನನಗೆ ಹಣ ಕೊಟ್ಟಿಲ್ಲ. ನೀವು ಈ ಟ್ವೀಟ್​ ಅನ್ನು ಮತ್ತೊಮ್ಮೆ ಓದಿ ಎಂದಿದ್ದಾರೆ ಇದರ ಖಾತೆದಾರ.

ಈ ವಿಡಿಯೋ ಅನ್ನು 1.8 ಲಕ್ಷಕ್ಕಿಂತಲೂ ಹೆಚ್ಚು ಜನ ನೋಡಿದ್ದಾರೆ. ಸುಮಾರು 2,000 ಜನರು ಲೈಕ್ ಮಾಡಿದ್ದಾರೆ. ಸುಮಾರು 500 ಜನರು ರೀಟ್ವೀಟ್ ಮಾಡಿದ್ದಾರೆ. ಇಂಥ ಘೋರ ಅಪಘಾತದಲ್ಲಿಯೂ ಕಾರಿನಲ್ಲಿರುವವರೆಲ್ಲ ಬದುಕುಳಿದಿದ್ದಾರಲ್ಲ, ಅವರ ಅದೃಷ್ಟ! ಎಂದು ಹಲವಾರು ಜನ ಹೇಳಿದ್ದಾರೆ. ನಿಮ್ಮ ಟ್ವೀಟ್​ ಅದನ್ನು ಧ್ವನಿಸದೆ ಟಾಟಾ ಹ್ಯಾರಿಯರ್​ ಬ್ರ್ಯಾಂಡ್​ನ ಗುಣಮಟ್ಟದ ಬಗ್ಗೆ ಪ್ರಚಾರ ಮಾಡುತ್ತಿರುವಂತೆ ತೋರುತ್ತಿದೆ. ಇದಕ್ಕಾಗಿ ಎಷ್ಟು ಹಣವನ್ನು ನಿಮಗೆ ಕೊಟ್ಟಿರುತ್ತಾರೆ ಎಂದು ಸಿನಿಕಲ್​ ಉಜ್ವಲ್​ ಗೆ ಕೇಳಿದ್ದಾರೆ ಅನೇಕರು. ಆದರೂ ಈ ವ್ಯಕ್ತಿ ಮತ್ತೆ ಮತ್ತೆ ಕಾರು ಮತ್ತು ಅಟೊಮೊಬೈಲ್​ ಬಗ್ಗೆಯೇ ವಿವರಣೆ ನೀಡುತ್ತಿದ್ದಾರೆ.

ಇದನ್ನೂಓದಿ : Viral: ಹೇರ್ ಎಕ್ಸ್ಟೆನ್ಷನ್​ ತಂದಿಟ್ಟ ಫಜೀತಿ; ಈ ಸಲೂನಿಗೆ ಯಾರೂ ಹೋಗಬೇಡಿ ಎಂದ ಮಹಿಳೆ

ಕಾರಿನ ಗುಣಮಟ್ಟಕ್ಕೆ ಇದು ಸಂಬಂಧವೇ ಇಲ್ಲ. ಜನರ ಅದೃಷ್ಟ, ಬದುಕುಳಿದಿದ್ದಾರೆ ಅಷ್ಟೇ ಎಂದು ಅನೇಕರು ಹೇಳಿದ್ದಾರೆ. ಆದರೂ ಈ ವ್ಯಕ್ತಿ ತನ್ನ ಟ್ವೀಟ್​ ಅನ್ನು ಸಮರ್ಥಿಸಿಕೊಳ್ಳುವುದನ್ನು ನಿಲ್ಲಿಸುವ ಲಕ್ಷಣಗಳೇ ಕಂಡಿಲ್ಲ. ಆಗ ಹಲವಾರು ಜನ ಈತನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅದಕ್ಕೆ ಪ್ರತಿಯಾಗಿ ಟಾಟಾ ಮೋಟಾರ್ಸ್​ ಅನ್ನು ಟ್ಯಾಗ್ ಮಾಡಿದ ಈ ವ್ಯಕ್ತಿ ನೆಟ್ಟಿಗರ ಹಾವಳಿಯನ್ನು ಸಹಿಸಿಕೊಳ್ಳಲಾಗದೆ ಬೇಗ ಹಣ ಕಳಿಸಿಬಿಡಿ! ಎಂದು (ತಮಾಷೆಯಿಂದ?) ಶರಣಾಗಿದ್ದಾರೆ.

ಈ ದುರ್ಘಟನೆ ಭಾರತದಲ್ಲಿ ಎಲ್ಲಿ ನಡೆದಿದೆ ಎಂಬ ಮಾಹಿತಿ ಈ ಟ್ವೀಟ್​ನಲ್ಲಿಲ್ಲ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 4:30 pm, Thu, 13 July 23

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು