AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಉರಿ ಬಿಸಿಲಿನ ನಡುವೆ ಹೂ ಮಾರುತ್ತಿರುವವರಿಗೆ ನೀರನ್ನು ವಿತರಿಸಿದ ಬಾಲಕ; ನೆಟ್ಟಿಗರ ಮನಗೆದ್ದ ವಿಡಿಯೋ ಇಲ್ಲಿದೆ

Viral Video: ಕೊರೊನಾ ಕಾಲಘಟ್ಟದ ನಂತರ ಸಣ್ಣ ವ್ಯಾಪಾರಸ್ಥರಿಗೆ ಸಮಸ್ಯೆ ಹೆಚ್ಚಾಗಿದೆ. ಈಗಂತೂ ಅದಕ್ಕೆ ಬಿಸಿಲಿನ ಝಳವೂ ಜತೆಯಾಗಿದೆ. ಬೀದಿಬದಿ ವ್ಯಾಪಾರಸ್ಥರು ವ್ಯಾಪಾರ ಮಾಡಲು ಸಾಧ್ಯವಾಗದೇ ಕಷ್ಟಪಡುತ್ತಿದ್ದಾರೆ. ಅಂತಹ ವ್ಯಾಪಾರಸ್ಥರಿಗೆ ಪುಟ್ಟ ಬಾಲಕನೊಬ್ಬ ಸಹಾಯ ಮಾಡುವ ವಿಡಿಯೋವೊಂದು ವೈರಲ್ ಆಗಿದೆ. ಇದನ್ನು ಐಎಎಸ್ ಅಧಿಕಾರಿ ಅವನೀಶ್ ಶರಣ್ ಹಂಚಿಕೊಂಡಿದ್ದಾರೆ.

Viral: ಉರಿ ಬಿಸಿಲಿನ ನಡುವೆ ಹೂ ಮಾರುತ್ತಿರುವವರಿಗೆ ನೀರನ್ನು ವಿತರಿಸಿದ ಬಾಲಕ; ನೆಟ್ಟಿಗರ ಮನಗೆದ್ದ ವಿಡಿಯೋ ಇಲ್ಲಿದೆ
ವಿಡಿಯೋದಿಂದ ಸೆರೆಹಿಡಿಯಲಾದ ಚಿತ್ರ
TV9 Web
| Edited By: |

Updated on: May 01, 2022 | 12:32 PM

Share

ಪರೋಪಕಾರದ ಗುಣಗಳು ಈಗಿನ ಕಾಲದಲ್ಲಿ ತುಸು ತಗ್ಗಿದೆ ಎಂದೇ ಹೇಳಬೇಕು. ಇದಕ್ಕೆ ಕಾರಣಗಳೇನೇ ಇರಬಹುದು. ಇರಲಿ, ಆದರೆ ಮತ್ತೊಬ್ಬರಿಗೆ ನಿಸ್ವಾರ್ಥ ರೀತಿಯಿಂದ ಸಹಾಯ ಮಾಡುವುದು ಅತ್ಯಂತ ದೊಡ್ಡ ಮಾನವ ಗುಣಗಳಲ್ಲಿ ಒಂದು. ಹೀಗಾಗಿಯೇ ಕಷ್ಟದಿಂದ ಬಳಲುತ್ತಿರುವವರಿಗೆ ಸಹಾಯ ಮಾಡಿದ ದಾನಿಗಳ ವಿಚಾರಗಳು ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತವೆ. ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೇ ಹಲವರಿಗೆ ಸಹಾಯ ಮಾಡಿದ ಪುಟಾಣಿ ಬಾಲಕನೊಬ್ಬನ ವಿಡಿಯೋ ಸದ್ಯ ಸಖತ್ ಸುದ್ದಿಯಾಗುತ್ತಿದೆ. ಪ್ರಸ್ತುತ ಜನರು ಹಲವು ಘಟನೆಗಳಿಂದ ತತ್ತರಿಸಿದ್ದಾರೆ. ಕೊರೊನಾ ಕಾಲಘಟ್ಟದ ನಂತರ ಸಣ್ಣ ವ್ಯಾಪಾರಸ್ಥರಿಗೆ ಸಮಸ್ಯೆ ಹೆಚ್ಚಾಗಿದೆ. ಈಗಂತೂ ಅದಕ್ಕೆ ಬಿಸಿಲಿನ ಝಳವೂ ಜತೆಯಾಗಿದೆ. ಬೀದಿಬದಿ ವ್ಯಾಪಾರಸ್ಥರು ವ್ಯಾಪಾರ ಮಾಡಲು ಸಾಧ್ಯವಾಗದೇ ಕಷ್ಟಪಡುತ್ತಿದ್ದಾರೆ. ಅಂತಹ ವ್ಯಾಪಾರಸ್ಥರಿಗೆ ಪುಟ್ಟ ಬಾಲಕನೊಬ್ಬ ಸಹಾಯ ಮಾಡುವ ವಿಡಿಯೋವೊಂದು ವೈರಲ್ (Viral Video) ಆಗಿದೆ. ಇದನ್ನು ಐಎಎಸ್ ಅಧಿಕಾರಿ ಅವನೀಶ್ ಶರಣ್ ಹಂಚಿಕೊಂಡಿದ್ದಾರೆ.

ಸ್ಪೋರ್ಟ್ಸ್ ದಿರಿಸಿನಲ್ಲಿರುವ ಈ ಪುಟ್ಟ ಬಾಲಕನ ಹೆಸರು ಅಯಾನ್. ರಸ್ತೆಬದಿಯಲ್ಲಿ, ಬಿಸಿಲಿನ ನಡುವೆಯೇ ಕುಳಿತು ಹೂ ವ್ಯಾಪಾರ ಮಾಡುತ್ತಿರುವವರಿಗೆ ನೀರಿನ ಬಾಟಲ್​ಗಳನ್ನು ಆತ ನೀಡಿದ್ದಾನೆ. ಒಂದು ದೊಡ್ಡ ಪ್ಲಾಸ್ಟಿಕ್ ಬ್ಯಾಗ್​ನಲ್ಲಿ ನೀರಿನ ಬಾಟಲ್​ಗಳನ್ನು ತರುವ ಆತ ಅಗತ್ಯವಿರುವವರಿಗೆ ಹಂಚುತ್ತಾನೆ. ವೃದ್ಧೆಯೋರ್ವರು ಪುಟಾಣಿ ಬಾಲಕನಿಗೆ ಆಶೀರ್ವಾದ ಮಾಡುತ್ತಿರುವ ದೃಶ್ಯವೂ ಸೆರೆಯಾಗಿದೆ.

ಮಾನವೀಯ ಗುಣವನ್ನು ತಿಳಿಸಿಕೊಡುವ ಈ ಘಟನೆಯ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಐಎಎಸ್ ಅಧಿಕಾರಿ ಅವನೀಶ್ ಶರಣ್ ಟ್ವೀಟ್ ಮೂಲಕ ವಿಡಿಯೋ ಹಂಚಿಕೊಂಡಿದ್ದು, ನೀವು ಮತ್ತೋರ್ವರಿಗೆ ಮಾಡುವ ಸಣ್ಣ ಸಹಾಯವೂ ಅವರ ದಿನವನ್ನು ವಿಶೇಷವಾಗಿಸುತ್ತದೆ ಎಂದು ಶೀರ್ಷಿಕೆ ನೀಡಿದ್ದಾರೆ. ಈ ವಿಡಿಯೋ ಸುಮಾರು 46,000ಕ್ಕೂ ಹೆಚ್ಚು ವೀಕ್ಷಣೆ ಪಡೆದಿದ್ದು, ವೈರಲ್ ಆಗಿದೆ.

ಅವನೀಶ್ ಶರಣ್ ಹಂಚಿಕೊಂಡಿರುವ ವಿಡಿಯೋ ಇಲ್ಲಿದೆ:

ಅವನೀಶ್ ಅವರು ಟ್ವಿಟರ್​ನಲ್ಲಿ ಸಕ್ರಿಯರಾಗಿದ್ದಾರೆ. ಯಾವುದಾದರೂ ಒಂದು ವಿಚಾರದ ಬಗ್ಗೆ ಅವರು ಬರೆಯುತ್ತಿರುತ್ತಾರೆ. ಅಥವಾ ವಿಡಿಯೋ, ಫೋಟೋಗಳ ಮೂಲಕ ಜನರಿಗೆ ಅರಿವು ಮೂಡಿಸುತ್ತಿರುತ್ತಾರೆ. ಇತ್ತೀಚೆಗೆ ನೃತ್ಯದ ಬಗ್ಗೆ ಅವರು ಒಂದು ಸಣ್ಣ ತುಣುಕನ್ನು ಹಂಚಿಕೊಂಡಿದ್ದರು. ಅದರಲ್ಲಿ ಪುಟಾಣಿ ಬಾಲಕಿಯೊಬ್ಬಳು ಯಾರಿಗೂ ಕೇರ್ ಮಾಡದೇ ತನ್ನ ಪಾಡಿಗೆ ತಾನು ಹೆಜ್ಜೆ ಹಾಕುತ್ತಾ ಇರುವ ದೃಶ್ಯವಿತ್ತು. ಯಾರೋ ನೋಡುತ್ತಿಲ್ಲ ಎನ್ನುವಂತೆ ನೃತ್ಯ ಮಾಡಿ ಎಂದು ಅವರು ಶೀರ್ಷಿಕೆ ನೀಡಿದ್ದರು. ಆ ವಿಡಿಯೋ ಕೂಡ ವೈರಲ್ ಆಗಿತ್ತು.

ಇನ್ನೂ ಹೆಚ್ಚಿನ ಕುತೂಹಲಕರ ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Viral Optical Illusion: ಬುದ್ಧಿಗೆ ಗುದ್ದು ನೀಡುವ ಈ ಚಿತ್ರದಲ್ಲಿ ಕರಡಿಯೊಂದು ಅಡಗಿದೆ; ನೀವು ಕಂಡುಹಿಡಿಯಬಲ್ಲಿರಾ? 

Radhika Pandit: ಪತ್ನಿ ರಾಧಿಕಾ ಪಂಡಿತ್ ಕೆನ್ನೆಗೆ ಮುತ್ತಿಟ್ಟ ಯಶ್; ಫೋಟೋ ವೈರಲ್

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ