Viral Video: ಬೈಕ್​ನಲ್ಲಿ ಪುಟ್ಟ ಬಾಲಕನ ಸಖತ್ ಸ್ಟಂಟ್; ವಿಡಿಯೊ ನೋಡಿ

ಅಂತರ್ಜಾಲದಲ್ಲಿ ಪುಟ್ಟ ಮಕ್ಕಳ ಹಲವು ಮುದ್ದಾದ ವಿಡಿಯೊಗಳು ವೈರಲ್ ಆಗುತ್ತವೆ. ಆದರೆ ಇಲ್ಲೊಬ್ಬ ಪೋರ ಬೈಕ್ ಸ್ಟಂಟ್ ಮಾಡುತ್ತಿರುವುದು ಎಲ್ಲರ ಗಮನ ಸೆಳೆದಿದೆ.

Viral Video: ಬೈಕ್​ನಲ್ಲಿ ಪುಟ್ಟ ಬಾಲಕನ ಸಖತ್ ಸ್ಟಂಟ್; ವಿಡಿಯೊ ನೋಡಿ
ವಿಡಿಯೊದಿಂದ ಸೆರೆಹಿಡಿಯಲಾದ ಚಿತ್ರ
Follow us
| Updated By: shivaprasad.hs

Updated on: Oct 03, 2021 | 3:52 PM

ಪುಟಾಣಿ ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಅಗಾಧ. ಕೇವಲ ಒಂದು ವಿಷಯವಲ್ಲದೇ ಹಲವಾರು ವಿಷಯಗಳಲ್ಲಿ ಅವರಿಗೆ ಕುತೂಹಲ, ಆಸಕ್ತಿ, ಪ್ರತಿಭೆ ಇರುತ್ತದೆ. ಅದರ ಅನುಸಾರ ಸಣ್ಣ ವಯಸ್ಸಿನಿಂದಲೇ ಅವರಿಗೆ ಶಿಕ್ಷಣ ದೊರೆತಲ್ಲಿ ಬಹಳ ದೊಡ್ಡ ಸಾಧನೆಯನ್ನೂ ಅವರು ಮಾಡುತ್ತಾರೆ. ಮತ್ತೆ ಹಲವು ಮಕ್ಕಳು ಸಣ್ಣ ವಯಸ್ಸಿನಿಂದಲೇ ತಮ್ಮ ಅಗಾಧ ಪ್ರತಿಭೆಯಿಂದ ಇಷ್ಟದ ಕ್ಷೇತ್ರಗಳಲ್ಲಿ ಛಾಪನ್ನು ಮೂಡಿಸಲು ಆರಂಭಿಸುತ್ತಾರೆ. ಇದು ನಿರ್ದಿಷ್ಟವಾಗಿ‌ ಇಂಥದ್ದೇ ಕ್ಷೇತ್ರ ಎಂಬುದಕ್ಕೆ ಸೀಮಿತವಾಗಿಲ್ಲ. ಅಂಥದ್ದೇ ಒಂದು ವಿಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ಪುಟ್ಟ ಬಾಲಕನೋರ್ವ ನಾಲ್ಕು ಚಕ್ರದ ಸಣ್ಣ ವಾಹನವನ್ನು ಚಲಾಯಿಸುತ್ತಿರುವುದು ವೈರಲ್ ಆಗಿದೆ.

ಬಾಲಕ ವಾಹನ ಚಾಲನೆ ಮಾಡುವುದರಲ್ಲಿ ಏನು ವಿಶೇಷ ಎಂದು ಯೋಚಿಸುತ್ತಿದ್ದೀರಾ? ನಾಲ್ಕು ಚಕ್ರದ ಬೈಕ್​ನಲ್ಲಿ ವೀಲಿಂಗ್ ಮಾಡುತ್ತಾ ಕೇವಲ ಎರಡೇ ಚಕ್ರದಲ್ಲಿ ಆತ ಚಲಾಯಿಸುತ್ತಿದ್ದಾನೆ. ಅದೂ ವಾಹನದ ಮುಂದಿನ ಚಕ್ರಗಳನ್ನು ಎತ್ತಿ ವೀಲಿಂಗ್ ಮಾಡುತ್ತಿರುವುದಲ್ಲ, ತನ್ನ ಎಡ ಭಾಗದ ಎರಡೂ ಚಕ್ರಗಳನ್ನು ನೆಲದಿಂದ ಮೇಲಕ್ಕೇರಿಸಿ ಗಾಡಿಯನ್ನು ಬಾಗಿಸಿ ರೇಸ್ ಬೈಕ್‌ನಂತೆ ಕಾರನ್ನು ಆತ ಓಡಿಸಿದ್ದಾನೆ.

ಕೇವಲ ಹತ್ತು ಸೆಕೆಂಡ್ ಗಳ ಈ ವಿಡಿಯೊ ಅಂತರ್ಜಾಲದಲ್ಲಿ ಸಖತ್ ವೈರಲ್ ಆಗಿದ್ದು, ಬಾಲಕನ ಪ್ರತಿಭೆಗೆ ಅನೇಕರು ತಲೆದೂಗಿದ್ದಾರೆ. ಹೆಲ್ಮೆಟ್ ಸೇರಿದಂತೆ ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡೇ ಸಾಹಸವನ್ನು ಪ್ರದರ್ಶಿಸಿದ್ದು, ಇದು ಕ್ರೀಡಾ ಅಭ್ಯಾಸದ ಒಂದು ಭಾಗ ಎಂಬುದನ್ನು ಸೂಚಿಸುತ್ತದೆ. ಇದಕ್ಕೂ ಕೂಡ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಡಿಯೊ ಇಲ್ಲಿದೆ:

ಪುಟ್ಟ ಬಾಲಕನ ಈ ಸಾಹಸದ ವಿಡಿಯೊ ತುಣಕನ್ನು ಅಂತರ್ಜಾಲದಲ್ಲಿ ಹಲವರು ಇಷ್ಟಪಟ್ಟಿದ್ದು, ವಿಧ ವಿಧದ ಮೀಮ್ಸ್​ಗಳನ್ನು ಮಾಡಿ ಹರಿಬಿಡುತ್ತಿದ್ದಾರೆ.

ಇದನ್ನೂ ಓದಿ:

Viral Video: ಆನೆಗಳೊಂದಿಗೆ ಹುಡುಗಿಯ ಸಕತ್ ಡಾನ್ಸ್; ವೈರಲ್​ ಆಯ್ತು ವಿಡಿಯೊ

Viral Video: ಕೊಳದ ದಡದಲ್ಲಿ ಅಡ್ಡಾಡುತ್ತಿದ್ದಾಗ ಆಯತಪ್ಪಿ ನೀರಿಗೆ ಬಿದ್ದ ಸಿಂಹ; ಆಮೇಲೇನಾಯ್ತು? ವಿಡಿಯೊ ನೋಡಿ

ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?