AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬೈಕ್​ನಲ್ಲಿ ಪುಟ್ಟ ಬಾಲಕನ ಸಖತ್ ಸ್ಟಂಟ್; ವಿಡಿಯೊ ನೋಡಿ

ಅಂತರ್ಜಾಲದಲ್ಲಿ ಪುಟ್ಟ ಮಕ್ಕಳ ಹಲವು ಮುದ್ದಾದ ವಿಡಿಯೊಗಳು ವೈರಲ್ ಆಗುತ್ತವೆ. ಆದರೆ ಇಲ್ಲೊಬ್ಬ ಪೋರ ಬೈಕ್ ಸ್ಟಂಟ್ ಮಾಡುತ್ತಿರುವುದು ಎಲ್ಲರ ಗಮನ ಸೆಳೆದಿದೆ.

Viral Video: ಬೈಕ್​ನಲ್ಲಿ ಪುಟ್ಟ ಬಾಲಕನ ಸಖತ್ ಸ್ಟಂಟ್; ವಿಡಿಯೊ ನೋಡಿ
ವಿಡಿಯೊದಿಂದ ಸೆರೆಹಿಡಿಯಲಾದ ಚಿತ್ರ
TV9 Web
| Edited By: |

Updated on: Oct 03, 2021 | 3:52 PM

Share

ಪುಟಾಣಿ ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಅಗಾಧ. ಕೇವಲ ಒಂದು ವಿಷಯವಲ್ಲದೇ ಹಲವಾರು ವಿಷಯಗಳಲ್ಲಿ ಅವರಿಗೆ ಕುತೂಹಲ, ಆಸಕ್ತಿ, ಪ್ರತಿಭೆ ಇರುತ್ತದೆ. ಅದರ ಅನುಸಾರ ಸಣ್ಣ ವಯಸ್ಸಿನಿಂದಲೇ ಅವರಿಗೆ ಶಿಕ್ಷಣ ದೊರೆತಲ್ಲಿ ಬಹಳ ದೊಡ್ಡ ಸಾಧನೆಯನ್ನೂ ಅವರು ಮಾಡುತ್ತಾರೆ. ಮತ್ತೆ ಹಲವು ಮಕ್ಕಳು ಸಣ್ಣ ವಯಸ್ಸಿನಿಂದಲೇ ತಮ್ಮ ಅಗಾಧ ಪ್ರತಿಭೆಯಿಂದ ಇಷ್ಟದ ಕ್ಷೇತ್ರಗಳಲ್ಲಿ ಛಾಪನ್ನು ಮೂಡಿಸಲು ಆರಂಭಿಸುತ್ತಾರೆ. ಇದು ನಿರ್ದಿಷ್ಟವಾಗಿ‌ ಇಂಥದ್ದೇ ಕ್ಷೇತ್ರ ಎಂಬುದಕ್ಕೆ ಸೀಮಿತವಾಗಿಲ್ಲ. ಅಂಥದ್ದೇ ಒಂದು ವಿಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ಪುಟ್ಟ ಬಾಲಕನೋರ್ವ ನಾಲ್ಕು ಚಕ್ರದ ಸಣ್ಣ ವಾಹನವನ್ನು ಚಲಾಯಿಸುತ್ತಿರುವುದು ವೈರಲ್ ಆಗಿದೆ.

ಬಾಲಕ ವಾಹನ ಚಾಲನೆ ಮಾಡುವುದರಲ್ಲಿ ಏನು ವಿಶೇಷ ಎಂದು ಯೋಚಿಸುತ್ತಿದ್ದೀರಾ? ನಾಲ್ಕು ಚಕ್ರದ ಬೈಕ್​ನಲ್ಲಿ ವೀಲಿಂಗ್ ಮಾಡುತ್ತಾ ಕೇವಲ ಎರಡೇ ಚಕ್ರದಲ್ಲಿ ಆತ ಚಲಾಯಿಸುತ್ತಿದ್ದಾನೆ. ಅದೂ ವಾಹನದ ಮುಂದಿನ ಚಕ್ರಗಳನ್ನು ಎತ್ತಿ ವೀಲಿಂಗ್ ಮಾಡುತ್ತಿರುವುದಲ್ಲ, ತನ್ನ ಎಡ ಭಾಗದ ಎರಡೂ ಚಕ್ರಗಳನ್ನು ನೆಲದಿಂದ ಮೇಲಕ್ಕೇರಿಸಿ ಗಾಡಿಯನ್ನು ಬಾಗಿಸಿ ರೇಸ್ ಬೈಕ್‌ನಂತೆ ಕಾರನ್ನು ಆತ ಓಡಿಸಿದ್ದಾನೆ.

ಕೇವಲ ಹತ್ತು ಸೆಕೆಂಡ್ ಗಳ ಈ ವಿಡಿಯೊ ಅಂತರ್ಜಾಲದಲ್ಲಿ ಸಖತ್ ವೈರಲ್ ಆಗಿದ್ದು, ಬಾಲಕನ ಪ್ರತಿಭೆಗೆ ಅನೇಕರು ತಲೆದೂಗಿದ್ದಾರೆ. ಹೆಲ್ಮೆಟ್ ಸೇರಿದಂತೆ ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡೇ ಸಾಹಸವನ್ನು ಪ್ರದರ್ಶಿಸಿದ್ದು, ಇದು ಕ್ರೀಡಾ ಅಭ್ಯಾಸದ ಒಂದು ಭಾಗ ಎಂಬುದನ್ನು ಸೂಚಿಸುತ್ತದೆ. ಇದಕ್ಕೂ ಕೂಡ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಡಿಯೊ ಇಲ್ಲಿದೆ:

ಪುಟ್ಟ ಬಾಲಕನ ಈ ಸಾಹಸದ ವಿಡಿಯೊ ತುಣಕನ್ನು ಅಂತರ್ಜಾಲದಲ್ಲಿ ಹಲವರು ಇಷ್ಟಪಟ್ಟಿದ್ದು, ವಿಧ ವಿಧದ ಮೀಮ್ಸ್​ಗಳನ್ನು ಮಾಡಿ ಹರಿಬಿಡುತ್ತಿದ್ದಾರೆ.

ಇದನ್ನೂ ಓದಿ:

Viral Video: ಆನೆಗಳೊಂದಿಗೆ ಹುಡುಗಿಯ ಸಕತ್ ಡಾನ್ಸ್; ವೈರಲ್​ ಆಯ್ತು ವಿಡಿಯೊ

Viral Video: ಕೊಳದ ದಡದಲ್ಲಿ ಅಡ್ಡಾಡುತ್ತಿದ್ದಾಗ ಆಯತಪ್ಪಿ ನೀರಿಗೆ ಬಿದ್ದ ಸಿಂಹ; ಆಮೇಲೇನಾಯ್ತು? ವಿಡಿಯೊ ನೋಡಿ

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್