AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗಾಂಗ ದಾನದ ಮೂಲಕ ಇಬ್ಬರು ಯೋಧರು ಸೇರಿದಂತೆ ಐವರ ಜೀವ ಉಳಿಸಿದ ಮೆದುಳು ನಿಷ್ಕ್ರಿಯಗೊಂಡ ಮಹಿಳೆ

ಮೆದುಳು ನಿಷ್ಕ್ರಿಯಗೊಂಡ ಮಹಿಳೆಯ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಇಬ್ಬರು ಸೈನಿಕರು ಸೇರಿದಂತೆ ಒಟ್ಟು ಐವರಿಗೆ ಮರುಜನ್ಮ ನೀಡಿದಂತಾಗಿದೆ. ಈ ಬಗ್ಗೆ ಸಂಪೂರ್ಣ ವರದಿ ಇಲ್ಲಿದೆ.

ಅಂಗಾಂಗ ದಾನದ ಮೂಲಕ ಇಬ್ಬರು ಯೋಧರು ಸೇರಿದಂತೆ ಐವರ ಜೀವ ಉಳಿಸಿದ ಮೆದುಳು ನಿಷ್ಕ್ರಿಯಗೊಂಡ ಮಹಿಳೆ
ಸಾಂಕೇತಿಕ ಚಿತ್ರ
TV9 Web
| Edited By: Rakesh Nayak Manchi|

Updated on:Jul 16, 2022 | 9:35 AM

Share

ಮೆದುಳು ನಿಷ್ಕ್ರಿಯಗೊಂಡ ಮಹಿಳೆಯೊಬ್ಬರ ಅಂಗಾಂಗ ದಾನ ಮಾಡುವ ಮೂಲಕ ಇಬ್ಬರು ಸೈನಿಕರು ಸೇರಿದಂತೆ ಒಟ್ಟು ಐವರಿಗೆ ಮರುಜನ್ಮ ನೀಡಿದಂತಾಗಿದೆ. ಮಹಾರಾಷ್ಟ್ರದ ಪುಣೆಯಲ್ಲಿರುವ ಕಮಾಂಡ್ ಹಾಸ್ಪಿಟಲ್ ಸದರ್ನ್ ಕಮಾಂಡ್ (ಸಿಎಚ್‌ಎಸ್‌ಸಿ)ಯಲ್ಲಿ ಇಬ್ಬರು ಸೇನಾ ಯೋಧರು ಸೇರಿದಂತೆ ಐವರಿಗೆ ಮಹಿಳೆಯ ಅಂಗಾಗಳನ್ನು ಕಸಿ ಮಾಡಲಾಗಿದೆ. ಮಹಿಳೆಯು ತನ್ನ ಜೀವನದ ಕೊನೆಯ ಹಂತದಲ್ಲಿ CHSC ಪುಣೆಗೆ ಕರೆತರಲಾಯಿತು ಎಂದು ಸುದ್ದಿ ಸಂಸ್ಥೆ ANI ಶನಿವಾರ ಮುಂಜಾನೆ ವರದಿ ಮಾಡಿದೆ.

ಆಸ್ಪತ್ರೆಯ ಕಸಿ ಸಂಯೋಜಕರೊಂದಿಗಿನ ಚರ್ಚೆಯ ನಂತರ ಮಹಿಳೆಯ ಕುಟುಂಬಸ್ಥರು ಅಂಗಾಂಗ ದಾನ ಮಾಡಲು ನಿರ್ಧರಿಸಿದ್ದಾರೆ. ಅದರಂತೆ ಅಗತ್ಯ ಅನುಮತಿಗಳನ್ನು ಪಡೆದ ನಂತರ ಕಸಿ ಮಾಡುವ ವೈದ್ಯರ ತಂಡ ತಕ್ಷಣ ಸಕ್ರಿಯವಾಗಿ ಗುರುವಾರ ರಾತ್ರಿ ಮತ್ತು ಶುಕ್ರವಾರದ ಮುಂಜಾನೆ ನಡುವೆ ಕಾರ್ಯಸಾಧ್ಯವಾದ ಅಂಗಗಳನ್ನು ಮತ್ತು ಮೂತ್ರಪಿಂಡಗಳನ್ನು ಇಬ್ಬರು ಸೈನಿಕರಿಗೆ ಕಸಿ ಮಾಡಿತು. ಮಹಿಳೆಯ ಕಣ್ಣುಗಳನ್ನು CH(SC)-ಆರ್ಮ್ಡ್ ಫೋರ್ಸಸ್ ಮೆಡಿಕಲ್ ಕಾಲೇಜ್ ಕಾಂಪ್ಲೆಕ್ಸ್‌ನಿಂದ ಸಂರಕ್ಷಿಸಲಾಗಿದ್ದು, ಆಕೆಯ ಯಕೃತ್ತನ್ನು ಪುಣೆಯ ರೂಬಿ ಹಾಲ್ ಕ್ಲಿನಿಕ್‌ನಲ್ಲಿನ ರೋಗಿಯೊಬ್ಬರಿಗೆ ನೀಡಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ರಕ್ಷಣಾ ಪಿಆರ್​ಒ, “ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದಾಗ ಜೀವ ಉಳಿಯುವ ಲಕ್ಷಣಗಳು ಇರಲಿಲ್ಲ. ಹೀಗಾಗಿ ಆಸ್ಪತ್ರೆಯ ಕಸಿ ಸಂಯೋಜಕರೊಂದಿಗೆ ಚರ್ಚಿಸಿದ ನಂತರ ಕುಟುಂಬದವರು ಮಹಿಳೆಯ ಅಂಗಗಳನ್ನು ತೀವ್ರ ಅಗತ್ಯವಿರುವ ರೋಗಿಗಳಿಗೆ ದಾನ ಮಾಡಬೇಕೆಂದು ಬಯಸಿದರು” ಎಂದರು. “ಸಾವಿನ ನಂತರ ಅಂಗಾಂಗ ದಾನದ ಪರೋಪಕಾರಿ ಸೂಚಕ ಮತ್ತು ಆಸ್ಪತ್ರೆಯಲ್ಲಿನ ಉತ್ತಮ ಸಂಘಟಿತ ಪ್ರಯತ್ನವು ಐದು ತೀವ್ರ ಅಸ್ವಸ್ಥ ರೋಗಿಗಳಿಗೆ ಜೀವನ ಮತ್ತು ದೃಷ್ಟಿಯನ್ನು ನೀಡಿತು” ಎಂದು ಹೇಳಿದರು.

ಜೂನ್‌ನಲ್ಲಿ ಅಪಘಾತಕ್ಕೀಡಾದ ಬಿಹಾರದ ಮಾಜಿ ಸೇನಾಧಿಕಾರಿಯೊಬ್ಬರ ಮೆದುಳು ನಿಷ್ಕ್ರಿಯಗೊಂಡಿತ್ತು. ಹೀಗಾಗಿ ಅವರ ಯಕೃತ್ತು ಮತ್ತು ಎರಡು ಮೂತ್ರಪಿಂಡಗಳನ್ನು ಉತ್ತರ ಪ್ರದೇಶದಲ್ಲಿ ಮೂರು ವಿಭಿನ್ನ ರೋಗಿಗಳಿಗೆ ಕಸಿ ಮಾಡಲಾಯಿತು. ಅವರ ಯಕೃತ್ತನ್ನು ಲಕ್ನೋದ ಕಿಂಗ್ ಗೆರೋಜ್ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಪ್ರತಾಪ್‌ಗಢದ 39 ವರ್ಷದ ರೋಗಿಗೆ ಮತ್ತು ಅವರ ಮೂತ್ರಪಿಂಡಗಳನ್ನು ಇತರ ಇಬ್ಬರು ರೋಗಿಗಳಿಗೆ ಕಸಿ ಮಾಡಲಾಯಿತು.

Published On - 9:34 am, Sat, 16 July 22

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ