AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಹೋರಿ ದಾಳಿಯಿಂದ ತನ್ನ ಅಜ್ಜಿಯನ್ನು ಕಾಪಾಡಿದ ಧೈರ್ಯವಂತ ಬಾಲಕ

ಸೋಷಿಯಲ್‌ ಮೀಡಿಯಾದಲ್ಲಿ ಪ್ರತಿನಿತ್ಯ ಹಲವಾರು ವಿಡಿಯೋಗಳು ಹರಿದಾಡುತ್ತಿರುತ್ತವೆ. ಅವುಗಳಲ್ಲಿ ಕೆಲವೊಂದು ದೃಶ್ಯಗಳು ನಮ್ಮ ಮನಗೆಲ್ಲುತ್ತದೆ. ಇದೀಗ ಅಂತಹದ್ದೇ ವಿಡಿಯೋ ವೈರಲ್‌ ಆಗಿದ್ದು, ಪುಟ್ಟ ಬಾಲಕನೊಬ್ಬ ತನ್ನ ಧೈರ್ಯ ಮತ್ತು ಸಮಯ ಪ್ರಜ್ಞೆಯಿಂದ ಅಜ್ಜಿಯೊಬ್ಬರನ್ನು ಹೋರಿ ದಾಳಿಯಿಂದ ಕಾಪಾಡಿದ್ದಾನೆ. ಪುಟ್ಟ ಹುಡುಗನ ಧೈರ್ಯಕ್ಕೆ ಭಾರೀ ಶ್ಲಾಘನೆ ವ್ಯಕ್ತವಾಗಿದೆ.

Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 30, 2024 | 3:24 PM

ಪುಟಾಣಿ ಮಕ್ಕಳಿಗೆ ತಮ್ಮ ಅಜ್ಜ-ಅಜ್ಜಿ ಎಂದ್ರೆ ಬಲು ಪ್ರೀತಿ. ಹೌದು ದಿನದ ಪ್ರತಿ ನಿಮಿಷವೂ ಕೂಡಾ ಅಜ್ಜ-ಅಜ್ಜಿಯ ಜೊತೆ ಕಳೆಯಲು ಇಷ್ಟ ಪಡ್ತಾರೆ. ಹೀಗೆ ಅವರೊಂದಿಗೆ ಆಟವಾಡುತ್ತಾ, ಕಥೆ, ಕೇಳುತ್ತಾ, ಕೈ ತುತ್ತು ತಿನ್ನುತ್ತಾ ಹಿರಿ ಜೀವಗಳೊಂದಿಗೆ ಸಮಯ ಕಳೆಯುತ್ತಾರೆ. ಇಂತಹ ತಮ್ಮ ಪ್ರೀತಿಯ ಅಜ್ಜ ಅಜ್ಜಿಗೆ ಪುಟಾಣಿ ಮಕ್ಕಳು ಯಾವುದೇ ಒಂದು ಸಣ್ಣ ನೋವಾಗಲೂ ಕೂಡಾ ಬಿಡಲ್ಲ. ಇದಕ್ಕೆ ಉದಾಹರಣೆಯಂತಿರುವ ವಿಡಿಯೋವೊಂದು ಇದೀಗ ವೈರಲ್‌ ಆಗಿದ್ದು, ತನ್ನ ಅಜ್ಜಿಯ ಮೇಲೆ ಹೋರಿ ದಾಳಿ ಮಾಡಿದಾಗ ಪುಟ್ಟ ಬಾಲಕನೊಬ್ಬ ಹೆದರಿ ಅಲ್ಲಿಂದ ಓಡಿ ಹೋಗದೆ, ತನ್ನ ಧೈರ್ಯ ಮತ್ತು ಸಮಯ ಪ್ರಜ್ಞೆಯಿಂದ ಹೋರಿಯನ್ನು ಒದ್ದೋಡಿಸಿ ತನ್ನ ಅಜ್ಜಿಯನ್ನು ಕಾಪಾಡಿದ್ದಾನೆ. ಈ ವಿಡಿಯೋ ಇದೀಗ ವೈರಲ್‌ ಆಗುತ್ತಿದ್ದು, ದಿಟ್ಟ ಬಾಲಕನ ಈ ಕಾರ್ಯಕ್ಕೆ ಭಾರೀ ಶ್ಲಾಘನೆ ವ್ಯಕ್ತವಾಗಿದೆ.

ಈ ಕುರಿತ ವಿಡಿಯೋವನ್ನು garrywalia_ ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಮಗುವಿನ ಧೈರ್ಯಕ್ಕೆ ವಂದನೆಗಳು” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಧೈರ್ಯಶಾಲಿ ಬಾಲಕ ತನ್ನ ಅಜ್ಜಿಯನ್ನು ಹೋರಿ ದಾಳಿಯಿಂದ ರಕ್ಷಿಸುವ ದೃಶ್ಯವನ್ನು ಕಾಣಬಹುದು. ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಅಲ್ಲಿಗೆ ಬಂದಂತಹ ಹೋರಿಯೊಂದು ಅಜ್ಜಿಯೊಬ್ಬರ ಮೇಲೆ ದಾಳಿ ಮಾಡುತ್ತದೆ. ಈ ದೃಶ್ಯವನ್ನು ಕಂಡು ಹೆದರಿ ಓಡಿ ಹೋಗದೆ ಪುಟ್ಟ ಬಾಲಕ ತನ್ನ ಧೈರ್ಯ ಮತ್ತು ಸಮಯ ಪ್ರಜ್ಞೆಯಿಂದ ಪೊರಕೆಯನ್ನು ಕೈಯಲ್ಲಿ ಹಿಡಿದು ಹೋರಿಯನ್ನು ಒದ್ದೋಡಿಸಿ ತನ್ನ ಅಜ್ಜಿಯನ್ನು ಕಾಪಾಡಿದ್ದಾನೆ. ಈ ದೃಶ್ಯ ಮನೆಯಲ್ಲಿ ಅಳವಡಿಸಲಾಗಿದ್ದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ನಮ್‌ ಬಾಸ್‌ ರಿಲೀಸೋ.. ದೇವ್ರು ರಿಲೀಸ್‌ ಆಗ್ಬಿರ್ಟ್ರು ಕಣ್ರಲೇ!ವೈರಲ್‌ ಆಗ್ತಿದೆ ದರ್ಶನ್ ಮೀಮ್ಸ್

ಅಕ್ಟೋಬರ್‌ 29 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಆ ಮಗುವಿನ ಧೈರ್ಯಕ್ಕೆ ಸೆಲ್ಯೂಟ್‌ʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಭಯದಿಂದ ಓಡಿ ಹೋಗದೆ ಅಜ್ಜಿಯನ್ನು ಕಾಪಾಡಿದ ಆ ಮಗುವಿನ ಧೈರ್ಯಕ್ಕೆ ಮೆಚ್ಚಲೇಬೇಕುʼ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ