AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಳಿ ಕೇಳಿ ಗೂಳಿ, ಆಮಂತ್ರಣ ಬೇಕೇ ಮದುವೆಗೆ? ವೈರಲ್ ಆದ ವಿಡಿಯೋ ನೋಡಿ

Viral Video : ಅತ್ಯಂತ ವಿಜೃಂಭಣೆಯಿಂದ ಆ ಮದುವೆಗೆ ತಯಾರಿ ಮಾಡಿದ್ದರು. ಭಕ್ಷ್ಯ-ಪಾನೀಯಗಳು ಅತಿಥಿಗಳಿಗಾಗಿ ಕಾಯುತ್ತಿದ್ದವು. ಅದೆಲ್ಲಿಂದ ಬಂದರೋ ನಾಲ್ಕುಕಾಲಿನ ಈ ಅಭ್ಯಾಗತರು! ನೋಡಿ ಹೇಗಿದೆ 15 ಸೆಕೆಂಡುಗಳ ಈ ವಿಡಿಯೋ.

ಹೇಳಿ ಕೇಳಿ ಗೂಳಿ, ಆಮಂತ್ರಣ ಬೇಕೇ ಮದುವೆಗೆ? ವೈರಲ್ ಆದ ವಿಡಿಯೋ ನೋಡಿ
ಮದುವೆಗೆ ಬಂದ ಗೂಳಿ
Follow us
TV9 Web
| Updated By: ಶ್ರೀದೇವಿ ಕಳಸದ

Updated on:Dec 10, 2022 | 2:58 PM

Viral Video : ಮದುವೆಮನೆಗೆ ಬೆಕ್ಕು, ನಾಯಿಯಂಥ ಸಾಕುಪ್ರಾಣಿಗಳು ನುಗ್ಗುವುದನ್ನು ನೋಡಿದ್ದೇವೆ. ಆದರೆ ಗೂಳೀ!? ಮದುವೆ ನಡೆಯುವ ಸ್ಥಳವನ್ನು ಅತ್ಯಂತ ವೈಭವಯುತವಾಗಿ ಅಲಂಕರಿಸಲಾಗಿದೆ. ಶಿಸ್ತಾಗಿ ಪಾನೀಯ, ಆಹಾರದ ಕೌಂಟರುಗಳನ್ನು ಜೋಡಿಸಲಾಗಿದೆ. ಅತಿಥಿಗಳ ಆಗಮನದಲ್ಲಿ ಎಲ್ಲರೂ ಇದ್ದಾರೆ. ಆದರೆ ಇದೆಲ್ಲಿಂದ ಬಂದಿತೋ ಗೂಳಿ? ಗೂಳಿ ಎಂದಮೇಲೆ ಆಮಂತ್ರಣ ಬೇಕೇ? ಹದಿನೈದು ಸೆಕೆಂಡುಗಳ ಈ ವಿಡಿಯೋ ಅನ್ನು ನೆಟ್ಟಿಗರು ಅವಾಕ್ಕಾಗಿ ನೋಡುತ್ತಿದ್ದಾರೆ. ಎಲ್ಲಿ ನುಗ್ಗಿ ಏನು ಹಾನಿ ಮಾಡುತ್ತದೆಯೋ ಎಂಬ ಆತಂಕ ಉಂಟಾಗದೇ ಇರದು.

ಇದು ಒಳಬರುತ್ತಿದ್ದಂತೆ ಯಾರೋ ಒಬ್ಬರು ಕೈಸನ್ನೆಯಿಂದ ಅದನ್ನು ಓಡಿಸಲು ಪ್ರಯತ್ನಿಸಿದ್ದಾರೆ. ಅದನ್ನು ಓಡಿಸುವುದಕ್ಕಿಂತ ತನ್ನನ್ನು ತಾ ರಕ್ಷಿಸಿಕೊಳ್ಳುವುದೇ ಮೇಲು ಎನ್ನಿಸಿದಂತಿದೆ. ಗಾಜಿನಿಂದ ಅಲಂಕರಿಸಿದ ಕೌಂಟರಿನ ಕಡೆ ಓಡುತ್ತದೆ. ನೆಟ್ಟಿಗರಂತೂ ಈ ವಿಡಿಯೋ ಅನ್ನು ಉಸಿರು ಬಿಗಿಹಿಡಿದು ನೋಡಿದ್ದಾರೆ. ಸದ್ಯ ಬೇಗ ಇದು ಮರಳಿದೆ. ಇಲ್ಲವಾದಲ್ಲಿ ಧ್ವಂಸ ಮಾಡದೇ ಇದು ಜಾಗ ಖಾಲಿ ಮಾಡುವ ಜಾಯಮಾನದ್ದು ಅಲ್ಲ ಎಂದಿದ್ದಾರೆ ಹಲವರು.

ಅದೃಷ್ಟ ಚೆನ್ನಾಗಿದೆ ಮದುವೆ ಮನೆಯವರದು. ಗೂಳಿಯೊಳಗೂ ಸಂಭಾವಿತತನ ಇದ್ದಹಾಗಿದೆ. ಸದ್ಯ ಎಲ್ಲಾ ಬಚಾವ್​ ಎನ್ನುತ್ತಿದ್ದಾರೆ ನೆಟ್ಟಿಗರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 2:58 pm, Sat, 10 December 22

ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?