AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಏಕಾಏಕಿ ಎಲೆಕ್ಟ್ರಾನಿಕ್ ರಿಪೇರಿ ಶಾಪ್ ಒಳಗೆ ನುಗ್ಗಿದ ಗೂಳಿ; ಹೆದರಿ ಹೈರಾಣಾದ ಅಂಗಡಿ ಮಾಲೀಕ

ಸೋಷಿಯಲ್ ಮಿಡಿಯಾದಲ್ಲಿ ಪ್ರತಿನಿತ್ಯ ತರಹೇವಾರಿ ವಿಡಿಯೋಗಳು ಹರಿದಾಡುತ್ತಿರುತ್ತವೆ. ಅದರಲ್ಲಿ ಕೆಲವು ವಿಡಿಯೋ ದೃಶ್ಯಾವಳಿಗಳಂತೂ ನಮ್ಮನ್ನು ಹೊಟ್ಟೆ ಹುಣ್ಣಾಗಿಸುವಂತೆ ನಗಿಸುತ್ತವೆ. ಸದ್ಯ ಅಂತಹದ್ದೊಂದು ಫನ್ನಿ ವಿಡಿಯೋ ವೈರಲ್ ಆಗಿದ್ದು, ಕೋಪಗೊಂಡ ಗೂಳಿಯೊಂದು ಇದಕ್ಕಿದ್ದಂತೆ ಎಲೆಕ್ಟ್ರಾನಿಕ್ ರಿಪೇರಿ ಶಾಪ್ ಒಳಗೆ ನುಗ್ಗಿದೆ. ಗೂಳಿ ನುಗ್ಗಿದ ತಕ್ಷಣ ಅಲ್ಲಿಂದ ಹೊರಬರಲಾರದೆ ಅಂಗಡಿ ಮಾಲೀಕ ಪೇಚಿಗೆ ಸಿಲುಕಿದ್ದಾರೆ.

Viral Video: ಏಕಾಏಕಿ ಎಲೆಕ್ಟ್ರಾನಿಕ್ ರಿಪೇರಿ ಶಾಪ್ ಒಳಗೆ ನುಗ್ಗಿದ ಗೂಳಿ; ಹೆದರಿ ಹೈರಾಣಾದ ಅಂಗಡಿ ಮಾಲೀಕ
ಮಾಲಾಶ್ರೀ ಅಂಚನ್​
| Edited By: |

Updated on: Apr 24, 2024 | 6:12 PM

Share

ಯಾವುದೇ ಪ್ರಾಣಿಗಳಾಗಿರಲಿ ಹೆಚ್ಚಿನ ಸಂದರ್ಭಗಳಲ್ಲಿ ಅವುಗಳು ಯಾರಿಗೂ ತೊಂದರೆ ಕೊಡದೆ ತಮ್ಮ ಪಾಡಿಗೆ ಇದ್ದು ಬಿಡುತ್ತವೆ. ಕೆಲವೊಮ್ಮೆ ಅವುಗಳಿಗೆ ಮದವೇರಿದಾಗ, ಸಿಟ್ಟು ಬಂದಾಗ ರಂಪ ರಾಮಾಯಣವನ್ನೇ ನಡೆಸುತ್ತವೆ. ಹೀಗೆ ಪ್ರಾಣಿಗಳ ಸಿಟ್ಟಿಗೆ ಗುರಿಯಾಗಿ ಪೇಚಿಗೆ ಸಿಲುಕಿದಂತವರ ಕಥೆಗಳನ್ನು ನೀವು ಕೂಡಾ ನೋಡಿರುತ್ತೀರಿ ಅಲ್ವಾ. ಸದ್ಯ ಅದೇ ರೀತಿಯ ಇದೀಗ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಸಿಟ್ಟಿಗೆದ್ದ ಗೂಳಿಯೊಂದು ಏಕಾಏಕಿ ಎಲೆಕ್ಟ್ರಾನಿಕ್ ರಿಪೇರಿ ಶಾಪ್ ಒಳಗೆ ನುಗ್ಗಿದ್ದು, ಗೂಳಿಯ ವರ್ತನೆಯಿಂದ ಅಂಗಡಿಯೊಳಗಿದ್ದ ಯುವಕರಿಬ್ಬರು ಪಜೀತಿಗೆ ಸಿಲುಕಿದ್ದಾರೆ.

ಈ ಕುರಿತ ವಿಡಿಯೋವನ್ನು ಚಿರಾಗ್ (@chiragbarjathya) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ಎಲೆಕ್ಟ್ರಾನಿಕ್ ರಿಪೇರಿ ಶಾಪ್ ಒಂದರಲ್ಲಿ ಯುವಕರಿಬ್ಬರು ತಮ್ಮ ಪಾಡಿಗೆ ಕೆಲಸ ಮಾಡುತ್ತಿರುವ ದೃಶ್ಯವನ್ನು ಕಾಣಬಹುದು. ಹೀಗೆ ಕೆಲಸ ಮಾಡುತ್ತಿರುವ ವೇಳೆ ಏನೋ ಸದ್ದು ಕೇಳಿಸುತ್ತಿದೆಯಲ್ವಾ ಎಂದು ಎದ್ದು ಈಚೆ ನೋಡುತ್ತಿರುವ ವೇಳೆಯಲ್ಲಿ ಏಕಾಏಕಿ ಗೂಳಿಯೊಂದು ಬಂದು ಇವರ ಅಂಗಡಿಯೊಳಗೆ ನುಗ್ಗಿ ಬಿಡುತ್ತದೆ. ಅಯ್ಯೋ ದೇವ್ರೆ ಈ ಗೂಳಿಯ ಕೈಗೆ ಸಿಕ್ರೆ ನಮ್ ಕಥೆ ಗೋವಿಂದ ಎಂದು ಆ ಯುವಕರಿಬ್ಬರು ಗೂಳಿಯ ದಾಳಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುತ್ತಾರೆ. ಹಾಗೂ ಗೂಳಿ ಕೂಡಾ ಇಲ್ಲಿಂದ ಹೇಗಪ್ಪಾ ಹೊರ ಹೋಗೋದು ಎಂದು ಪರದಾಡುತ್ತೆ. ಆ ಸಂದರ್ಭದಲ್ಲಿ ಹೊರಗಿದ್ದವರು ಗೂಳಿ ಹೊರ ಬರಲು ದಾರಿಯನ್ನು ಮಾಡಿಕೊಡುತ್ತಾರೆ.

ಇದನ್ನೂ ಓದಿ: ಗೋಧಿ ಕಟಾವು ಮಷಿನ್‌ ಒಳಗೆ ಸಿಲುಕಿ 14ರ ಬಾಲಕ ಸಾವು; ಛಿದ್ರಗೊಂಡ ದೇಹ

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ ಐದು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ದೇವ್ರೆ ಇದೆಂಥಾ ವಿಚಿತ್ರ ಘಟನೆಯಪ್ಪಾ ಎಂದು ನೆಟ್ಟಿಗರು ಈ ವಿಡಿಯೋ ದೃಶ್ಯಾವಳಿಯನ್ನು ಕಂಡು ಆಶ್ಚರ್ಯಚಕಿತರಾಗಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ