AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನೂ ಅರಿಯದ 8 ತಿಂಗಳ ಹಸುಗೂಸನ್ನು ಅಮಾನುಷವಾಗಿ ಥಳಿಸಿದ ಕೇರ್​ಟೇಕರ್; ಐಸಿಯುಗೆ ದಾಖಲಾದ ಮಗು

ಹೌದು ಏನೂ ಅರಿದ 8 ತಿಂಗಳ ಹಸುಗೂಸಿಗೆ ಕೇರ್​ಟೇಕರ್ ಒಬ್ಬಳು ನಿರ್ದಾಕ್ಷಣ್ಯವಾಗಿ ಥಳಿಸಿರುವಂತಹ ಭೀಕರ ಘಟನೆ ನಡೆದಿದೆ.

ಏನೂ ಅರಿಯದ 8 ತಿಂಗಳ ಹಸುಗೂಸನ್ನು ಅಮಾನುಷವಾಗಿ ಥಳಿಸಿದ ಕೇರ್​ಟೇಕರ್; ಐಸಿಯುಗೆ ದಾಖಲಾದ ಮಗು
ಮಗುವನ್ನು ಥಳಿಸುತ್ತಿರುವ ಕೇರ್​ಟೇಕರ್
TV9 Web
| Edited By: |

Updated on:Feb 05, 2022 | 2:32 PM

Share

ಗುಜರಾತ್: ಅದೆಷ್ಟೋ ಪಾಲಕರು ತಮ್ಮ ಕಂದಮ್ಮಗಳನ್ನು ಕೇರ್​ಟೇಕರ್ (caretaker) ಹತ್ತಿರ ಬಿಟ್ಟು ನೆಮ್ಮದಿಯಿಂದ ಕೆಲಸಕ್ಕೆ ಹೋಗುತ್ತಾರೆ. ಆದರೆ ಅಂತಹ ಪಾಲಕರಿಗೆ ಒಂದು ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಹೌದು ಏನೂ ಅರಿದ 8 ತಿಂಗಳ ಹಸುಗೂಸಿಗೆ ಕೇರ್​ಟೇಕರ್ ಒಬ್ಬಳು ನಿರ್ದಾಕ್ಷಣ್ಯವಾಗಿ ಥಳಿಸಿರುವಂತಹ ಭೀಕರ ಘಟನೆ ನಡೆದಿದೆ. ಗುಜರಾತ್‌ನ ಸೂರತ್ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದೆ. ಪಾಟಿಯಾದ ನಿವಾಸಿಗಳಾದ ಸೂರತ್‌ನ ರಾಂದರ್ ಪಾಲನ್‌ಪುರ್ ದಂಪತಿ ಇಬ್ಬರೂ ಉದ್ಯೋಗಿಗಳಾಗಿದ್ದು, ತಮ್ಮ ಮಗುವನ್ನು ನೋಡಿಕೊಳ್ಳಲು ಒಬ್ಬ ಕೇರ್‌ಟೇಕರ್ ಅನ್ನು ನೇಮಿಸಿಕೊಂಡಿದ್ದರು.

ದಂಪತಿ ಕೇರ್‌ಟೇಕರ್​ನ್ನು ನೇಮಿಸಿಕೊಂಡರು ಸಹ ಮಗು ಅಳುತ್ತಿರುವುದನ್ನು ನೆರೆಹೊರೆಯವರು ಹೇಳಿದ್ದಾರೆ. ಆ ಬಳಿಕ ದಂಪತಿಗಳು ತಮ್ಮ ಮನೆಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದಾರೆ. ಆವಾಗ ಅವರಿಗೆ ಕಂಡದ್ದು ಭಯಾನಕ ದೃಶ್ಯಗಳು. ಹೌದು ಕೇರ್‌ಟೇಕರ್ ಮಗುವನ್ನು ಅಮಾನುಷವಾಗಿ ಥಳಿಸುವ ದೃಶ್ಯವನ್ನು ಕ್ಯಾಮರಾದಲ್ಲಿ ಸೆರೆಯಾಗಿವೆ. ವಿಡಿಯೋದಲ್ಲಿ ಕೇರ್​ಟೇಕರ್​ ಮಗುವಿನ ತಲೆಗೆ ಹಾಸಿಗೆಯಿಂದ ಪದೇ ಪದೇ ಹೊಡೆಯುತ್ತಿರುವುದು ಕಂಡುಬಂದಿದೆ. ಹಸುಗೂಸಿನ ಕದಲು ಎಳೆಯುವುದು ಮತ್ತು ನಿರ್ದಯವಾಗಿ ಹೊಡೆಯುತ್ತಿರುವುದು ಕೂಡಾ ಸೆರೆಯಾಗಿದೆ. ಹಲ್ಲೆಯಿಂದ ಮಿದುಳು ರಕ್ತಸ್ರಾವದಿಂದ ಬಳಲುತ್ತಿದ್ದ ಮಗುವನ್ನು ಸದ್ಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ದಾಖಲಿಸಲಾಗಿದೆ.

ಇಂಡಿಯಾ ಟುಡೆಯೊಂದಿಗೆ ಮಾತನಾಡಿರುವ ಮಗುವಿನ  ಅಜ್ಜಿ ಕಲಾಬೆನ್ ಪಟೇಲ್, ಕೇರ್‌ಟೇಕರ್  ಆದ ಆರೋಪಿ ಕೋಮಲ್ ಚಾಂಡ್ಲೇಕರ್ ಅವರನ್ನು ಮೂರು ತಿಂಗಳ ಹಿಂದೆ ನೇಮಿಸಲಾಗಿತ್ತು. ಕೋಮಲ್ ಆರಂಭದಲ್ಲಿ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದಳು. ಆದರೆ, ಆಕೆಯ ಆಶ್ರಯದಲ್ಲಿ ಮಕ್ಕಳು ಅಳುವುದನ್ನು ಮುಂದುವರಿಸಿದ ನಂತರ ಅನುಮಾನ ಹುಟ್ಟಿಕೊಂಡಿದೆ. ನಂತರ ಪೋಷಕರು ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದು, ಭಯಾನಕ ವಿಷಯ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದ್ದಾರೆ. ಸದ್ಯ ಘಟನೆಯ ನಂತರ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಮಹಿಳೆಯನ್ನು ವಶಕ್ಕೆ ಪಡೆಯಲಾಗಿದೆ. 8 ತಿಂಗಳ ಮಗುವಿನ ತಂದೆ ಮಿತೇಶ್ ಪಟೇಲ್, ಆರೋಪಿಗಳ ವಿರುದ್ಧ ಸೂರತ್‌ನ ರಾಂಡರ್ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಗೆ ಮದುವೆಯಾಗಿ 5 ವರ್ಷವಾಗಿತ್ತು, ಆದರೆ ಅವಳಿಗೆ ಸ್ವಂತ ಮಗು ಇರಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ;

Shocking News: ಪೊಲೀಸರು ತಂದ ಕೈದಿಯ ಶವ ಪೋಸ್ಟ್​ ಮಾರ್ಟಂ ವೇಳೆ ಎದ್ದು ಕುಳಿತಿತ್ತು!

Published On - 2:18 pm, Sat, 5 February 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ