AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಯಮುನಾ ನದಿಯಿಂದ ಡಾಲ್ಫಿನ್ ಹಿಡಿದು ತಿಂದ ಮೀನುಗಾರರ ವಿರುದ್ಧ ಕೇಸು ದಾಖಲು

ಸಾಮಾಜಿಕ ಮಾಧ್ಯಮದಲ್ಲಿ ಮೀನುಗಾರರು ಡಾಲ್ಫಿನ್​​ನ್ನು ಹಿಡಿದು ತರುತ್ತಿದ್ದ ವಿಡಿಯೋ ವೈರಲ್​​​ ಆಗುತ್ತಿದ್ದಂತೆ ಪೋಲಿಸರು ಮೀನುಗಾರನನ್ನು ಬಂಧಿಸಿದ್ದಾರೆ.

Viral News: ಯಮುನಾ ನದಿಯಿಂದ ಡಾಲ್ಫಿನ್ ಹಿಡಿದು ತಿಂದ ಮೀನುಗಾರರ ವಿರುದ್ಧ ಕೇಸು ದಾಖಲು
ಡಾಲ್ಫಿನ್ ಹಿಡಿದು ತಿಂದ ಮೀನುಗಾರರ ವಿರುದ್ಧ ಕೇಸು ದಾಖಲು
ಅಕ್ಷತಾ ವರ್ಕಾಡಿ
|

Updated on: Jul 25, 2023 | 1:20 PM

Share

ಉತ್ತರಪ್ರದೇಶ: ಯಮುನಾ ನದಿಯಲ್ಲಿ ಮೀನುಗಾರರ ಬಲೆಯಲ್ಲಿ ಆಕಸ್ಮಿಕವಾಗಿ ಸಿಕ್ಕಿದ್ದ ಡಾಲ್ಫಿನ್ (Dolphin) ಹಿಡಿದು ತಂದು ಅಡುಗೆ ಮಾಡಿ ತಿಂದ ನಾಲ್ವರು ಮೀನುಗಾರರ ವಿರುದ್ಧ ಕೇಸು ದಾಖಲಿಸಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಮೀನುಗಾರರು ಡಾಲ್ಫಿನ್​​ನ್ನು ಹಿಡಿದು ತರುತ್ತಿದ್ದ ವಿಡಿಯೋ ವೈರಲ್​​​ ಆಗುತ್ತಿದ್ದಂತೆ ಪೋಲಿಸರು ಮೀನುಗಾರನನ್ನು ಬಂಧಿಸಿದ್ದಾರೆ. ಸೋಮವಾರ ಚೈಲ್ ಅರಣ್ಯ ರಕ್ಷಕ ರವೀಂದ್ರ ಕುಮಾರ್ ನೀಡಿದ ದೂರಿನ ಪ್ರಕಾರ, ನಸೀರ್‌ಪುರ ಗ್ರಾಮದ ಮೀನುಗಾರರು ಜುಲೈ 22 ರಂದು ಬೆಳಿಗ್ಗೆ ಯಮುನಾದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಬಲೆಯಲ್ಲಿ ಡಾಲ್ಫಿನ್ ಸಿಕ್ಕಿಬಿದ್ದಿದೆ. ನಂತರ ತಮ್ಮ ಭುಜದ ಮೇಲೆ ಇಟ್ಟುಕೊಂಡು ಮನೆಗೆ ಸಾಗಿಸಿ, ಬೇಯಿಸಿ ತಿಂದಿದ್ದಾರೆ ಎಂಬ ದೂರಿನ ಆಧಾರದ ಮೇಲೆ ಬಂಧಿಸಲಾಗಿದೆ ಎಂದು ಪಿಪ್ರಿ ಠಾಣಾಧಿಕಾರಿ ಶ್ರವಣ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಇದನ್ನೂ ಓದಿ: ನಡುರಸ್ತೆಯಲ್ಲಿ ಸರಸರನೇ ಸಾಲಾಗಿ ಮರಿಗಳಿಗೆ ಜನ್ಮ ನೀಡಿದ ಹಾವು, ಕುತೂಹಲಗೊಂಡ ಜನ!

ಡಾಲ್ಫಿನ್ ಅನ್ನು ಹೆಗಲ ಮೇಲೆ ಇಟ್ಟು ಮನೆಗೆ ಕೊಂಡೊಯ್ಯುತ್ತಿರುವುದನ್ನು ಸ್ಥಳೀಯರು ಚಿತ್ರೀಕರಿಸಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ದೂರಿನ ಮೇರೆಗೆ ರಂಜೀತ್ ಕುಮಾರ್, ಸಂಜಯ್, ದೀವನ್ ಮತ್ತು ಬಾಬಾ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗಾಗಲೇ ರಂಜಿತ್​​​ ಕುಮಾರ್ ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಉಳಿದ ಆರೋಪಿಗಳು ನಾಪತ್ತೆಯಾಗಿದ್ದು, ಆದಷ್ಟು ಬೇಗ ಅವರನ್ನು ಬಂಧಿಸಲಾಗುವುದು ಎಂದು ಎಸ್‌ಎಚ್‌ಒ ತಿಳಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ