AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದಲ್ಲಾ,ಎರಡಲ್ಲ ಬರೋಬ್ಬರಿ 27 ಮಹಿಳೆಯರ ವಿರುದ್ಧ ಕೇಸು ದಾಖಲಿಸಿದ ವ್ಯಕ್ತಿ; 623 ಕೋಟಿ ರೂ. ಪರಿಹಾರಕ್ಕೆ ಬೇಡಿಕೆ

ವ್ಯಕ್ತಿಯೊಬ್ಬ ಸುಮಾರು 27 ಮಹಿಳೆಯರ ವಿರುದ್ಧ ಕೇಸು ದಾಖಲಿಸಿದ್ದಾನೆ. ಜೊತೆಗೆ ಅಷ್ಟೂ ಮಹಿಳೆಯ ವಿರುದ್ಧ 75 ಮಿಲಿಯನ್ ಡಾಲರ್ ಅಂದರೆ ಸುಮಾರು 623 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾನೆ.

ಒಂದಲ್ಲಾ,ಎರಡಲ್ಲ ಬರೋಬ್ಬರಿ 27 ಮಹಿಳೆಯರ ವಿರುದ್ಧ ಕೇಸು ದಾಖಲಿಸಿದ ವ್ಯಕ್ತಿ; 623 ಕೋಟಿ ರೂ. ಪರಿಹಾರಕ್ಕೆ ಬೇಡಿಕೆ
Image Credit source: Pinterest
ಅಕ್ಷತಾ ವರ್ಕಾಡಿ
|

Updated on: Jan 21, 2024 | 6:46 PM

Share

ನಿಕೋ ಡಿ ಅಂಬ್ರೋಸಿಯೊ ಎಂಬ ಅಮೇರಿಕನ್ ನಿವಾಸಿ  ಸುಮಾರು 27 ಮಹಿಳೆಯರ ವಿರುದ್ಧ ಕೇಸು ದಾಖಲಿಸಿದ್ದಾನೆ. ಜೊತೆಗೆ ಅಷ್ಟೂ ಮಹಿಳೆಯ ವಿರುದ್ಧ 75 ಮಿಲಿಯನ್ ಡಾಲರ್ ಅಂದರೆ ಸುಮಾರು 623 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾನೆ. ಅಷ್ಟಕ್ಕೂ ಆತನಿಗೆ ಈ ಮಹಿಳೆಯರ ಮೇಲೆ ಅಷ್ಟೊಂದು ಕೋಪ ಹುಟ್ಟಿಕೊಳ್ಳಲು ಕಾರಣ ಏನು ಗೊತ್ತಾ?

ಆಡಿಟಿ ಸೆಂಟ್ರಲ್ ವೆಬ್‌ಸೈಟ್‌ನ ವರದಿಯ ಪ್ರಕಾರ, 32 ವರ್ಷದ ನಿಕೊ ಡಿ’ಆಂಬ್ರೋಸಿಯೊ ಎಂಬ ವ್ಯಕ್ತಿ ತನ್ನೊಂದಿಗೆ ಡೇಟಿಂಗ್ ಮಾಡುವುದಾಗಿ ಹೇಳಿಕೊಂಡ ಹಲವಾರು ಮಹಿಳೆಯರು ಈತನ ವ್ಯಕ್ತಿತ್ವದ ಬಗ್ಗೆ ಅಸಭ್ಯವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್​​​ ಮಾಡಿದ್ದಾರೆ ಎಂಬ ಕಾರಣಕ್ಕೆ ಕೋಪಗೊಂಡು ಈ ಮಹಿಳೆಯರ ಮೇಲೆ ಕೇಸು ದಾಖಲಿಸಿಕೊಂಡಿದ್ದಾನೆ. ಈ ಫೇಸ್ಬುಕ್ ಗುಂಪು ಅಮೇರಿಕಾದಲ್ಲಿ ಸಾಕಷ್ಟು ಜನಪ್ರಿಯವಾಗಿದೆ. ಇದು ನ್ಯೂಯಾರ್ಕ್‌ನಲ್ಲಿ ಪ್ರಾರಂಭವಾದರೂ, ನಂತರ ಇದು ಇತರ ನಗರಗಳಿಗೂ ಹರಡಿತು. ಇದನ್ನು ಮುಖ್ಯವಾಗಿ ಮಹಿಳೆಯರು ತಮ್ಮ ಅನುಭವಗಳನ್ನು ಪುರುಷರೊಂದಿಗೆ ಹಂಚಿಕೊಳ್ಳಲು ಬಳಸುತ್ತಾರೆ.

ಇದನ್ನೂ ಓದಿ: ಸಿಂಗಲ್​​​ ಬಾಯ್ಸ್​​​ ​​​​ ನಿಮ್ಮ ಒಂಟಿತನವನ್ನು ಹೋಗಲಾಡಿಸಲು ಬಂದಿದ್ದಾಳೆ AI ಗೆಳತಿ

ಫೇಸ್‌ಬುಕ್ ಡೇಟಿಂಗ್ ಗ್ರೂಪ್‌ನಲ್ಲಿ ತನ್ನ ಬಗ್ಗೆ 27 ಮಹಿಳೆಯರು ಅಪಮಾನ ಮಾಡಿದಕ್ಕೆ 27 ಮಹಿಳೆಯರ ವಿರುದ್ಧ 75 ಮಿಲಿಯನ್ ಡಾಲರ್ ಅಂದರೆ ಸುಮಾರು 623 ಕೋಟಿಗೆ ಮೊಕದ್ದಮೆ ಹೂಡಿದ್ದಾನೆ. ಫೇಸ್‌ಬುಕ್ ಗುಂಪಿನಲ್ಲಿ ತನ್ನ ವೈಯಕ್ತಿಕ ಫೋಟೋಗಳನ್ನು ಹಂಚಿಕೊಳ್ಳುವುದರಿಂದ ಮತ್ತು ಹಲವಾರು ನನ್ನ ಬಗೆಗಿನ ಕಾಮೆಂಟ್‌ಗಳಿಂದಾಗಿ ತಾನು ‘ವೈಯಕ್ತಿಕ ಅವಮಾನ, ಮಾನಸಿಕ ವೇದನೆ, ಭಾವನಾತ್ಮಕ ತೊಂದರೆ, ಒತ್ತಡ, ಆತಂಕವನ್ನು ಅನುಭವಿಸಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾನೆ. ಹೀಗಾಗಿ 75 ಮಿಲಿಯನ್ ಡಾಲರ್ ಪರಿಹಾರಕ್ಕೆ ಬೇಡಿಕೆ ಇಟ್ಟಿದ್ದಾನೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು