AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Funny Video: ಇರಲಾರದೆ ಇರುವೆ ಬಿಟ್ಟುಕೊಂಡು ಪಜೀತಿಗೆ ಸಿಲುಕಿದ ಚಿಂಪಾಂಜಿ; ಇಲ್ಲಿದೆ ನೋಡಿ ಹಾಸ್ಯಮಯ ವಿಡಿಯೋ

ಸೋಶಿಯಲ್ ಮೀಡಿಯಾದಲ್ಲಿ ಪ್ರಾಣಿಗಳಿಗೆ ಸಂಬಂಧಿಸಿದ ವಿಡಿಯೋಗಳು ಪ್ರತಿನಿತ್ಯ ಕಾಣಸಿಗುತ್ತವೆ. ಕೆಲವೊಂದು ವಿಡಿಯೋಗಳು ಹಾಸ್ಯಮಯವಾಗಿದ್ದರೆ, ಇನ್ನೂ ಕೆಲವು ವಿಡಿಯೋಗಳು ನಮ್ಮ ಮನ ಮುಟ್ಟುವಂತಿರುತ್ತವೆ. ಈಗ ಅದೇ ರೀತಿಯ ತಮಾಷೆಯ ವಿಡಿಯೋವೊಂದು ಹರಿದಾಡುತ್ತಿದ್ದು, ಚಿಂಪಾಂಜಿಯೊಂದು ಇರಲಾರದೆ ಇರುವೆ ಬಿಟ್ಟುಕೊಂಡು ಪೇಚಿಗೆ ಸಿಲುಕಿಕೊಂಡಿದೆ.

Funny Video: ಇರಲಾರದೆ ಇರುವೆ ಬಿಟ್ಟುಕೊಂಡು ಪಜೀತಿಗೆ ಸಿಲುಕಿದ ಚಿಂಪಾಂಜಿ; ಇಲ್ಲಿದೆ ನೋಡಿ ಹಾಸ್ಯಮಯ ವಿಡಿಯೋ
A chimpanzee caught in starvationImage Credit source: Project Chimps
ಮಾಲಾಶ್ರೀ ಅಂಚನ್​
| Edited By: |

Updated on: Jan 24, 2024 | 7:17 PM

Share

ಚಿಂಪಾಂಜಿಗಳು, ಗೊರಿಲ್ಲಾಗಳು ಮತ್ತು ಕೋತಿಗಳ ಹಾವಭಾವ ವರ್ತನೆಗಳು ಮನುಷ್ಯರನ್ನೇ ಹೋಲುತ್ತವೆ. ಮನುಷ್ಯ ಮತ್ತು ಚಿಂಪಾಂಜಿಗಳ ನಡುವೆ ಸಾಮ್ಯತೆ ಇದೆ ಎಂಬುದನ್ನು ಹಲವು ಅಧ್ಯಯನಗಳೂ ದೃಢಪಡಿಸಿವೆ. ಅವುಗಳು ನಮ್ಮಂತೆಯೆ ಭಾವನೆಗಳನ್ನು ವ್ಯಕ್ತಪಡಿಸುವುದರ ಜೊತೆಗೆ, ಅವುಗಳು ಮಾನವರಂತೆಯೇ ತರ್ಲೆ ತಮಾಷೆಗಳನ್ನು ಮಾಡುತ್ತಿರುತ್ತವೆ. ಹೀಗೆ ಚಿಂಪಾಂಜಿಗಳು ಇತರೆ ಪ್ರಾಣಿಗಳನ್ನು ಗೋಳು ಹೊಯ್ದುಕೊಳ್ಳುವ, ಇತರ ಪ್ರಾಣಿಗಳಿಗೆ ತರ್ಲೆ, ತಂಟೆ ಮಾಡುವ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಈಗ ಅದೇ ರೀತಿಯ ಹಾಸ್ಯಮಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಚಿಂಪಾಂಜಿಯೊಂದು ಇರಲಾರದೆ ಇರುವೆ ಬಿಟ್ಟುಕೊಂಡು ಪಜೀತಿಗೆ ಸಿಲುಕಿಹಾಕಿಕೊಂಡಿದೆ. ಹೌದು, ನಾವು ಕೆಲವೊಮ್ಮೆ ಬೋರ್ ಆಗ್ತಿದೆ ಅಂತ ನಮ್ಮ ಸ್ನೇಹಿತರಿಗೆ ಕೀಟಲೆ ಮಾಡುವಂತೆ, ಈ ಚಿಂಪಾಂಜಿಯು ಅದರ ಪಕ್ಕದಲ್ಲೇ ಕುಳಿತಿದ್ದ ಮುಳ್ಳುಹಂದಿಗೆ ಕೀಟಲೆ ಮಾಡಲು ಹೋಗಿ, ಪೇಚಿಗೆ ಸಿಲುಕಿದೆ. ಈ ಹಾಸ್ಯಮಯ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ನೆಟ್ಟಿಗರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.

ನಾರಾಯಣ ಲಾಲ್ ಧಮಾನಿಯ (@narayan_lal_rj27) ಎಂಬವರು ಈ ಹಾಸ್ಯಯಮ ವಿಡಿಯೋವನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ಚಿಂಪಾಂಜಿಯೊಂದು ಮುಳ್ಳು ಹಂದಿಗೆ ತರ್ಲೆ ಮಾಡಲು ಹೋಗಿ ಪಜೀತಿಗೆ ಸಿಳುಕಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಭಯ ಪಡ್ಕೊಂಡ್ರಾ, ನನ್ ಜಸ್ಟ್ ಪ್ರಾಂಕ್ ಮಾಡಿದ್ದು ಅಷ್ಟೆ, ಆನೆ ಚೇಷ್ಟೆ ನೋಡಿ

ವೈರಲ್ ವಿಡಿಯೋದಲ್ಲಿ ಯಾವುದೋ ಒಂದು ಮೃಗಾಲಯದಲ್ಲಿ ಚಿಂಪಾಂಜಿಯೊಂದು ಸುಮ್ಮನೆ ಕುಳಿತಿರುತ್ತೆ. ಹೀಗೆ ಸುಮ್ಮನೆ ಎಷ್ಟು ಹೊತ್ತು ಕೂತಿರಲು ಸಾಧ್ಯ, ಸುಮ್ಮನೆ ಕೂತ್ಕೊಂಡ್ರೆ ಸಿಕ್ಕಾಪಟ್ಟೆ ಬೋರ್ ಆಗುತ್ತೇ, ಅದಕ್ಕಾಗಿ ಏನಾದ್ರೂ ಸ್ವಲ್ಪ ಮಜಾ ತೆಗೆದುಕೊಳ್ಳೊಣ ಎನ್ನುತ್ತಾ, ಅಲ್ಲೇ ಪಕ್ಕದಲ್ಲಿ ಕುಳಿತಿದ್ದಂತಹ ಮುಳ್ಳುಹಂದಿಗೆ ಕೀಟಲೆ ಮಾಡಲು ಹೋಗುತ್ತೆ. ಇದರಿಂದ ಕೋಪಗೊಂಡ ಮುಳ್ಳು ಹಂದಿ, ನನ್ನನ್ನೇ ಮುಟ್ತೀಯಾ, ಇರು ನಿಂಗಿದೆ ಮಾರಿ ಹಬ್ಬ ಎನ್ನುತ್ತಾ, ಚಿಂಪಾಂಜಿಯನ್ನು ಅಟ್ಟಾಡಿಸಿಕೊಂಡು ಹೋಗುತ್ತದೆ. ಅಯ್ಯೋ ದೇವ್ರೆ, ಈ ಕೋಪಿಷ್ಟ ಮುಳ್ಳುಹಂದಿಯಿಂದ ಹೇಗಪ್ಪಾ ತಪ್ಪಿಸಿಕೊಳ್ಳೊದು ಅಂತ ಯೋಚ್ನೆ ಮಾಡಿ ಓಡುತ್ತಾ ಈ ತರ್ಲೆ ಚಿಂಪಾಜಿ ಮರದ ಕೊಂಬೆಯ ಮೇಲೆ ಜಿಗಿಯುವಂತಹ ಹಾಸ್ಯಮಯ ದೃಶ್ಯವನ್ನು ಕಾಣಬಹುದು.

ಜನವರಿ 11 ರಂದು ಹಂಚಿಕೊಳ್ಳಲಾದ ಈ ವಿಡಿಯೋ 3.9 ಮಿಲಿಯನ್ ವೀಕ್ಷಣೆಗಳನ್ನು ಹಾಗೂ ಒಂದುವರೆ ಲಕ್ಷಕ್ಕೂ ಅಧಿಕ ಲೈಕ್ಸ್ಗಳನ್ನು ಪಡೆದುಕೊಂಡಿದೆ. ಹಾಗೂ ಹಲವಾರು ಕಮೆಂಟ್ಸ್ಗಳೂ ಹರಿದು ಬಂದಿವೆ. ಒಬ್ಬ ಬಳಕೆದಾರರು ʼಮನೆಯಲ್ಲಿ ನಾನು ಮತ್ತು ನನ್ನ ಸಹೋದರ ಇದೇ ರೀತಿ ಜಗಳವಾಡೋದುʼ ಅಂತ ತಮಾಷೆಯ ಕಮೆಂಟ್ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಮನುಷ್ಯರಿಗಿಂತ ಈ ಚಿಂಪಾಂಜಿಯೇ ಸಿಕ್ಕಾಪಟ್ಟೆ ತರ್ಲೆ ಮಾಡುತ್ತೆ ಅಂತ ಹೇಳಿದ್ದಾರೆ. ಇನ್ನೂ ಅನೇಕರು ಅಯ್ಯೋ ದೇವ್ರೆ ಈ ಚಿಂಪಾಂಜಿಯ ತರ್ಲೆ ಕೆಲಸವನ್ನು ಕಂಡು ನಕ್ಕು ನಕ್ಕು ಸುಸ್ತಾಯ್ತು ಅಂತ ಹೇಳಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ