AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈತ ಡಿಜಿಟಲ್​​ ಕಳ್ಳ, ದೇವರ ಹುಂಡಿ ಮೇಲೆ ತನ್ನ QR Code ಅಂಟಿಸಿ ಲಕ್ಷ ಲಕ್ಷ ದೋಚಿದ್ದ ಖದೀಮ

ದೇವಸ್ಥಾನದ ಹುಂಡಿಯ ಕ್ಯೂಆರ್ ಕೋಡ್ ಮೇಲೆ ತನ್ನ ವೈಯಕ್ತಿಕ ಬ್ಯಾಂಕ್ ಖಾತೆಯ ಕ್ಯೂಆರ್ ಕೋಡ್‌ ಅಂಟಿಸಿ ಹಣ ದೋಚುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಖದೀಮ ಪ್ರತಿಷ್ಠಿತ ವಿಶ್ವವಿದ್ಯಾಲಯದಿಂದ ಕಾನೂನಿನಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾನೆ ಎಂದು ವರದಿಗಳು ಸೂಚಿಸಿವೆ.

ಈತ ಡಿಜಿಟಲ್​​ ಕಳ್ಳ, ದೇವರ ಹುಂಡಿ ಮೇಲೆ ತನ್ನ QR Code ಅಂಟಿಸಿ ಲಕ್ಷ ಲಕ್ಷ ದೋಚಿದ್ದ ಖದೀಮ
ಅಕ್ಷತಾ ವರ್ಕಾಡಿ
|

Updated on: Aug 17, 2024 | 5:03 PM

Share

ಚೀನಾ: ಹಲವಾರು ಬೌದ್ಧ ದೇವಾಲಯಗಳ ಹೆಸರಿನಲ್ಲಿ ದೇಣಿಗೆ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಚೀನಾದ ವ್ಯಕ್ತಿಯನ್ನು ಬಂಧಿಸಲಾಗಿದೆ. ವರದಿಗಳ ಪ್ರಕಾರ, ಈತ ದೇವಸ್ಥಾನದ ಹುಂಡಿಯ ಕ್ಯೂಆರ್ ಕೋಡ್ ಅನ್ನು ಮೇಲೆ ತನ್ನ ವೈಯಕ್ತಿಕ ಬ್ಯಾಂಕ್ ಖಾತೆಯ ಕ್ಯೂಆರ್ ಕೋಡ್‌ ಅಂಟಿಸಿದ್ದ ಎಂದು ತಿಳಿದುಬಂದಿದೆ. ಇದಲ್ಲದೇ ಮನೆಮನೆ ಭೇಟಿ ನೀಡಿ ದೇವಾಲಯಗಳ ದೇಣಿಗೆಯ ಹೆಸರಿನಲ್ಲಿ ತನ್ನ ಖಾತೆಗೆ ಹಣ ವರ್ಗಾಯಿಸುತ್ತಿದ್ದ. ಇದೀಗ ಈತನ ಕಳ್ಳಾಟ ಬೆಳಕಿಗೆ ಬಂದಿದೆ.

ಈ ಖದೀಮ ಪ್ರತಿಷ್ಠಿತ ವಿಶ್ವವಿದ್ಯಾಲಯದಿಂದ ಕಾನೂನಿನಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾನೆ ಎಂದು ವರದಿಗಳು ಸೂಚಿಸಿವೆ. ಈ ವರ್ಷ ಶಾಂಕ್ಸಿ, ಸಿಚುವಾನ್ ಮತ್ತು ಚಾಂಗ್‌ಕಿಂಗ್ ಪ್ರಾಂತ್ಯಗಳಲ್ಲಿನ ದೇವಾಲಯಗಳಿಂದ 30,000 ಯುವಾನ್ (ಅಂದಾಜು ₹ 3.5 ಲಕ್ಷ) ಕದ್ದಿರುವುದಾಗಿ ತನಿಖೆಯ ವೇಳೆ ಒಪ್ಪಿಕೊಂಡಿದ್ದಾನೆ. ತನಿಖಾಧಿಕಾರಿಗಳ ಪ್ರಕಾರ, ಈತ ಕದ್ದ ಎಲ್ಲಾ ಹಣವನ್ನು ಹಿಂದಿರುಗಿಸಿರುವುದಾಗಿ ತಿಳಿದುಬಂದಿದೆ.

ಕೆಲವು ದಿನಗಳ ನಂತರ ದೇವಸ್ಥಾನದ ಆಡಳಿತ ಮಂಡಳಿಯವರು ಇದನ್ನು ಅರಿತು ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಶಾಂಕ್ಸಿ ಪೊಲೀಸರು ತನಿಖೆ ನಡೆಸಿ ದೇವಸ್ಥಾನದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಇದಾದ ಬಳಿಕ ಈ ವ್ಯಕ್ತಿ ಕೆಲ ದಿನಗಳ ಹಿಂದೆ ಬಂದಿದ್ದು, ವಿಗ್ರಹದ ಮುಂದೆ ನಮಸ್ಕರಿಸಿ ಬಳಿಕ ಕಾಣಿಕೆ ಡಬ್ಬದ ಮೇಲೆ ಕ್ಯೂಆರ್ ಹಾಕಿರುವುದು ಬೆಳಕಿಗೆ ಬಂದಿದೆ. ದೇವಸ್ಥಾನದಲ್ಲಿ ದೇಣಿಗೆ ನೀಡಲು ಭಕ್ತ ಮೊಬೈಲ್‌ನಿಂದ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿದಾಗ, ದೇಣಿಗೆ ಮೊತ್ತವನ್ನು ನೇರವಾಗಿ ಆ ವ್ಯಕ್ತಿಯ ಖಾತೆಗೆ ವರ್ಗಾವಣೆಯಾಗಿರುವುದು ಗೊತ್ತಾಗಿದೆ.

ಇದನ್ನೂ ಓದಿ: ‌Richard Lugner: 2 ತಿಂಗಳ ಹಿಂದಷ್ಟೇ 6ನೇ ಮದುವೆಯಾಗಿದ್ದ 91 ವರ್ಷದ ಬಿಲಿಯನೇರ್ ನಿಧನ

ಬಳಿಕ ಪೊಲೀಸರು ತನಿಖೆ ನಡೆಸಿ ವ್ಯಕ್ತಿಯನ್ನು ಬಂಧಿಸಿದ್ದಾರೆ. ಅಲ್ಲಿ ಹಲವು ದೇವಸ್ಥಾನಗಳಿಗೆ ಈ ರೀತಿ ವಂಚನೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಈ ಪ್ರಕರಣದ ತನಿಖೆ ನಡೆಸುತ್ತಿರುವವರು ಆರೋಪಿಯು ಇಲ್ಲಿಯವರೆಗೆ ಎಲ್ಲಾ ಕದ್ದ ಹಣವನ್ನು ಹಿಂದಿರುಗಿಸಿದ್ದಾನೆ. ಈ ಪ್ರಕರಣವು ಪ್ರಪಂಚದಾದ್ಯಂತ ಇದೀಗ ಭಾರೀ ಚರ್ಚೆಯಲ್ಲಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು