AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈತ ಡಿಜಿಟಲ್​​ ಕಳ್ಳ, ದೇವರ ಹುಂಡಿ ಮೇಲೆ ತನ್ನ QR Code ಅಂಟಿಸಿ ಲಕ್ಷ ಲಕ್ಷ ದೋಚಿದ್ದ ಖದೀಮ

ದೇವಸ್ಥಾನದ ಹುಂಡಿಯ ಕ್ಯೂಆರ್ ಕೋಡ್ ಮೇಲೆ ತನ್ನ ವೈಯಕ್ತಿಕ ಬ್ಯಾಂಕ್ ಖಾತೆಯ ಕ್ಯೂಆರ್ ಕೋಡ್‌ ಅಂಟಿಸಿ ಹಣ ದೋಚುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಖದೀಮ ಪ್ರತಿಷ್ಠಿತ ವಿಶ್ವವಿದ್ಯಾಲಯದಿಂದ ಕಾನೂನಿನಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾನೆ ಎಂದು ವರದಿಗಳು ಸೂಚಿಸಿವೆ.

ಈತ ಡಿಜಿಟಲ್​​ ಕಳ್ಳ, ದೇವರ ಹುಂಡಿ ಮೇಲೆ ತನ್ನ QR Code ಅಂಟಿಸಿ ಲಕ್ಷ ಲಕ್ಷ ದೋಚಿದ್ದ ಖದೀಮ
ಅಕ್ಷತಾ ವರ್ಕಾಡಿ
|

Updated on: Aug 17, 2024 | 5:03 PM

Share

ಚೀನಾ: ಹಲವಾರು ಬೌದ್ಧ ದೇವಾಲಯಗಳ ಹೆಸರಿನಲ್ಲಿ ದೇಣಿಗೆ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಚೀನಾದ ವ್ಯಕ್ತಿಯನ್ನು ಬಂಧಿಸಲಾಗಿದೆ. ವರದಿಗಳ ಪ್ರಕಾರ, ಈತ ದೇವಸ್ಥಾನದ ಹುಂಡಿಯ ಕ್ಯೂಆರ್ ಕೋಡ್ ಅನ್ನು ಮೇಲೆ ತನ್ನ ವೈಯಕ್ತಿಕ ಬ್ಯಾಂಕ್ ಖಾತೆಯ ಕ್ಯೂಆರ್ ಕೋಡ್‌ ಅಂಟಿಸಿದ್ದ ಎಂದು ತಿಳಿದುಬಂದಿದೆ. ಇದಲ್ಲದೇ ಮನೆಮನೆ ಭೇಟಿ ನೀಡಿ ದೇವಾಲಯಗಳ ದೇಣಿಗೆಯ ಹೆಸರಿನಲ್ಲಿ ತನ್ನ ಖಾತೆಗೆ ಹಣ ವರ್ಗಾಯಿಸುತ್ತಿದ್ದ. ಇದೀಗ ಈತನ ಕಳ್ಳಾಟ ಬೆಳಕಿಗೆ ಬಂದಿದೆ.

ಈ ಖದೀಮ ಪ್ರತಿಷ್ಠಿತ ವಿಶ್ವವಿದ್ಯಾಲಯದಿಂದ ಕಾನೂನಿನಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾನೆ ಎಂದು ವರದಿಗಳು ಸೂಚಿಸಿವೆ. ಈ ವರ್ಷ ಶಾಂಕ್ಸಿ, ಸಿಚುವಾನ್ ಮತ್ತು ಚಾಂಗ್‌ಕಿಂಗ್ ಪ್ರಾಂತ್ಯಗಳಲ್ಲಿನ ದೇವಾಲಯಗಳಿಂದ 30,000 ಯುವಾನ್ (ಅಂದಾಜು ₹ 3.5 ಲಕ್ಷ) ಕದ್ದಿರುವುದಾಗಿ ತನಿಖೆಯ ವೇಳೆ ಒಪ್ಪಿಕೊಂಡಿದ್ದಾನೆ. ತನಿಖಾಧಿಕಾರಿಗಳ ಪ್ರಕಾರ, ಈತ ಕದ್ದ ಎಲ್ಲಾ ಹಣವನ್ನು ಹಿಂದಿರುಗಿಸಿರುವುದಾಗಿ ತಿಳಿದುಬಂದಿದೆ.

ಕೆಲವು ದಿನಗಳ ನಂತರ ದೇವಸ್ಥಾನದ ಆಡಳಿತ ಮಂಡಳಿಯವರು ಇದನ್ನು ಅರಿತು ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಶಾಂಕ್ಸಿ ಪೊಲೀಸರು ತನಿಖೆ ನಡೆಸಿ ದೇವಸ್ಥಾನದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಇದಾದ ಬಳಿಕ ಈ ವ್ಯಕ್ತಿ ಕೆಲ ದಿನಗಳ ಹಿಂದೆ ಬಂದಿದ್ದು, ವಿಗ್ರಹದ ಮುಂದೆ ನಮಸ್ಕರಿಸಿ ಬಳಿಕ ಕಾಣಿಕೆ ಡಬ್ಬದ ಮೇಲೆ ಕ್ಯೂಆರ್ ಹಾಕಿರುವುದು ಬೆಳಕಿಗೆ ಬಂದಿದೆ. ದೇವಸ್ಥಾನದಲ್ಲಿ ದೇಣಿಗೆ ನೀಡಲು ಭಕ್ತ ಮೊಬೈಲ್‌ನಿಂದ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿದಾಗ, ದೇಣಿಗೆ ಮೊತ್ತವನ್ನು ನೇರವಾಗಿ ಆ ವ್ಯಕ್ತಿಯ ಖಾತೆಗೆ ವರ್ಗಾವಣೆಯಾಗಿರುವುದು ಗೊತ್ತಾಗಿದೆ.

ಇದನ್ನೂ ಓದಿ: ‌Richard Lugner: 2 ತಿಂಗಳ ಹಿಂದಷ್ಟೇ 6ನೇ ಮದುವೆಯಾಗಿದ್ದ 91 ವರ್ಷದ ಬಿಲಿಯನೇರ್ ನಿಧನ

ಬಳಿಕ ಪೊಲೀಸರು ತನಿಖೆ ನಡೆಸಿ ವ್ಯಕ್ತಿಯನ್ನು ಬಂಧಿಸಿದ್ದಾರೆ. ಅಲ್ಲಿ ಹಲವು ದೇವಸ್ಥಾನಗಳಿಗೆ ಈ ರೀತಿ ವಂಚನೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಈ ಪ್ರಕರಣದ ತನಿಖೆ ನಡೆಸುತ್ತಿರುವವರು ಆರೋಪಿಯು ಇಲ್ಲಿಯವರೆಗೆ ಎಲ್ಲಾ ಕದ್ದ ಹಣವನ್ನು ಹಿಂದಿರುಗಿಸಿದ್ದಾನೆ. ಈ ಪ್ರಕರಣವು ಪ್ರಪಂಚದಾದ್ಯಂತ ಇದೀಗ ಭಾರೀ ಚರ್ಚೆಯಲ್ಲಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ