AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈತ ಡಿಜಿಟಲ್​​ ಕಳ್ಳ, ದೇವರ ಹುಂಡಿ ಮೇಲೆ ತನ್ನ QR Code ಅಂಟಿಸಿ ಲಕ್ಷ ಲಕ್ಷ ದೋಚಿದ್ದ ಖದೀಮ

ದೇವಸ್ಥಾನದ ಹುಂಡಿಯ ಕ್ಯೂಆರ್ ಕೋಡ್ ಮೇಲೆ ತನ್ನ ವೈಯಕ್ತಿಕ ಬ್ಯಾಂಕ್ ಖಾತೆಯ ಕ್ಯೂಆರ್ ಕೋಡ್‌ ಅಂಟಿಸಿ ಹಣ ದೋಚುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಖದೀಮ ಪ್ರತಿಷ್ಠಿತ ವಿಶ್ವವಿದ್ಯಾಲಯದಿಂದ ಕಾನೂನಿನಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾನೆ ಎಂದು ವರದಿಗಳು ಸೂಚಿಸಿವೆ.

ಈತ ಡಿಜಿಟಲ್​​ ಕಳ್ಳ, ದೇವರ ಹುಂಡಿ ಮೇಲೆ ತನ್ನ QR Code ಅಂಟಿಸಿ ಲಕ್ಷ ಲಕ್ಷ ದೋಚಿದ್ದ ಖದೀಮ
ಅಕ್ಷತಾ ವರ್ಕಾಡಿ
|

Updated on: Aug 17, 2024 | 5:03 PM

Share

ಚೀನಾ: ಹಲವಾರು ಬೌದ್ಧ ದೇವಾಲಯಗಳ ಹೆಸರಿನಲ್ಲಿ ದೇಣಿಗೆ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಚೀನಾದ ವ್ಯಕ್ತಿಯನ್ನು ಬಂಧಿಸಲಾಗಿದೆ. ವರದಿಗಳ ಪ್ರಕಾರ, ಈತ ದೇವಸ್ಥಾನದ ಹುಂಡಿಯ ಕ್ಯೂಆರ್ ಕೋಡ್ ಅನ್ನು ಮೇಲೆ ತನ್ನ ವೈಯಕ್ತಿಕ ಬ್ಯಾಂಕ್ ಖಾತೆಯ ಕ್ಯೂಆರ್ ಕೋಡ್‌ ಅಂಟಿಸಿದ್ದ ಎಂದು ತಿಳಿದುಬಂದಿದೆ. ಇದಲ್ಲದೇ ಮನೆಮನೆ ಭೇಟಿ ನೀಡಿ ದೇವಾಲಯಗಳ ದೇಣಿಗೆಯ ಹೆಸರಿನಲ್ಲಿ ತನ್ನ ಖಾತೆಗೆ ಹಣ ವರ್ಗಾಯಿಸುತ್ತಿದ್ದ. ಇದೀಗ ಈತನ ಕಳ್ಳಾಟ ಬೆಳಕಿಗೆ ಬಂದಿದೆ.

ಈ ಖದೀಮ ಪ್ರತಿಷ್ಠಿತ ವಿಶ್ವವಿದ್ಯಾಲಯದಿಂದ ಕಾನೂನಿನಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾನೆ ಎಂದು ವರದಿಗಳು ಸೂಚಿಸಿವೆ. ಈ ವರ್ಷ ಶಾಂಕ್ಸಿ, ಸಿಚುವಾನ್ ಮತ್ತು ಚಾಂಗ್‌ಕಿಂಗ್ ಪ್ರಾಂತ್ಯಗಳಲ್ಲಿನ ದೇವಾಲಯಗಳಿಂದ 30,000 ಯುವಾನ್ (ಅಂದಾಜು ₹ 3.5 ಲಕ್ಷ) ಕದ್ದಿರುವುದಾಗಿ ತನಿಖೆಯ ವೇಳೆ ಒಪ್ಪಿಕೊಂಡಿದ್ದಾನೆ. ತನಿಖಾಧಿಕಾರಿಗಳ ಪ್ರಕಾರ, ಈತ ಕದ್ದ ಎಲ್ಲಾ ಹಣವನ್ನು ಹಿಂದಿರುಗಿಸಿರುವುದಾಗಿ ತಿಳಿದುಬಂದಿದೆ.

ಕೆಲವು ದಿನಗಳ ನಂತರ ದೇವಸ್ಥಾನದ ಆಡಳಿತ ಮಂಡಳಿಯವರು ಇದನ್ನು ಅರಿತು ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಶಾಂಕ್ಸಿ ಪೊಲೀಸರು ತನಿಖೆ ನಡೆಸಿ ದೇವಸ್ಥಾನದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಇದಾದ ಬಳಿಕ ಈ ವ್ಯಕ್ತಿ ಕೆಲ ದಿನಗಳ ಹಿಂದೆ ಬಂದಿದ್ದು, ವಿಗ್ರಹದ ಮುಂದೆ ನಮಸ್ಕರಿಸಿ ಬಳಿಕ ಕಾಣಿಕೆ ಡಬ್ಬದ ಮೇಲೆ ಕ್ಯೂಆರ್ ಹಾಕಿರುವುದು ಬೆಳಕಿಗೆ ಬಂದಿದೆ. ದೇವಸ್ಥಾನದಲ್ಲಿ ದೇಣಿಗೆ ನೀಡಲು ಭಕ್ತ ಮೊಬೈಲ್‌ನಿಂದ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿದಾಗ, ದೇಣಿಗೆ ಮೊತ್ತವನ್ನು ನೇರವಾಗಿ ಆ ವ್ಯಕ್ತಿಯ ಖಾತೆಗೆ ವರ್ಗಾವಣೆಯಾಗಿರುವುದು ಗೊತ್ತಾಗಿದೆ.

ಇದನ್ನೂ ಓದಿ: ‌Richard Lugner: 2 ತಿಂಗಳ ಹಿಂದಷ್ಟೇ 6ನೇ ಮದುವೆಯಾಗಿದ್ದ 91 ವರ್ಷದ ಬಿಲಿಯನೇರ್ ನಿಧನ

ಬಳಿಕ ಪೊಲೀಸರು ತನಿಖೆ ನಡೆಸಿ ವ್ಯಕ್ತಿಯನ್ನು ಬಂಧಿಸಿದ್ದಾರೆ. ಅಲ್ಲಿ ಹಲವು ದೇವಸ್ಥಾನಗಳಿಗೆ ಈ ರೀತಿ ವಂಚನೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಈ ಪ್ರಕರಣದ ತನಿಖೆ ನಡೆಸುತ್ತಿರುವವರು ಆರೋಪಿಯು ಇಲ್ಲಿಯವರೆಗೆ ಎಲ್ಲಾ ಕದ್ದ ಹಣವನ್ನು ಹಿಂದಿರುಗಿಸಿದ್ದಾನೆ. ಈ ಪ್ರಕರಣವು ಪ್ರಪಂಚದಾದ್ಯಂತ ಇದೀಗ ಭಾರೀ ಚರ್ಚೆಯಲ್ಲಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು