AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈತ ಡಿಜಿಟಲ್​​ ಕಳ್ಳ, ದೇವರ ಹುಂಡಿ ಮೇಲೆ ತನ್ನ QR Code ಅಂಟಿಸಿ ಲಕ್ಷ ಲಕ್ಷ ದೋಚಿದ್ದ ಖದೀಮ

ದೇವಸ್ಥಾನದ ಹುಂಡಿಯ ಕ್ಯೂಆರ್ ಕೋಡ್ ಮೇಲೆ ತನ್ನ ವೈಯಕ್ತಿಕ ಬ್ಯಾಂಕ್ ಖಾತೆಯ ಕ್ಯೂಆರ್ ಕೋಡ್‌ ಅಂಟಿಸಿ ಹಣ ದೋಚುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಖದೀಮ ಪ್ರತಿಷ್ಠಿತ ವಿಶ್ವವಿದ್ಯಾಲಯದಿಂದ ಕಾನೂನಿನಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾನೆ ಎಂದು ವರದಿಗಳು ಸೂಚಿಸಿವೆ.

ಈತ ಡಿಜಿಟಲ್​​ ಕಳ್ಳ, ದೇವರ ಹುಂಡಿ ಮೇಲೆ ತನ್ನ QR Code ಅಂಟಿಸಿ ಲಕ್ಷ ಲಕ್ಷ ದೋಚಿದ್ದ ಖದೀಮ
ಅಕ್ಷತಾ ವರ್ಕಾಡಿ
|

Updated on: Aug 17, 2024 | 5:03 PM

Share

ಚೀನಾ: ಹಲವಾರು ಬೌದ್ಧ ದೇವಾಲಯಗಳ ಹೆಸರಿನಲ್ಲಿ ದೇಣಿಗೆ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಚೀನಾದ ವ್ಯಕ್ತಿಯನ್ನು ಬಂಧಿಸಲಾಗಿದೆ. ವರದಿಗಳ ಪ್ರಕಾರ, ಈತ ದೇವಸ್ಥಾನದ ಹುಂಡಿಯ ಕ್ಯೂಆರ್ ಕೋಡ್ ಅನ್ನು ಮೇಲೆ ತನ್ನ ವೈಯಕ್ತಿಕ ಬ್ಯಾಂಕ್ ಖಾತೆಯ ಕ್ಯೂಆರ್ ಕೋಡ್‌ ಅಂಟಿಸಿದ್ದ ಎಂದು ತಿಳಿದುಬಂದಿದೆ. ಇದಲ್ಲದೇ ಮನೆಮನೆ ಭೇಟಿ ನೀಡಿ ದೇವಾಲಯಗಳ ದೇಣಿಗೆಯ ಹೆಸರಿನಲ್ಲಿ ತನ್ನ ಖಾತೆಗೆ ಹಣ ವರ್ಗಾಯಿಸುತ್ತಿದ್ದ. ಇದೀಗ ಈತನ ಕಳ್ಳಾಟ ಬೆಳಕಿಗೆ ಬಂದಿದೆ.

ಈ ಖದೀಮ ಪ್ರತಿಷ್ಠಿತ ವಿಶ್ವವಿದ್ಯಾಲಯದಿಂದ ಕಾನೂನಿನಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾನೆ ಎಂದು ವರದಿಗಳು ಸೂಚಿಸಿವೆ. ಈ ವರ್ಷ ಶಾಂಕ್ಸಿ, ಸಿಚುವಾನ್ ಮತ್ತು ಚಾಂಗ್‌ಕಿಂಗ್ ಪ್ರಾಂತ್ಯಗಳಲ್ಲಿನ ದೇವಾಲಯಗಳಿಂದ 30,000 ಯುವಾನ್ (ಅಂದಾಜು ₹ 3.5 ಲಕ್ಷ) ಕದ್ದಿರುವುದಾಗಿ ತನಿಖೆಯ ವೇಳೆ ಒಪ್ಪಿಕೊಂಡಿದ್ದಾನೆ. ತನಿಖಾಧಿಕಾರಿಗಳ ಪ್ರಕಾರ, ಈತ ಕದ್ದ ಎಲ್ಲಾ ಹಣವನ್ನು ಹಿಂದಿರುಗಿಸಿರುವುದಾಗಿ ತಿಳಿದುಬಂದಿದೆ.

ಕೆಲವು ದಿನಗಳ ನಂತರ ದೇವಸ್ಥಾನದ ಆಡಳಿತ ಮಂಡಳಿಯವರು ಇದನ್ನು ಅರಿತು ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಶಾಂಕ್ಸಿ ಪೊಲೀಸರು ತನಿಖೆ ನಡೆಸಿ ದೇವಸ್ಥಾನದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಇದಾದ ಬಳಿಕ ಈ ವ್ಯಕ್ತಿ ಕೆಲ ದಿನಗಳ ಹಿಂದೆ ಬಂದಿದ್ದು, ವಿಗ್ರಹದ ಮುಂದೆ ನಮಸ್ಕರಿಸಿ ಬಳಿಕ ಕಾಣಿಕೆ ಡಬ್ಬದ ಮೇಲೆ ಕ್ಯೂಆರ್ ಹಾಕಿರುವುದು ಬೆಳಕಿಗೆ ಬಂದಿದೆ. ದೇವಸ್ಥಾನದಲ್ಲಿ ದೇಣಿಗೆ ನೀಡಲು ಭಕ್ತ ಮೊಬೈಲ್‌ನಿಂದ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿದಾಗ, ದೇಣಿಗೆ ಮೊತ್ತವನ್ನು ನೇರವಾಗಿ ಆ ವ್ಯಕ್ತಿಯ ಖಾತೆಗೆ ವರ್ಗಾವಣೆಯಾಗಿರುವುದು ಗೊತ್ತಾಗಿದೆ.

ಇದನ್ನೂ ಓದಿ: ‌Richard Lugner: 2 ತಿಂಗಳ ಹಿಂದಷ್ಟೇ 6ನೇ ಮದುವೆಯಾಗಿದ್ದ 91 ವರ್ಷದ ಬಿಲಿಯನೇರ್ ನಿಧನ

ಬಳಿಕ ಪೊಲೀಸರು ತನಿಖೆ ನಡೆಸಿ ವ್ಯಕ್ತಿಯನ್ನು ಬಂಧಿಸಿದ್ದಾರೆ. ಅಲ್ಲಿ ಹಲವು ದೇವಸ್ಥಾನಗಳಿಗೆ ಈ ರೀತಿ ವಂಚನೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಈ ಪ್ರಕರಣದ ತನಿಖೆ ನಡೆಸುತ್ತಿರುವವರು ಆರೋಪಿಯು ಇಲ್ಲಿಯವರೆಗೆ ಎಲ್ಲಾ ಕದ್ದ ಹಣವನ್ನು ಹಿಂದಿರುಗಿಸಿದ್ದಾನೆ. ಈ ಪ್ರಕರಣವು ಪ್ರಪಂಚದಾದ್ಯಂತ ಇದೀಗ ಭಾರೀ ಚರ್ಚೆಯಲ್ಲಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?