AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈತ ಡಿಜಿಟಲ್​​ ಕಳ್ಳ, ದೇವರ ಹುಂಡಿ ಮೇಲೆ ತನ್ನ QR Code ಅಂಟಿಸಿ ಲಕ್ಷ ಲಕ್ಷ ದೋಚಿದ್ದ ಖದೀಮ

ದೇವಸ್ಥಾನದ ಹುಂಡಿಯ ಕ್ಯೂಆರ್ ಕೋಡ್ ಮೇಲೆ ತನ್ನ ವೈಯಕ್ತಿಕ ಬ್ಯಾಂಕ್ ಖಾತೆಯ ಕ್ಯೂಆರ್ ಕೋಡ್‌ ಅಂಟಿಸಿ ಹಣ ದೋಚುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಖದೀಮ ಪ್ರತಿಷ್ಠಿತ ವಿಶ್ವವಿದ್ಯಾಲಯದಿಂದ ಕಾನೂನಿನಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾನೆ ಎಂದು ವರದಿಗಳು ಸೂಚಿಸಿವೆ.

ಈತ ಡಿಜಿಟಲ್​​ ಕಳ್ಳ, ದೇವರ ಹುಂಡಿ ಮೇಲೆ ತನ್ನ QR Code ಅಂಟಿಸಿ ಲಕ್ಷ ಲಕ್ಷ ದೋಚಿದ್ದ ಖದೀಮ
ಅಕ್ಷತಾ ವರ್ಕಾಡಿ
|

Updated on: Aug 17, 2024 | 5:03 PM

Share

ಚೀನಾ: ಹಲವಾರು ಬೌದ್ಧ ದೇವಾಲಯಗಳ ಹೆಸರಿನಲ್ಲಿ ದೇಣಿಗೆ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಚೀನಾದ ವ್ಯಕ್ತಿಯನ್ನು ಬಂಧಿಸಲಾಗಿದೆ. ವರದಿಗಳ ಪ್ರಕಾರ, ಈತ ದೇವಸ್ಥಾನದ ಹುಂಡಿಯ ಕ್ಯೂಆರ್ ಕೋಡ್ ಅನ್ನು ಮೇಲೆ ತನ್ನ ವೈಯಕ್ತಿಕ ಬ್ಯಾಂಕ್ ಖಾತೆಯ ಕ್ಯೂಆರ್ ಕೋಡ್‌ ಅಂಟಿಸಿದ್ದ ಎಂದು ತಿಳಿದುಬಂದಿದೆ. ಇದಲ್ಲದೇ ಮನೆಮನೆ ಭೇಟಿ ನೀಡಿ ದೇವಾಲಯಗಳ ದೇಣಿಗೆಯ ಹೆಸರಿನಲ್ಲಿ ತನ್ನ ಖಾತೆಗೆ ಹಣ ವರ್ಗಾಯಿಸುತ್ತಿದ್ದ. ಇದೀಗ ಈತನ ಕಳ್ಳಾಟ ಬೆಳಕಿಗೆ ಬಂದಿದೆ.

ಈ ಖದೀಮ ಪ್ರತಿಷ್ಠಿತ ವಿಶ್ವವಿದ್ಯಾಲಯದಿಂದ ಕಾನೂನಿನಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾನೆ ಎಂದು ವರದಿಗಳು ಸೂಚಿಸಿವೆ. ಈ ವರ್ಷ ಶಾಂಕ್ಸಿ, ಸಿಚುವಾನ್ ಮತ್ತು ಚಾಂಗ್‌ಕಿಂಗ್ ಪ್ರಾಂತ್ಯಗಳಲ್ಲಿನ ದೇವಾಲಯಗಳಿಂದ 30,000 ಯುವಾನ್ (ಅಂದಾಜು ₹ 3.5 ಲಕ್ಷ) ಕದ್ದಿರುವುದಾಗಿ ತನಿಖೆಯ ವೇಳೆ ಒಪ್ಪಿಕೊಂಡಿದ್ದಾನೆ. ತನಿಖಾಧಿಕಾರಿಗಳ ಪ್ರಕಾರ, ಈತ ಕದ್ದ ಎಲ್ಲಾ ಹಣವನ್ನು ಹಿಂದಿರುಗಿಸಿರುವುದಾಗಿ ತಿಳಿದುಬಂದಿದೆ.

ಕೆಲವು ದಿನಗಳ ನಂತರ ದೇವಸ್ಥಾನದ ಆಡಳಿತ ಮಂಡಳಿಯವರು ಇದನ್ನು ಅರಿತು ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಶಾಂಕ್ಸಿ ಪೊಲೀಸರು ತನಿಖೆ ನಡೆಸಿ ದೇವಸ್ಥಾನದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಇದಾದ ಬಳಿಕ ಈ ವ್ಯಕ್ತಿ ಕೆಲ ದಿನಗಳ ಹಿಂದೆ ಬಂದಿದ್ದು, ವಿಗ್ರಹದ ಮುಂದೆ ನಮಸ್ಕರಿಸಿ ಬಳಿಕ ಕಾಣಿಕೆ ಡಬ್ಬದ ಮೇಲೆ ಕ್ಯೂಆರ್ ಹಾಕಿರುವುದು ಬೆಳಕಿಗೆ ಬಂದಿದೆ. ದೇವಸ್ಥಾನದಲ್ಲಿ ದೇಣಿಗೆ ನೀಡಲು ಭಕ್ತ ಮೊಬೈಲ್‌ನಿಂದ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿದಾಗ, ದೇಣಿಗೆ ಮೊತ್ತವನ್ನು ನೇರವಾಗಿ ಆ ವ್ಯಕ್ತಿಯ ಖಾತೆಗೆ ವರ್ಗಾವಣೆಯಾಗಿರುವುದು ಗೊತ್ತಾಗಿದೆ.

ಇದನ್ನೂ ಓದಿ: ‌Richard Lugner: 2 ತಿಂಗಳ ಹಿಂದಷ್ಟೇ 6ನೇ ಮದುವೆಯಾಗಿದ್ದ 91 ವರ್ಷದ ಬಿಲಿಯನೇರ್ ನಿಧನ

ಬಳಿಕ ಪೊಲೀಸರು ತನಿಖೆ ನಡೆಸಿ ವ್ಯಕ್ತಿಯನ್ನು ಬಂಧಿಸಿದ್ದಾರೆ. ಅಲ್ಲಿ ಹಲವು ದೇವಸ್ಥಾನಗಳಿಗೆ ಈ ರೀತಿ ವಂಚನೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಈ ಪ್ರಕರಣದ ತನಿಖೆ ನಡೆಸುತ್ತಿರುವವರು ಆರೋಪಿಯು ಇಲ್ಲಿಯವರೆಗೆ ಎಲ್ಲಾ ಕದ್ದ ಹಣವನ್ನು ಹಿಂದಿರುಗಿಸಿದ್ದಾನೆ. ಈ ಪ್ರಕರಣವು ಪ್ರಪಂಚದಾದ್ಯಂತ ಇದೀಗ ಭಾರೀ ಚರ್ಚೆಯಲ್ಲಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು