AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಸ್ತ್ರಚಿಕಿತ್ಸೆಯ ನಂತರ ಆಂಬ್ಯುಲೆನ್ಸ್‌ನಲ್ಲಿ ಮಲಗಿಕೊಂಡು ಪರೀಕ್ಷೆ ಬರೆದ ಎಸೆಸೆಲ್ಸಿ ವಿದ್ಯಾರ್ಥಿನಿ

10 ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಆಂಬ್ಯುಲೆನ್ಸ್‌ನಲ್ಲಿ ಮಲಗಿಕೊಂಡು ಪರೀಕ್ಷೆ ಬರೆದಿರುವ ಘಟನೆ ಮುಂಬಯಿಯ ಬಾಂದ್ರಾದಲ್ಲಿ ನಡೆದಿದೆ.

ಶಸ್ತ್ರಚಿಕಿತ್ಸೆಯ ನಂತರ ಆಂಬ್ಯುಲೆನ್ಸ್‌ನಲ್ಲಿ ಮಲಗಿಕೊಂಡು ಪರೀಕ್ಷೆ ಬರೆದ ಎಸೆಸೆಲ್ಸಿ ವಿದ್ಯಾರ್ಥಿನಿ
ವಿದ್ಯಾರ್ಥಿನಿ ಮುಬಾಶಿರಾ ಸಾದಿಕ್ ಸಯ್ಯದ್ Image Credit source: Anandabazar
ಅಕ್ಷತಾ ವರ್ಕಾಡಿ
|

Updated on:Mar 21, 2023 | 11:59 AM

Share

ಮುಂಬಯಿ: 10 ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಆಂಬ್ಯುಲೆನ್ಸ್‌ನಲ್ಲಿ ಮಲಗಿಕೊಂಡು ಪರೀಕ್ಷೆ ಬರೆದಿರುವ ಘಟನೆ ಮುಂಬಯಿಯ ಬಾಂದ್ರಾದಲ್ಲಿ ನಡೆದಿದೆ. ಶುಕ್ರವಾರ ಒಂದು ಪರೀಕ್ಷೆ ಬರೆದು ಮುಗಿಸಿ ಬರುತ್ತಿದ್ದ ಅಂಜುಮನ್-ಐ-ಇಸ್ಲಾಂ ಶಾಲೆಯ ವಿದ್ಯಾರ್ಥಿನಿ ಮುಬಾಶಿರಾ ಸಾದಿಕ್ ಸಯ್ಯದ್ ರಸ್ತೆ ದಾಟುತ್ತಿದ್ದಾಗ ಹಿಲ್ ರೋಡ್‌ನ ಸೇಂಟ್ ಜೋಸೆಫ್ ಕಾನ್ವೆಂಟ್ ಬಳಿ ಮಧ್ಯಾಹ್ನ 1.30 ರ ಸುಮಾರಿಗೆ ಕಾರು ಡಿಕ್ಕಿ . ಆಕೆಯ ಎಡ ಪಾದಕ್ಕೆ ಗಂಭೀರವಾದ ಗಾಯಗಳಾಗಿದ್ದು, ಅದೇ ದಿನ ಆಕೆಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ.

ಅಪಘಾತ ಪರೀಕ್ಷಾ ಕೇಂದ್ರವಾದ ಸೇಂಟ್ ಸ್ಟಾನಿಸ್ಲಾಸ್ ಹೈಸ್ಕೂಲ್ ಬಳಿ ಸಂಭವಿಸಿದ್ದು, ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಿದ್ದೇವೆ, ಅವರು ತಕ್ಷಣ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ಪರೀಕ್ಷಾ ಕೇಂದ್ರದ ಮುಖ್ಯಸ್ಥರಾದ ಸಂದೀಪ್ ಕರ್ಮಾಲೆ ಹೇಳಿಕೆ ನೀಡಿದ್ದಾರೆ.

ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದ ಮುಬಾಶಿರಾ ಶಸ್ತ್ರಚಿಕಿತ್ಸೆಗೂ ಮುನ್ನವೇ ಮುಂಬರುವ ಪರೀಕ್ಷೆಯನ್ನು ನಾನು ಬರೆಯಲೇ ಬೇಕು ಎಂದು ಶಾಲಾ ಶಿಕ್ಷಕರಿಗೆ ಹೇಳಿದರು. ನಂತರ ಶಾಲೆಯ ಆಡಳಿತ ಮಂಡಳಿ ಆಯ್ಕೆಗೆ ಪರೀಕ್ಷೆ ಬರೆಯಲು ಅನುಮತಿ ನೀಡಿದೆ. ವಿದ್ಯಾರ್ಥಿ ಮುಬಾಶಿರಾ ಕುಟುಂಬವು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಶಾಲಾ ಶಿಕ್ಷಕರು ತಕ್ಷಣ ನೆರವು ನೀಡಿದ್ದಾರೆ. ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

ಇದನ್ನೂ ಓದಿ: ಪರ್ಷಿಯನ್​​ ಹೊಸ ವರ್ಷಕ್ಕೆ ಶುಭ ಹಾರೈಸಿದ ಗೂಗಲ್, ವಿಶೇಷ ಡೂಡಲ್​​ನ ಬಗ್ಗೆ ಇಲ್ಲಿದೆ ಮಾಹಿತಿ

ನನ್ನ ಶಿಕ್ಷಕರು ನನ್ನನ್ನು ಪರೀಕ್ಷೆಗೆ ಬರುವಂತೆ ಪ್ರೋತ್ಸಾಹಿಸಿದರು. ಅಲ್ಲದೆ, ನನ್ನ ಹೆತ್ತವರು ನನಗೆ ಸಾಕಷ್ಟು ಬೆಂಬಲವನ್ನು ನೀಡಿದ್ದಾರೆ. ನನಗೆ ಸಹಾಯ ಮಾಡಿದ ನನ್ನ ಎಲ್ಲಾ ಶಿಕ್ಷಕರಿಗೆ ಮತ್ತು ನನಗೆ ಆಂಬ್ಯುಲೆನ್ಸ್ ಒದಗಿಸಿದ್ದಕ್ಕಾಗಿ ಕ್ಯಾನ್ಸರ್ ನೆರವು ಮತ್ತು ಸಂಶೋಧನಾ ಪ್ರತಿಷ್ಠಾನಕ್ಕೆ ನಾನು ಧನ್ಯವಾದ ಹೇಳುತ್ತೇನೆ. ಈಗ ಅದೇ ರೀತಿ ಮುಂದಿನ ಪತ್ರಿಕೆಯನ್ನು ಬರೆಯಲಿದ್ದೇನೆ ಎಂದು ಮುಬಾಶಿರಾ ಹೇಳಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 11:58 am, Tue, 21 March 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ