AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬೆಂಕಿ ಅವಘಡದಿಂದ ಮನೆಯನ್ನು ರಕ್ಷಣೆ ಮಾಡಿದ ಶ್ವಾನ, ಹೇಗಿದೆ ನೋಡಿ ಇದರ ಬುದ್ಧಿವಂತಿಕೆ

ಶ್ವಾನಗಳು ಈ ಭೂಮಿಯ ಅತ್ಯಂತ ನಿಷ್ಠಾವಂತ ಪ್ರಾಣಿಗಳು. ಮನುಷ್ಯನ ಉತ್ತಮ ಸ್ನೇಹಿತನಾಗಿರುವ  ನಾಯಿಗಳು ಎಷ್ಟೋ ಬಾರಿ ತನ್ನ ಪ್ರಾಣವನ್ನೇ ಒತ್ತೆಯಿಟ್ಟು ತನ್ನ ಮಾಲೀಕನ ಪ್ರಾಣವನ್ನು ರಕ್ಷಿಸಿರುವಂತಹ ಉದಾಹರಣೆಗಳಿವೆ. ಇಂತಹ ಹೃದಯಸ್ಪರ್ಷಿ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುತ್ತವೆ. ಇದೀಗ ಅಂತಹದ್ದೇ ವಿಡಿಯೋವೊಂದು ವೈರಲ್ ಆಗಿದ್ದು, ಶ್ವಾನವೊಂದು ತನ್ನ ಬುದ್ಧಿವಂತಿಕೆಯಿಂದ  ಬೆಂಕಿ ಅವಘಡವನ್ನು ತಪ್ಪಿಸಿದೆ.

Viral Video: ಬೆಂಕಿ ಅವಘಡದಿಂದ ಮನೆಯನ್ನು ರಕ್ಷಣೆ ಮಾಡಿದ ಶ್ವಾನ, ಹೇಗಿದೆ ನೋಡಿ ಇದರ ಬುದ್ಧಿವಂತಿಕೆ
ವೈರಲ್​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Feb 19, 2024 | 2:11 PM

Share

ಶ್ವಾನಗಳನ್ನು  ಅತ್ಯಂತ ನಂಬಿಕೆಯ ಪ್ರಾಣಿಗಳು ಎಂದು ಕರೆಯಲಾಗುತ್ತದೆ. ಅವುಗಳು ನಂಬಿಕೆಯ  ಪ್ರಾಣಿಗಳು ಮಾತ್ರವಲ್ಲದೆ ಬುದ್ಧಿವಂತ ಪ್ರಾಣಿಗಳೂ ಕೂಡಾ ಹೌದು. ಅವುಗಳಿಗೆ ಮನುಷ್ಯರಂತೆ ಮಾತು ಬಾರದಿರಬಹುದು ಆದರೆ ಅವುಗಳು ತಮ್ಮ ವಾತ್ಸಲ್ಯ ಮತ್ತು ಮಾನವೀಯ  ಗುಣಗಳ ಮೂಲಕವೇ ಎಲ್ಲರ ಹೃದಯವನ್ನು ಗೆಲ್ಲುತ್ತವೆ. ಶ್ವಾನಗಳ ಮಾನವೀಯ ಗುಣ, ಬುದ್ಧಿವಂತಿಕೆಯ ಕುರಿತ ಹಲವಾರು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ಅಂತಹದ್ದೇ ವಿಡಿಯೋವೊಂದು ಹರಿದಾಡುತ್ತಿದ್ದು, ಶ್ವಾನವೊಂದು ತನ್ನ ಬುದ್ಧಿವಂತಿಕೆಯಿಂದ  ಭಾರಿ ದೊಡ್ಡ ಅವಘಡವನ್ನು ತಪ್ಪಿಸಿದೆ. ಈ ಶ್ವಾನದ ಸಮಯ ಪ್ರಜ್ಞೆ ಮತ್ತು ಬುದ್ಧಿವಂತಿಕೆಗೆ ನೆಟ್ಟಿಗರು ತಲೆ ಬಾಗಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಶ್ವಾನವೊಂದು ತನ್ನ ಬುದ್ಧಿವಂತಿಕೆಯಿಂದ ಮನೆಯನ್ನು ಬೆಂಕಿ ಅವಘಡದಿಂದ ರಕ್ಷಿಸುತ್ತಿರುವಂತಹ ದೃಶ್ಯವನ್ನು ಕಾಣಬಹುದು. ಈ ವಿಡಿಯೋವನ್ನು @sachkadwahai ಎಂಬ ಹೆಸರಿನ ಇನ್ಸ್ಟಾಗ್ರಾಮ್  ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ;

ವೈರಲ್ ವಿಡಿಯೋದಲ್ಲಿ ಶ್ವಾನವೊಂದು ಮನೆಯ ಹೊರಗಡೆ ನೆಮ್ಮದಿಯಾಗಿ ವಿಶ್ರಾಂತಿ ಪಡೆಯುತ್ತಿರುವುದನ್ನು ಕಾಣಬಹುದು. ಅಲ್ಲೇ ಸಮೀಪದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಒಂದನ್ನು ಮನೆಯವರು ಚಾರ್ಚ್ ಗೆ ಇಟ್ಟಿದ್ದರು.  ಆದರೆ ಇದ್ದಕ್ಕಿದ್ದಂತೆ ಎಲೆಕ್ಟ್ರಿಕ್ ಸ್ಕೂಟರ್ ಗೆ ಸಂಪರ್ಕಗೊಂಡಿರುವ ಎಕ್ಸ್ಟೆನ್ಶನ್ ಬೋರ್ಡ್ ಮೇಲೆ ಬೆಂಕಿ ಕಾಣಿಸಿಕೊಳ್ಳುತ್ತದೆ. ಬೆಂಕಿಯನ್ನು ಕಂಡು ಗಾಬರಿಗೊಂಡ ಶ್ವಾನ, ಈ ಬೆಂಕಿಯಿಂದ ನನ್ನ ಮಾಲೀಕರಿಗೆ ತೊಂದರೆಯಾಗುವ ಮೊದಲು ಅದನ್ನು ಆರಿಸಬೇಕು ಎನ್ನುತ್ತಾ, ತನ್ನ ಪ್ರಾಣವನ್ನೂ ಲೆಕ್ಕಿಸದೆ, ಓಡಿ ಹೋಗಿ, ಬೆಂಕಿ ಹಿಡಿದಂತಹ ಎಕ್ಸ್ಟೆನ್ಶನ್ ಬೋರ್ಡ್ ಅನ್ನು ಬಾಯಿಯಿಂದ ಕಚ್ಚಿ ಎಳೆಯುವ ಮೂಲಕ ಬೆಂಕಿ ಹರಡುವುದನ್ನು ತಪ್ಪಿಸುತ್ತದೆ.  ಹೀಗೆ ಈ ನಾಯಿ ತನ್ನ ಬುದ್ಧಿವಂತಿಕೆಯಿಂದ ಇಡೀ ಮನೆಯನ್ನು ಬೆಂಕಿ ಅವಘಡದಿಂದ ರಕ್ಷಿಸಿದೆ.  ಈ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ಇದು ಸಿಂಗಲ್ಸ್ ಕಷ್ಟ, ಗರ್ಲ್ ಫ್ರೆಂಡ್ ಇಲ್ಲ ಅದಕ್ಕೆ ಬಟ್ಟೆ ಅಂಗಡಿಯ ಗೊಂಬೆ ಜೊತೆ ಬೈಕ್ ರೈಡ್​​ 

ಮೂರು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 70 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಎರಡು ಸಾವಿರ ಲೈಕ್ಸ್ ಗಳನ್ನು ಪಡೆದುಕೊಂಡಿದೆ. ಹಾಗೂ ನೆಟ್ಟಿಗರು ಕಮೆಂಟ್ಸ್ ಮೂಲಕ ನಾಯಿಯ ಬುದ್ಧಿವಂತಿಕೆಯನ್ನು ಕೊಂಡಾಡಿದ್ದಾರೆ. ಒಬ್ಬ ಬಳಕೆದಾರರು ʼತುಂಬಾ ಸ್ಮಾರ್ಟ್ ಆಗಿದೆ ಈ ಶ್ವಾನʼ ಎಂಬ ಕಮೆಂಟ್ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಯಾರಾದರೂ ಈ ಶ್ವಾನದ ಸಹಾಯಕ್ಕೆ ಧಾವಿಸಬಹುದಿತ್ತಲ್ಲವೇʼ ಎಂದು ಹೇಳಿದ್ದಾರೆ.  ಮತ್ತೊಬ್ಬ ಬಳಕೆದಾರರು ʼಶ್ವಾನದ ಬುದ್ಧಿವಂತಿಕೆಯನ್ನು ಮೆಚ್ಚಲೇಬೇಕುʼ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?