AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video : ಬೆಡ್‌ರೂಮಿನ ಕರ್ಟನ್ ಮೇಲೆ ಹೆಡೆಯೆತ್ತಿ ಕುಳಿತ ಬುಸ್ ನಾಗಪ್ಪ

ಸಾಮಾನ್ಯವಾಗಿ ಮಳೆಗಾಲ ಬಂತೆಂದರೆ ಸಾಕು, ಈ ಹಾವುಗಳು ಮನೆಯೊಳಗೆ ಬರುವುದೇ ಹೆಚ್ಚು. ಸೈಲೆಂಟ್ ಆಗಿ ಮನೆಯೊಳಗೆ ಎಂಟ್ರಿ ಕೊಟ್ಟು ಶೂ, ಮನೆಯ ಮೂಲೆ ಮೂಲೆಗಳಲ್ಲಿ ಅವಿತು ಕುಳಿತುಬಿಡುತ್ತವೆ. ಆದರೆ ಇದೀಗ ದೈತ್ಯಾಕಾರದ ನಾಗರಹಾವೊಂದು ಮನೆಯೊಳಗೆ ಸದ್ದಿಲ್ಲದೇ ಬಂದು ಮಲಗುವ ಕೋಣೆಯಲ್ಲಿದ್ದ ಕರ್ಟನ್ ಮೇಲೆ ಹೆಡೆಯೆತ್ತಿ ಕುಳಿತುಕೊಂಡಿದೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಈ ದೃಶ್ಯವು ನೋಡುಗರ ಎದೆ ಝಲ್ ಎನ್ನುವಂತೆ ಮಾಡಿದೆ.

Video : ಬೆಡ್‌ರೂಮಿನ ಕರ್ಟನ್ ಮೇಲೆ ಹೆಡೆಯೆತ್ತಿ ಕುಳಿತ ಬುಸ್ ನಾಗಪ್ಪ
ಬೆಡ್‌ರೂಮಿನ ಕರ್ಟನ್ ಮೇಲೆ ಹೆಡೆಯೆತ್ತಿ ಕುಳಿತ ನಾಗರಹಾವುImage Credit source: Instagram
ಸಾಯಿನಂದಾ
|

Updated on: Jul 02, 2025 | 4:51 PM

Share

ನಾಗರಹಾವುಗಳೆಂದರೆ (cobra) ಎಂತಹವರು ಒಂದು ಕ್ಷಣ ಭಯ ಪಡುತ್ತಾರೆ. ತನ್ನ ಸುತ್ತಮುತ್ತಲಿನಲ್ಲಿ ಹಾವೊಂದು ಕಾಣಿಸಿಕೊಂಡ್ರೆ ಸಾಕು, ಎಷ್ಟೇ ಧೈರ್ಯವಂತನಾದ್ರೂ ಒಂದು ಕ್ಷಣ ಅಲ್ಲಿ ನಿಲ್ಲುವ ಧೈರ್ಯ ಮಾಡುವುದೇ ಇಲ್ಲ. ಇನ್ನು ಈ ಮಳೆಗಾಲದಲ್ಲಿ ಈ ಕ್ರಿಮಿಕೀಟಗಳ ಕಾಟ ಹೆಚ್ಚು. ಹೀಗಾಗಿ ಕೆಲವೊಮ್ಮೆ ಈ ವಿಷಕಾರಿ ಸರ್ಪಗಳು ಸದ್ದಿಲ್ಲದೇ ಮನೆಯೊಳಗೆ ಬರುತ್ತದೆ. ಶೂ, ಬೈಕ್, ಕಾರು ಸೇರಿದಂತೆ ಬೆಚ್ಚಗಿನ ಸ್ಥಳಗಳಲ್ಲಿ ಅವಿತು ಕುಳಿತು ಆಶ್ರಯ ಪಡೆಯುತ್ತವೆ. ಆದರೆ ಇದೀಗ ನಾಗರಹಾವೊಂದು ಬುಸುಗುಡುತ್ತಾ ಮನೆಯ ಬೆಡ್‌ರೂಮಿನ ಕರ್ಟನ್ ಮೇಲೆ ಕಾಣಿಸಿಕೊಂಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ (social media) ಹರಿದಾಡುತ್ತಿದೆ. ಹೀಗೆ ಹೆಡೆಯೆತ್ತಿ ನಿಂತ ನಾಗರಹಾವನ್ನು ಉರಗತಜ್ಞರು ರಕ್ಷಿಸಿದ್ದಾರೆ.

vishalsnakesaver ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಲಾದ ವಿಡಿಯೋದಲ್ಲಿ ದೈತ್ಯಗಾತ್ರದ ನಾಗರಹಾವೊಂದು ಬೆಡ್‌ರೂಮಿಗೆ ನುಗ್ಗಿ ಕಿಟಕಿಗೆ ಹಾಕಲಾದ ಕರ್ಟನ್ ಮೇಲೆ ಹತ್ತಿ ಹೆಡೆಯೆತ್ತಿ ಬುಸುಗುಡುತ್ತಾ ಕುಳಿತುಕೊಂಡಿರುವುದನ್ನು ನೀವಿಲ್ಲಿ ನೋಡಬಹುದು. ಈ ದೃಶ್ಯವನ್ನು ಮನೆಮಂದಿ ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ.

ಇದನ್ನೂ ಓದಿ
Image
Fact Check: ಆಗ್ರಾ ವಿಮಾನ ನಿಲ್ದಾಣದಲ್ಲಿ ಯಾವುದೇ ವಿಮಾನ ಅಪಘಾತವಾಗಿಲ್ಲ
Image
ಒಂದು ತಿಂಗಳಿನಿಂದ ಜೀವಂತ ಹುಳುಗಳನ್ನು ವಾಂತಿ ಮಾಡುತ್ತಿರುವ ಬಾಲಕಿ
Image
ಶಾಲೆಯ ಮೆಟ್ಟಿಲ ಮೇಲೆ ಕುಳಿತು ತೂಕಡಿಸಿದ ಪುಟಾಣಿ
Image
ಭಾರತದ ಪಾಸ್‌ಪೋರ್ಟ್ ನೋಡಿ ರೂಮ್​​​ ನೀಡಿದ ವಿಮಾನ ಸಂಸ್ಥೆ

ಇದನ್ನೂ ಓದಿ : Viral : 20 ವರ್ಷದ ನಂತರ ತಂದೆಯ ಧ್ವನಿ ಕೇಳಿದ ಬೆಂಗಳೂರಿನ ಯುವತಿ, ಕುಟುಂಬವನ್ನು ಪತ್ತೆ ಮಾಡಲು ಸಹಾಯ ಮಾಡಿದ ರೆಡ್ಡಿಟ್

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಈ ವಿಡಿಯೋ ಈವರೆಗೆ ಎಂಭತ್ತು ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು, ಬಳಕೆದಾರರೊಬ್ಬರು, ಈ ದೃಶ್ಯ ನೋಡುವುದಕ್ಕೆ ಭಯಂಕರವಾಗಿದೆ ಎಂದಿದ್ದಾರೆ. ಇನ್ನೊಬ್ಬರು, ಹರ ಹರ ಮಹಾದೇವ್ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ನಾಗರಹಾವುಗಳು ವಿಷಕಾರಿ, ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೆ ಕುತ್ತು ಗ್ಯಾರಂಟಿ ಎಂದಿದ್ದಾರೆ. ಇನ್ನು ಕೆಲವರು ಮನೆಯ ಮೂಲೆಗಳಿಗೆ ಕೈ ಹಾಕುವಾಗ ಅಥವಾ ಶೂ ಹಾಕಿಕೊಳ್ಳುವಾಗ ಸ್ವಲ್ಪ ಜಾಗರೂಕರಾಗಿರಿ ಎಂದು ಸಲಹೆ ನೀಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್