Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕರ್ತವ್ಯದಲ್ಲಿದ್ದ ಪೊಲೀಸ್​ಗೆ ಹಿಂದಿನಿಂದ ಬಂದು ಗುದ್ದಿದ ಗೂಳಿ; ಹಾರಿಬಿದ್ದು ಗಾಯಗೊಂಡ ಕಾನ್​ಸ್ಟೆಬಲ್​

ಪೊಲೀಸ್​ ಕಾನ್​ಸ್ಟೆಬಲ್​ ಜ್ಞಾನ್ ಸಿಂಗ್ ಅವರಿಗೆ ಅದೃಷ್ಟವಶಾತ್​ ಹೆಚ್ಚೇನೂ ಅಪಾಯ ಆಗಲಿಲ್ಲ ಎಂದು ಹೇಳಲಾಗಿದ್ದು, ಚಿಕಿತ್ಸೆ ಪಡೆದ ಅವರು ಆಸ್ಪತ್ರೆಯಿಂದ ಡಿಸ್​ಚಾರ್ಜ್ ಆಗಿದ್ದಾರೆ.

Video: ಕರ್ತವ್ಯದಲ್ಲಿದ್ದ ಪೊಲೀಸ್​ಗೆ ಹಿಂದಿನಿಂದ ಬಂದು ಗುದ್ದಿದ ಗೂಳಿ; ಹಾರಿಬಿದ್ದು ಗಾಯಗೊಂಡ ಕಾನ್​ಸ್ಟೆಬಲ್​
ಪೊಲೀಸ್​ಗೆ ಗೂಳಿ ಗುದ್ದಿರುವುದು
Follow us
TV9 Web
| Updated By: Lakshmi Hegde

Updated on: Apr 03, 2022 | 3:07 PM

ದೆಹಲಿ: ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಹಲವು ವಿಡಿಯೋಗಳು ಮೈ ನಡುಗಿಸುತ್ತವೆ. ಅದರಲ್ಲೊಂದು ಈಗ ವೈರಲ್​ ಆಗಿರೋ ಈ ವಿಡಿಯೋ. ದೆಹಲಿಯ ದಯಾಳ್​​ಪುರ ಎಂಬಲ್ಲಿರುವ ಶೇರ್​ಪುರದಲ್ಲಿ ಪೊಲೀಸ್​ ಕಾನ್​ಸ್ಟೆಬಲ್​ ಜ್ಞಾನ್ ಸಿಂಗ್ ಎಂಬುವರು ಕರ್ತವ್ಯ ನಿರ್ವಹಿಸುತ್ತಿದ್ದರು. ಅವರ ಪಾಡಿಗೆ ಕೆಲಸ ಮಾಡುತ್ತಿದ್ದ ಕಾನ್​ಸ್ಟೆಬಲ್​​ಗೆ ಹಿಂದಿನಿಂದ ಬಂದ ಗೂಳಿಯೊಂದು ಗುದ್ದಿದೆ. ಅವರಿಗೆ ಗೂಳಿ ಬಂದು ಗುದ್ದುವವರೆಗೂ ಅಲ್ಲಿ ಗೂಳಿ ಇದ್ದಿದ್ದೇ ಗೊತ್ತಿಲ್ಲ. ಅದೆಷ್ಟರ ಮಟ್ಟಿಗೆ ಜೋರಾಗಿ ಗುದ್ದಿದೆಯೆಂದರೆ, ಜ್ಞಾನ್ ಸಿಂಗ್ ಗಾಳಿಯಲ್ಲಿ ಸ್ವಲ್ಪ ದೂರ ಹಾರಿ ಹೋಗಿ ಕೆಳಗೆ ಬಿದ್ದಿದ್ದಾರೆ. ಬಳಿಕ ಅಲ್ಲಿಯೇ ಸುತ್ತಲೂ ಇದ್ದ ಜನರು, ಡ್ಯೂಟಿಯಲ್ಲಿದ್ದ ಇತರ ಪೊಲೀಸರು ಆಗಮಿಸಿ ಜ್ಞಾನ್ ಸಿಂಗ್​ರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಪೊಲೀಸ್​ ಕಾನ್​ಸ್ಟೆಬಲ್​ ಜ್ಞಾನ್ ಸಿಂಗ್ ಅವರಿಗೆ ಅದೃಷ್ಟವಶಾತ್​ ಹೆಚ್ಚೇನೂ ಅಪಾಯ ಆಗಲಿಲ್ಲ ಎಂದು ಹೇಳಲಾಗಿದ್ದು, ಚಿಕಿತ್ಸೆ ಪಡೆದ ಅವರು ಆಸ್ಪತ್ರೆಯಿಂದ ಡಿಸ್​ಚಾರ್ಜ್ ಆಗಿದ್ದಾರೆ. ಹೀಗೆ ಬೀಡಾಡಿ ಗೂಳಿಗಳು ದಾಳಿ ಮಾಡುವುದು ಇದೇ ಮೊದಲೇನೂ ಅಲ್ಲ. ಕಳೆದ ವರ್ಷ ಗುಜರಾತ್​​ನ ಭಾವನಗರದಲ್ಲಿ ಇಂಥದ್ದೇ ಒಂದು ಘಟನೆ ನಡೆದಿತ್ತು. ವ್ಯಕ್ತಿಯೊಬ್ಬನ ಮೇಲೆ ಗೂಳಿ ದಾಳಿ ನಡೆಸಿ ಅವರೂ ಕೂಡ ಗಂಭೀರ ಗಾಯಗೊಂಡಿದ್ದರು.

ಇದನ್ನೂ ಓದಿ: ಫ್ಲ್ಯಾಶ್ ಮಾಬ್‌ನಲ್ಲಿ ವಿದ್ಯಾರ್ಥಿಗಳೊಂದಿಗೆ ಸಖತ್​ ಹೆಜ್ಜೆ ಹಾಕಿದ ಕೇರಳ ಜಿಲ್ಲಾಧಿಕಾರಿ; ಇಲ್ಲಿದೆ ವೈರಲ್ ವಿಡಿಯೋ

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ