AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕರ್ತವ್ಯದಲ್ಲಿದ್ದ ಪೊಲೀಸ್​ಗೆ ಹಿಂದಿನಿಂದ ಬಂದು ಗುದ್ದಿದ ಗೂಳಿ; ಹಾರಿಬಿದ್ದು ಗಾಯಗೊಂಡ ಕಾನ್​ಸ್ಟೆಬಲ್​

ಪೊಲೀಸ್​ ಕಾನ್​ಸ್ಟೆಬಲ್​ ಜ್ಞಾನ್ ಸಿಂಗ್ ಅವರಿಗೆ ಅದೃಷ್ಟವಶಾತ್​ ಹೆಚ್ಚೇನೂ ಅಪಾಯ ಆಗಲಿಲ್ಲ ಎಂದು ಹೇಳಲಾಗಿದ್ದು, ಚಿಕಿತ್ಸೆ ಪಡೆದ ಅವರು ಆಸ್ಪತ್ರೆಯಿಂದ ಡಿಸ್​ಚಾರ್ಜ್ ಆಗಿದ್ದಾರೆ.

Video: ಕರ್ತವ್ಯದಲ್ಲಿದ್ದ ಪೊಲೀಸ್​ಗೆ ಹಿಂದಿನಿಂದ ಬಂದು ಗುದ್ದಿದ ಗೂಳಿ; ಹಾರಿಬಿದ್ದು ಗಾಯಗೊಂಡ ಕಾನ್​ಸ್ಟೆಬಲ್​
ಪೊಲೀಸ್​ಗೆ ಗೂಳಿ ಗುದ್ದಿರುವುದು
TV9 Web
| Updated By: Lakshmi Hegde|

Updated on: Apr 03, 2022 | 3:07 PM

Share

ದೆಹಲಿ: ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಹಲವು ವಿಡಿಯೋಗಳು ಮೈ ನಡುಗಿಸುತ್ತವೆ. ಅದರಲ್ಲೊಂದು ಈಗ ವೈರಲ್​ ಆಗಿರೋ ಈ ವಿಡಿಯೋ. ದೆಹಲಿಯ ದಯಾಳ್​​ಪುರ ಎಂಬಲ್ಲಿರುವ ಶೇರ್​ಪುರದಲ್ಲಿ ಪೊಲೀಸ್​ ಕಾನ್​ಸ್ಟೆಬಲ್​ ಜ್ಞಾನ್ ಸಿಂಗ್ ಎಂಬುವರು ಕರ್ತವ್ಯ ನಿರ್ವಹಿಸುತ್ತಿದ್ದರು. ಅವರ ಪಾಡಿಗೆ ಕೆಲಸ ಮಾಡುತ್ತಿದ್ದ ಕಾನ್​ಸ್ಟೆಬಲ್​​ಗೆ ಹಿಂದಿನಿಂದ ಬಂದ ಗೂಳಿಯೊಂದು ಗುದ್ದಿದೆ. ಅವರಿಗೆ ಗೂಳಿ ಬಂದು ಗುದ್ದುವವರೆಗೂ ಅಲ್ಲಿ ಗೂಳಿ ಇದ್ದಿದ್ದೇ ಗೊತ್ತಿಲ್ಲ. ಅದೆಷ್ಟರ ಮಟ್ಟಿಗೆ ಜೋರಾಗಿ ಗುದ್ದಿದೆಯೆಂದರೆ, ಜ್ಞಾನ್ ಸಿಂಗ್ ಗಾಳಿಯಲ್ಲಿ ಸ್ವಲ್ಪ ದೂರ ಹಾರಿ ಹೋಗಿ ಕೆಳಗೆ ಬಿದ್ದಿದ್ದಾರೆ. ಬಳಿಕ ಅಲ್ಲಿಯೇ ಸುತ್ತಲೂ ಇದ್ದ ಜನರು, ಡ್ಯೂಟಿಯಲ್ಲಿದ್ದ ಇತರ ಪೊಲೀಸರು ಆಗಮಿಸಿ ಜ್ಞಾನ್ ಸಿಂಗ್​ರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಪೊಲೀಸ್​ ಕಾನ್​ಸ್ಟೆಬಲ್​ ಜ್ಞಾನ್ ಸಿಂಗ್ ಅವರಿಗೆ ಅದೃಷ್ಟವಶಾತ್​ ಹೆಚ್ಚೇನೂ ಅಪಾಯ ಆಗಲಿಲ್ಲ ಎಂದು ಹೇಳಲಾಗಿದ್ದು, ಚಿಕಿತ್ಸೆ ಪಡೆದ ಅವರು ಆಸ್ಪತ್ರೆಯಿಂದ ಡಿಸ್​ಚಾರ್ಜ್ ಆಗಿದ್ದಾರೆ. ಹೀಗೆ ಬೀಡಾಡಿ ಗೂಳಿಗಳು ದಾಳಿ ಮಾಡುವುದು ಇದೇ ಮೊದಲೇನೂ ಅಲ್ಲ. ಕಳೆದ ವರ್ಷ ಗುಜರಾತ್​​ನ ಭಾವನಗರದಲ್ಲಿ ಇಂಥದ್ದೇ ಒಂದು ಘಟನೆ ನಡೆದಿತ್ತು. ವ್ಯಕ್ತಿಯೊಬ್ಬನ ಮೇಲೆ ಗೂಳಿ ದಾಳಿ ನಡೆಸಿ ಅವರೂ ಕೂಡ ಗಂಭೀರ ಗಾಯಗೊಂಡಿದ್ದರು.

ಇದನ್ನೂ ಓದಿ: ಫ್ಲ್ಯಾಶ್ ಮಾಬ್‌ನಲ್ಲಿ ವಿದ್ಯಾರ್ಥಿಗಳೊಂದಿಗೆ ಸಖತ್​ ಹೆಜ್ಜೆ ಹಾಕಿದ ಕೇರಳ ಜಿಲ್ಲಾಧಿಕಾರಿ; ಇಲ್ಲಿದೆ ವೈರಲ್ ವಿಡಿಯೋ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?